ದಿಬ್ಬಣದ ಬಸ್‌ ಪಲ್ಟಿ: 10 ಜನರಿಗೆ ಗಂಭೀರ ಗಾಯ


Team Udayavani, Jun 20, 2019, 3:39 PM IST

hasan-tdy-4..

ಸಕಲೇಶಪುರ ತಾಲೂಕಿನ ಆನೆಮಹಲ್ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಖಾಸಗಿ ಬಸ್ಸೊಂದು ಅಪಘಾತಕ್ಕೀಡಾಗಿದೆ.

ಸಕಲೇಶಪುರ: ಖಾಸಗಿ ಬಸ್‌ ಚಾಲಕನ ಅಜಾರೂಗತೆಯಿಂದಾಗಿ ಬಸ್‌ ಪಲ್ಟಿಯಾಗಿ ಮದುವೆಗೆಂದು ಹೊರಟ ದಿಬ್ಬಣ ಆಸ್ಪತ್ರೆ ಸೇರಿರುವ ಘಟನೆ ತಾಲೂಕಿನಲ್ಲಿ ಬುಧವಾರ ನಡೆದಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನಿಡಘಟ್ಟ ಗ್ರಾಮದ ಸಿದ್ದಲಿಂಗಸ್ವಾಮಿ ಹಾಗೂ ಕನಕಪುರ ಜಿಲ್ಲೆ ಸಾತನೂರು ಸಮೀಪ ಚಿಕ್ಕ ಹಾಲಳ್ಳಿಯ ಕೀರ್ತಿ ಎಂಬುವರ ವಿವಾಹ ಮಹೋತ್ಸವ ಧರ್ಮಸ್ಥಳದಲ್ಲಿ ನಿಶ್ಚಿತವಾಗಿದ್ದು ಈ ಹಿನ್ನೆಲೆಯಲ್ಲಿ ಹುಡುಗನ ಸಂಬಂಧಿಕರು ಉದಯರಂಗ ಟ್ರಾನ್ಸ್‌ಪೋರ್ಟ್‌ನ ಖಾಸಗಿ ಬಸ್‌ನಲ್ಲಿ ಧರ್ಮಸ್ಥಳಕ್ಕೆ ಮದುವೆಗೆಂದು ತೆರಳುತ್ತಿದ್ದರು. ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಆನೆಮಹಲ್ ಗ್ರಾಮದ ದುರ್ಗಾಂಬ ರೈಸ್‌ ಮಿಲ್ ಸಮೀಪ ಚಾಲಕ ವೇಗವಾಗಿ ಬಸ್‌ ಚಲಾಯಿಸಿದ್ದು ತಿರುವಿನಲ್ಲಿ ಬಸ್‌ ನಿಯಂತ್ರಣಕ್ಕೆ ಸಿಗದ ಕಾರಣ ಬಸ್‌ ಮಗುಚಿ ಬಿದ್ದಿದೆ. ಬಸ್‌ ಅಪಘಾತಕ್ಕೆ ಈಡಾದ ಕಾರಣ ಬಸ್‌ನಲ್ಲಿದ್ದ 54 ಜನರಲ್ಲಿ ಸುಮಾರು 8ರಿಂದ 10 ಮಂದಿಗೆ ಗಂಭೀರ ಪೆಟ್ಟು ಬಿದ್ದಿದ್ದು ಬಾಕಿ ಉಳಿದವರಿಗೆ ಸಣ್ಣಪುಟ್ಟ ಪೆಟ್ಟು ಬಿದ್ದಿದೆ. ಗಾಯಾಳುಗಳಿಗೆ ಪಟ್ಟಣದ ಕ್ರಾಫ‌ರ್ಡ್‌ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಗಂಭೀರ ಗಾಯಗೊಂಡ ಚನ್ನಯ್ಯ, ಸಿದ್ದರಾಜು, ಶಿವರಾಜು, ಮಲ್ಲಮ್ಮ, ಶಿವಮ್ಮ ಎಂಬುವರನ್ನು ಹಾಸನದ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆ ನೀಡಲು ಆ್ಯಂಬುಲೆನ್ಸ್‌ನಲ್ಲಿ ಕಳುಹಿಸಲಾಯಿತು. ಬಹುತೇಕರಿಗೆ ಬಲಗೈ, ಹಣೆ ಹಾಗೂ ತಲೆಗೆ ಪೆಟ್ಟು ಬಿದ್ದಿದೆ. ಆನೆಮಹಲ್ ಗ್ರಾಮಸ್ಥರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಕ್ರಾಫ‌ರ್ಡ್‌ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಸಹ ತುರ್ತು ಚಿಕಿತ್ಸೆ ನೀಡಿದರು.

ವರ ಸಿದ್ದಲಿಂಗಸ್ವಾಮಿ ಕಾರಿನಲ್ಲಿ ತನ್ನ ತಾಯಿ ಯೊಂದಿಗೆ ತೆರಳಿದ್ದರಿಂದ ಅಪಾಯದಿಂದ ಪಾರಾಗಿ ದ್ದಾನೆ. ವಧು ಕೀರ್ತಿ ಮನೆಯವರು ಬೇರೆ ವಾಹನ ಗಳಲ್ಲಿ ಧರ್ಮಸ್ಥಳಕ್ಕೆ ತೆರಳಿದ್ದರಿಂದ ಯಾವುದೇ ಅಪಾಯವಾಗಿಲ್ಲ. ಘಟನೆಯಿಂದ ಕೆಲ ಸಮಯ ರಾಷ್ಟ್ರೀಯಯ ಹೆದ್ದಾರಿ 75ರಲ್ಲಿ ಸಂಚಾರ ಅಸ್ತವ್ಯಸ್ತ ಗೊಂಡಿತ್ತು. ನಗರ ಠಾಣೆಯ ಪಿಎಸ್‌ಐ ರಾಘವೇಂದ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲು ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.