ಶಿರಾಡಿ ಘಾಟ್ನಲ್ಲಿ ಬಸ್ ಸಂಚಾರ ಆರಂಭ
Team Udayavani, Oct 4, 2018, 6:50 AM IST
ಸಕಲೇಶಪುರ: ಶಿರಾಡಿ ಘಾಟ್ನಲ್ಲಿ ಪ್ರಯಾಣಿಕರ ಬಸ್ಗಳ ಸಂಚಾರಕ್ಕೆ ಬುಧವಾರದಿಂದ ಅವಕಾಶ ನೀಡಿದ್ದರಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಹೋಗಲು ಪ್ರಯಾಣಿಕರಿಗೆ ಅನುಕೂಲವಾಗಿದೆ.
ಕಳೆದ ಜೂನ್, ಜುಲೈ, ಆಗಸ್ಟ್ ಮಾಹೆಯಲ್ಲಿ ಸುರಿದ ವ್ಯಾಪಕ ಮಳೆಯಿಂದಾಗಿ ಶಿರಾಡಿ ಘಾಟ್ನಲ್ಲಿ ಅಲ್ಲಲ್ಲಿ ಭೂ ಕುಸಿತ ಉಂಟಾಗಿ ರಸ್ತೆಯನ್ನು ಬಂದ್ ಮಾಡಲಾಗಿತ್ತು. ಕಳೆದ ಸೆಪ್ಟೆಂಬರ್ ಮೊದಲ ವಾರದಿಂದ ಲಘು ವಾಹನಗಳಿಗೆ ಶಿರಾಡಿಯಲ್ಲಿ ಸಂಚರಿಸಲು ಅವಕಾಶ ನೀಡಲಾಗಿದ್ದು ಬಸ್ಗಳ ಸಂಚಾರಕ್ಕೆ ಅವಕಾಶ ನೀಡುವಂತೆ ಸಾರ್ವಜನಿಕ ವಲಯದಿಂದ ಒತ್ತಡ ಬಂದಿದ್ದರಿಂದ ಅ.3 ರಿಂದ ಶಿರಾಡಿ ಘಾಟ್ನಲ್ಲಿ ಪ್ರಯಾಣಿಕರ ವಾಹನಗಳ ಸಂಚಾರಕ್ಕೆ ಅವಕಾಶ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಮಾಡಿದ್ದರು.
ಇದರಿಂದ ದಕ್ಷಿಣ ಕನ್ನಡದ ಪುಣ್ಯ ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಹೋಗಲು ಭಕ್ತಾದಿಗಳಿಗೆ ಬಹಳ ಅನೂಕೂಲವಾಗುತ್ತಿದೆ. ಜೊತೆಗೆ ದಕ್ಷಿಣ ಕನ್ನಡದ ವಿವಿಧ ವಿದ್ಯಾ ಸಂಸ್ಥೆಗಳಲ್ಲಿ ಓದುತ್ತಿರುವ ಸಕಲೇಶಪುರ ತಾಲೂಕಿನ
ವಿದ್ಯಾರ್ಥಿಗಳು ಮತ್ತು ಪೋಷಕರಿಗೂ ಸಹ ಬಹಳ ಅನುಕೂಲವಾಗುತ್ತಿದ್ದು ಜೊತೆಗೆ ಬೆಂಗಳೂರು ಮಂಗಳೂರು ನಡುವೆ ವ್ಯಾಪಾರ, ಉದ್ಯೋಗ ಮತ್ತಿತರ ಉದ್ದೇಶಗಳಿಂದ ತಿರುಗಾಡುವವರಿಗೂ ಸಹ ಅನುಕೂಲವಾಗುತ್ತಿದೆ. ಇದೇ ವೇಳೆ ಭಾರಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡುವ ನಿಟ್ಟಿನಲ್ಲಿ ಚಿಂತನೆ ಮಾಡಲಾಗುತ್ತಿದ್ದು ಇನ್ನು ಕೆಲವು ದಿನಗಳಲ್ಲಿ ಶಿರಾಡಿಯಲ್ಲಿ ಬಾರಿ ವಾಹನಗಳ ಸಂಚಾರ ಸಹ ಆರಂಭಗೊಳ್ಳುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು