ರಾಸುಗಳ ದರ ಕಾರಿಗಿಂತಲೂ ದುಬಾರಿ


Team Udayavani, Jan 15, 2020, 3:00 AM IST

rasugakla

ಚನ್ನರಾಯಪಟ್ಟಣ: ಸುಗ್ಗಿಯ ನಂತರ ನಡೆಯುವ ಪ್ರಥಮ ಜಾತ್ರೆ ಎನಿಸಿದ ತಾಲೂಕಿನ ಇತಿಹಾಸ ಪ್ರಸಿದ್ಧ ಬೂಕನಬೆಟ್ಟದ ರಂಗನಾಥಸ್ವಾಮಿ ರಾಸುಗಳ ಜಾತ್ರೆ ಪ್ರಾರಂಭವಾಗಿ ಇಂದಿಗೆ ನಾಲ್ಕು ದಿನ ಕಳೆದಿದ್ದು, ರಾಸುಗಳ ದರ ಕಾರಿಗಿಂತಲೂ ದುಬಾರಿಯಾಗಿದೆ.

ಎರಡ್ಮೂರು ಲಕ್ಷ ರೂ. ನೀಡಿದರೆ ಕಾರುಗಳು ನಮ್ಮ ಕೈ ಸೇರುತ್ತವೆ. ಆದರೆ ಈ ಜಾತ್ರೆಯಲ್ಲಿ ಜೋಡಿ ರಾಸುಗಳು ಬೆಲೆ ದುಬಾರಿಯಾಗಿದ್ದು, 25 ಸಾವಿರ ರೂ. ನಿಂದ ಆರು ಲಕ್ಷ ರೂ. ವರೆಗೆ ಬೆಲೆಬಾಳುವ ರಾಸುಗಳನ್ನು ಜಾತ್ರೆ ಪಾಳಯದಲ್ಲಿ ಕಟ್ಟಲಾಗಿದೆ. ಅನೇಕ ಮಂದಿ ಲಕ್ಷಾಂತರ ರೂ. ಬೆಲೆ ಬಾಳುವ ರಾಸುಗಳನ್ನು ಕೊಳ್ಳುವ ಹವ್ಯಾಸ ರೂಢಿಸಿಕೊಂಡಿದ್ದು, ಅವುಗಳನ್ನು ಬೇರೆ ಜಾತ್ರೆಗಳಲ್ಲಿ ಪದರ್ಶನ ಮಾಡಲು ಮುಂದಾಗಲಿದ್ದಾರೆ.

ರಾಸುಗಳ ಖರೀದಿ ಜೋರು: ರಾಸುಗಳ ಜಾತ್ರೆ ಜ.10ರಿಂದ ಆರಂಭವಾಗಿದ್ದು, ರಾಸುಗಳನ್ನು ಖರೀದಿಸಲು ಸಾವಿರಾರು ರೈತರು ಬೂಕನ ಬೆಟ್ಟಕ್ಕೆ ಲಗ್ಗೆ ಹಾಕುತ್ತಿದ್ದಾರೆ. ಇದರಿಂದ ಎಲ್ಲೆಡೆ ಜಾತ್ರೆಯ ಸಂಭ್ರಮ ಮನೆ ಮಾಡಿದ್ದು, ಅಕ್ಕ ಪಕ್ಕದ ಜಿಲ್ಲೆಗಳಲ್ಲದೇ ಉತ್ತರ ಕರ್ನಾಟಕದ ಹುಬ್ಬಳಿ-ಧಾರವಾಡ, ಬಾಗಲಕೋಟೆ, ಬಳ್ಳಾರಿ, ದಾವಣಗೆರೆ, ಹಾವೇರಿ, ಗಂಗಾವತಿ ಜಿಲ್ಲೆ ಸೇರಿದಂತೆ ಕೃಷಿ ಪ್ರಧಾನ ಜಿಲ್ಲೆಯಿಂದ ರಾಸುಗಳನ್ನು ಕೊಳ್ಳಲು ನಿತ್ಯವೂ ರೈತರು ತಾಲೂಕಿಗೆ ಆಗಮಿಸುತ್ತಿದ್ದು, ನೂರಾರು ಜೋಡಿ ರಾಸುಗಳು ಖರೀದಿ ಜೋರಾಗಿ ನಡೆಯುತ್ತಿದೆ.

ಸ್ವಲ್ಪ ದುಬಾರಿ: ಕಳೆದ ಸಾಲಿಗೆ ಹೋಲಿಸಿದರೆ ಪ್ರಸಕ್ತ ವರ್ಷ ಕೃಷಿ ಬಳಕೆಯ ರಾಸುಗಳ ಬೆಲೆ ಕೊಂಚ ದುಬಾರಿಯಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಉತ್ತಮವಾಗಿ ಮಳೆಯಾಗಿದ್ದು, ಕೃಷಿ ಚಟುವಟಿಕೆ ಉತ್ತಮವಾಗಿ ನಡೆಯುತ್ತಿದೆ. ಹಾಗಾಗಿ ರಾಸುಗಳನ್ನು ಕೊಳ್ಳುವವರು ಹಾಗೂ ಮಾರಾಟ ಮಾಡುವ ರೈತರು ಉತ್ಸುಕರಾಗಿದ್ದಾರೆ. ಇದರಿಂದ ಸ್ವಲ್ಪ ಬೆಲೆ ಹೆಚ್ಚಾಗಿದೆ ಎಂದು ರೈತರು ಜಾತ್ರೆ ಆವರಣದಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ.

ಬಿಸಿಲ ಝಳ: ಬೆಳಗ್ಗೆ 10 ಗಂಟೆಯಾದರು ಚಳಿ ಇಬ್ಬನಿ ಬೀಳುತ್ತಿರುತ್ತದೆ. ನಂತರ ಬಿಸಿಲ ಝಳ ಹೆಚ್ಚುತ್ತಿದ್ದು, ರೈತರು ಬೀಡಾರದ ನೆರಳು ಅವಲಂಬಿಸುವಂತಾಗಿದೆ. ಬಿಸಿಲ ಬೇಗೆಗೆ ಬೆಯುತ್ತಿರುವ ರೈತರು ತಂಪುಪಾನೀಯ ಮೊರೆ ಹೋಗುತ್ತಿದ್ದಾರೆ. ಜಾತ್ರೆಯಲ್ಲಿ ಎಳನೀರು, ಕಲ್ಲಂಗಡಿ, ಶರಬತ್ತು ಹಾಗೂ ಕಬ್ಬಿನ ಹಾಲಿನ ಮಾರಾಟ ಜೋರಾಗಿ ನಡೆಯುತ್ತಿದೆ. ರಾಸುಗಳಿಗೆ ನೀರಿನ ಸಮಸ್ಯೆ ಉಂಟಾಗಂತೆ ತಾಲೂಕು ಆಡಳಿತ ಮುಂಜಾಗ್ರತೆ ವಹಿಸಿದ್ದು, ಸಕಾಲಕ್ಕೆ ಕುಡಿಯುವ ನೀರು ಸರಬರಾಜು ಆಗುತ್ತಿದೆ.

ಮೂರು ಸಾವಿರ ರಾಸುಗಳ ಆಗಮನ: ರಾಸುಗಳ ಜಾತ್ರೆಗೆ ಈಗಾಗಲೆ ವಿವಿಧ ಜಿಲ್ಲೆಯಿಂದ ಮೂರು ಸಾವಿರ ರಾಸುಗಳು ಆಗಮಿಸಿವೆ, ಇವುಗಳಲ್ಲಿ ಹಳ್ಳಿಕಾರ್‌ ಜೋಡೆತ್ತುಗಳಿಗೆ ಬೇಡಿಕೆ ಹೆಚ್ಚಿದೆ, ಹೆಚ್ಚಾಗಿ ಭತ್ತ ಬೆಳೆಯುವ ಜಿಲ್ಲೆಯ ರೈತರು ಇವುಗಳನ್ನು ಕೊಳ್ಳಲು ಮುಂದಾಗುತ್ತಿದ್ದಾರೆ. ಸಾವಿರಾರು ಜೋಡಿ ರಾಸುಗಳು ಆಗಮಿಸುವ ನಿರೀಕ್ಷೆ ಇದೆ, ರಾಸುಗಳನ್ನು ಲಾರಿ ಹಾಗೂ ಆಟೋಗಳಲ್ಲಿ ಸಾಗಣೆ ಮಾಡುತ್ತಿದ್ದು, ಇದಕ್ಕೆ ಬೇಕಿರುವ ರ್‍ಯಾಂಪ್‌ ವ್ಯವಸ್ಥೆ ಜಾತ್ರೆ ನಡೆಯುವ ಸ್ಥಳದಲ್ಲಿ ಮಾಡಲಾಗಿದೆ.

20 ಕಿ.ಮೀ. ದೂರದಿಂದ ನೀರು ಪೂರೈಕೆ: ಮುಂಜಾಗ್ರಾತಾ ಕ್ರಮವಾಗಿ ಪಟ್ಟಣ ಸಮೀಪದ ಹಾಲು ಉತ್ಪನಗಳ ಹೈಟೆಕ್‌ ನಂದಿನಿ ಘಟಕದಿಂದ ನಿತ್ಯವೂ ಸುಮಾರು 20 ಕಿ.ಮೀ. ದೂರದಿಂದ 50 ಸಾವಿರ ಲೀ. ಸಾಮರ್ಥ್ಯದ ಎರಡು ಲಾರಿಯಲ್ಲಿ ನೀರು ಸರಬರಾಜು ಮಾಡುತ್ತಿರುವುದಲ್ಲದೇ ನಾಲ್ಕು ಟ್ಯಾಂಕರ್‌ ಟ್ರಾಕ್ಟರ್‌ ಮೂಲಕವೂ ಜಾತ್ರೆಗೆ ನೀರು ನೀಡುವ ಮೂಲಕ ತಾಲೂಕು ಆಡಳಿತ ರೈತರಿಗೆ ಉತ್ತಮ ಸಹಕಾರ ನೀಡಿದೆ.

ಕೃಷಿ ಇಲಾಖೆ ಮೂಲಕ ಜಾತ್ರೆ ನಡೆಯುವ ಬೂಕನ ಬೆಟ್ಟದ ತಪ್ಪಲಿನಲ್ಲಿ ಎರಡು ಕೃಷಿ ಹೊಂಡ ನಿರ್ಮಿಸಿದ್ದು ಅದಕ್ಕೆ ಕವರ್‌ ಹಾಕಿ ನೀರು ಸಂಗ್ರಹಣೆ ಮಾಡಲಾಗಿದೆ. ಉದ್ಯೋಗ ಖಾತ್ರಿ ಮೂಲಕ ನೀರು ಸಂಗ್ರಹಣಾ ಟ್ಯಾಂಕ್‌ ಮಾಡಿದ್ದು ಅಲ್ಲಿಯೂ ನೀರು ಶೇಖರಣೆ ಮಾಡಲಾಗಿದ್ದು ಜನ ಹಾಗೂ ಜಾನುವಾರುಗಳಿಗೆ ಅಲ್ಲಿಂದ ನೀರು ಒದಗಿಸಲಾಗುತ್ತಿದೆ.

ಕಣ್ಮರೆಯಾಗಿರುವ ವಸ್ತುಗಳು ಇಲ್ಲಿ ಪ್ರತಕ್ಷ: ರಾಗಿ ಬೀಸುವ ಕಲ್ಲು, ಒನಕೆ, ಒಂದರಿ, ಲಟ್ಟಣಿಗೆ, ರೊಟ್ಟಿತಟ್ಟುವ ಮಣೆ ಸೇರಿದಂತೆ ಅಳಿನ ಅಂಚಿನಲ್ಲಿರುವ ವಸ್ತುಗಳು ಬೂಕನಬೆಟ್ಟದ ಜಾತ್ರೆಯಲ್ಲಿ ಪ್ರತ್ಯಕ್ಷವಾಗಿವೆ. ಗ್ರಾಮೀಣ ಭಾಗದ ಜನರಿಗೆ ಅಗತ್ಯ ವಸ್ತುಗಳಿಗಾಗಿ ಅಲೆದಾಟ ನಡೆಸುವ ಬದಲಾಗಿ ಬೂಕನ ಬೆಟ್ಟದ ತಪ್ಪಿಲಿನಲ್ಲಿರುವ ಅಂಗಡಿಗಳಿಗೆ ಭೇಟಿ ನೀಡಬಹುದಾಗಿದೆ. ಕೃಷಿಕರು ಬಳಸುವ ವಸ್ತುಗಳಾದ ನೊಗ, ಕುಂಟೆ, ಮರದ ನೇಗಿಲು, ಮೊರ, ಹಲುಬೆ ಸೇರಿದಂತೆ ಕೃಷಿಗೆ ಬಳಸುವ ಮರ ಮುಟ್ಟುಗಳು ಇಲ್ಲಿ ದೊರೆಯುತ್ತಿವೆ.

ಶಾಮಿಯಾನದಲ್ಲಿ ಜೋಡೆತ್ತು: ಎರಡು ಲಕ್ಷ ರೂ. ಮೇಲ್ಪಟ್ಟಿರುವ ಜೋಡೆತ್ತುಗಳನ್ನು ಕಟ್ಟಿರುವ ರೈತರು ತಮ್ಮ ರಾಸುಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಿದ್ದಾರೆ. ಬಿಸಿಲು ಬೀಳದಂತೆ ಶಾಮಿಯಾನ ವ್ಯವಸ್ಥೆ, ರಾಸುಗಳು ವಿಶ್ರಾಂತಿ ಪಡೆಯಲು ಮಲಗುವ ಸ್ಥಳದಲ್ಲಿ ರಾಗಿ ಹೊಟ್ಟನ್ನು ಹಾಸಿಗೆ ರೀತಿಯಲ್ಲಿ ಹಾಕಿದ್ದಾರೆ. ಬೆಳಗ್ಗೆ ರಾತ್ರಿ ಜೋಡೆತ್ತುಗಳನ್ನು ಭತ್ತದ ಹುಲ್ಲಿನಲ್ಲಿ ಮಸಾಜ್‌ ಮಾಡುವ ಮೂಲಕ ರಾಸುಗಳು ಸದಾ ಹೊಳೆಯುವಂತೆ ಮಾಡುತ್ತಿದ್ದಾರೆ.

ರಾಸುಗಳ ಜಾತ್ರೆಗಾಗಿ ತಾಲೂಕಿನ ಕಂದಾಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಗ್ರಾಮ ಲೆಕ್ಕಿಗರು, ಕಂದಾಯ ನಿರೀಕ್ಷಕರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಮೂಲಕ ಸಮಸ್ಯೆ ಆಲಿಸಿದ್ದರಿಂದ ಜಾತ್ರೆಯಲ್ಲಿ ಸಮಸ್ಯೆಗಳು ಉಂಟಾಗದಂತೆ ಮುಂಜಾಗ್ರತೆ ವಹಿಸಲಾಗಿದೆ.
-ಸಿ.ಎನ್‌.ಬಾಲಕೃಷ್ಣ, ಶಾಸಕ

ರಾಸುಗಳ ಮಾರಾಟ ಹಾಗೂ ಖರೀದಿ ಮಾಡಲು ಪ್ರತಿ ವರ್ಷವೂ ಜಾತ್ರೆಗೆ ಆಗಮಿಸುತ್ತೇನೆ. ಉತ್ತಮ ತಳಿಯ ರಾಸುಗಳು ಸೇರುವುದರಿಂದ ಉತ್ತರ ಕರ್ನಾಟಕದ ರೈತರು ಈ ಜಾತ್ರೆಗೆ ಆಗಮಿಸುತ್ತಾರೆ.
-ಶಿವ, ಭಿಕ್ಷಾವರ್ತಿಮಠ ಬಾದಾಮಿ

* ಶಾಮಸುಂದರ್‌ ಕೆ. ಅಣ್ಣೇನಹಳ್ಳಿ

ಟಾಪ್ ನ್ಯೂಸ್

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.