ಕಂಟೈನರ್ ಗೆ ಕಾರು ಢಿಕ್ಕಿ: ಕಾರಿನಲ್ಲಿದ್ದ ಬೆಂಗಳೂರು ಮೂಲದ ನಾಲ್ವರು ಯುವಕರು ಸಾವು
Team Udayavani, Feb 13, 2021, 11:25 AM IST
ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ಸಮೀಪ ಭೀಕರ ಅಪಘಾತ ನಡೆದಿದ್ದು, ಕಾರೊಂದು ನಿಂತಿದ್ದ ಕಂಟೈನರ್ ಗೆ ಢಿಕ್ಕಿಯಾದ ಕಾರಣ ಕಾರಿನಲ್ಲಿದ್ದ ನಾಲ್ವರು ಯುವಕರು ಸಾವನ್ನಪ್ಪಿದ ಘಟನೆ ಶನಿವಾರ ಮುಂಜಾನೆ ನಡೆದಿದೆ.
ಮೃತ ಯುವಕರೆಲ್ಲಾ ಬೆಂಗಳೂರು ಮೂಲದವರೆಂದು ತಿಳಿದುಬಂದಿದೆ. ಇವರೆಲ್ಲಾ 25 ರಿಂದ 30 ರ ವಯೋಮಾನದವರಾಗಿದ್ದು, ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಹೋಗುತ್ತಿದ್ದರು.
ಇದನ್ನೂ ಓದಿ:ಕುಲ್ಗಾಮ್ ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಉಗ್ರ ನಂಟು? ಲಶ್ಕರ್ ಉಗ್ರ ಜಹೂರ್ ಅಹಮದ್ ಬಂಧನ
ಮೃತರನ್ನು ಅಭಿಷೇಕ್, ಮಂಜುನಾಥ್, ವಿಕ್ರಂ, ಚೇತನ್ ಎಂದು ಗುರುತಿಸಲಾಗಿದೆ. ಮೃತಪಟ್ಟ ಪೈಕಿ ಚೇತನ್ ಅಬಕಾರಿ ಇನ್ಸ್ ಪೆಕ್ಟರ್ ಹುದ್ದೆಗೆ ಇತ್ತೀಚೆಗಷ್ಟೇ ಆಯ್ಕೆಯಾಗಿದ್ದರು ಎಂದು ತಿಳಿದು ಬಂದಿದೆ.
ಚನ್ನರಾಯಪಟ್ಟಣ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಶವಗಳ ಮರಣೋತ್ತರ ಪರೀಕ್ಷೆಗಾಗಿ ಚನ್ನರಾಯಪಟ್ಟಣಕ್ಕೆ ತಂದಿದ್ದಾರೆ.
ಇದನ್ನೂ ಓದಿ:ವ್ಯಾಲಂಟೈನ್ಸ್ ಡೇಗೆ ಮಾಲ್ಗಳು, ಫ್ಯಾನ್ಸಿ ಮಳಿಗೆ, ಪಾರ್ಕ್ಗಳಲ್ಲಿ ಹೊಸ ಜೋಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ