ಪೊಲೀಸರೆಂದು ವಂಚಿಸುತ್ತಿದ್ದವರ ಸೆರೆ
Team Udayavani, May 6, 2018, 4:34 PM IST
ತಿಪಟೂರು: ಪೊಲೀಸರು, ಲೋಕಾಯುಕ್ತರು, ಅಬಕಾರಿ ಅಧಿಕಾರಿಗಳು ಎಂದು ಹೇಳಿಕೊಂಡು ಉದ್ಯಮಿಗಳನ್ನು ಹಾಗೂ ಸಾರ್ವಜನಿಕರನ್ನು ವಂಚಿಸುತ್ತಿದ್ದ ತಾಲೂಕಿನ ಯುವಕರ ತಂಡವನ್ನು ಗ್ರಾಮಾಂತರ ಪೊಲೀಸರು ಶುಕ್ರವಾರ ಸಂಜೆ ಬಂಧಿಸಿದ್ದಾರೆ.
ತಾಲೂಕಿನ ಹುಚ್ಚನಹಟ್ಟಿಯಲ್ಲಿ ಸಾರ್ವಜನಿಕರನ್ನು ವಂಚಿಸುತ್ತಿದ್ದ ಘಟನೆ ನಡೆದಿದೆ. ಸುಳ್ಳು ಹೇಳಿಕೊಂಡು ಬಂದಿದ್ದ ಯುವಕರಾದ ನಗರದ ಗಾಂಧಿನಗರದ ವಾಸಿ ಪುನೀತ್, ನವೀದ್, ನವೀನ್, ಹಿಪ್ಪೆತೋಪು ವಾಸಿ ಮಂಜುನಾಥ್ ಎಂಬುವವರ ತಂಡ ಗ್ರಾಮಕ್ಕೆ ಭೇಟಿ ನೀಡಿ, ನಾವು ಅಬಕಾರಿ ಇಲಾಖೆಯ ಅಧಿಕಾರಿಗಳು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದೀರಿ ಎಂದು ಮನೆಗೆ ನುಗ್ಗಿ ದಾಂಧಲೆ ಮಾಡಿದ್ದಾರೆ.
ಅಲ್ಲದೆ ನಮಗೆ ಹಣ ನೀಡಿದರೆ ನಿಮ್ಮ ಮೇಲೆ ಕೇಸ್ ದಾಖಲಿಸುವುದಿಲ್ಲ ಎಂಬ ಬೇಡಿಕೆ ಇಟ್ಟಿದ್ದಾರೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದಾಗ ಸ್ಥಳಕ್ಕೆ ಬಂದ ಗ್ರಾಮಾಂತರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಕೃಷ್ಣರಾಜು ಯುವಕರ ತಂಡವನ್ನು ಪರಿಶೀಲಿಸಿ ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಈ ಆರೋಪಿಗಳು ತಾಲೂಕಿನ ಹಲವಾರು ಕಡೆಗಳಲ್ಲಿ ನಕಲಿ ದಾಳಿ ಮಾಡಿರುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ