ಜಿಲ್ಲೆಯಲ್ಲಿ ನಿರಂತರ ಸರಗಳ್ಳತನ: ಆತಂಕ

ಮೂರು ಪ್ರತ್ಯೇಕ ಪ್ರಕರಣಗಳಲ್ಲಿ 4.10 ಲಕ್ಷ ರೂ. ಮೌಲ್ಯದ ಚಿನ್ನದ ಸರಗಳ ಕಳವು , ಮಹಿಳೆಯರೇ ಎಚ್ಚರವಾಗಿರಿ

Team Udayavani, Feb 27, 2021, 3:30 PM IST

ಜಿಲ್ಲೆಯಲ್ಲಿ ನಿರಂತರ ಸರಗಳ್ಳತನ: ಆತಂಕ

ಸಾಂದರ್ಭಿಕ ಚಿತ್ರ

ಹಾಸನ: ಜಿಲ್ಲೆಯಲ್ಲಿ ಸರಗಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದೆರಡು ದಿನಗಳಲ್ಲಿ ಮೂರು ಪ್ರತ್ಯೇಕ ಸರಗಳವು ಪ್ರಕರಣಗಳು ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿವೆ.

ಮಾಂಗಲ್ಯ ಸರ ಕಳವು: ಬಸ್‌ ಹತ್ತುತ್ತಿದ್ದಾಗ 1,50,000 ರೂ. ಬೆಲೆಯ 30 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಕಳವು ಮಾಡಿರುವ ಪ್ರಕರಣ ಬೇಲೂರು ಬಸ್‌ ನಿಲ್ದಾಣದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ, ಕಡೂರು ತಾಲೂಕು, ಸಖರಾಯಪಟ್ಟಣ ಹೋಬಳಿ, ಮಾಚಗೋಡನಹಳ್ಳಿ ಗ್ರಾಮದ ವಿಮಲಾ ಎಂಬವರುಬುಧವಾರ ಬೇಲೂರಿನಲ್ಲಿರುವ ತನ್ನ ಅಕ್ಕನ ಮಗಳ ಮನೆಗೆ ಬಂದು ಊರಿಗೆ ಹೋಗಲು ಬೇಲೂರುಬಸ್‌ ನಿಲ್ದಾಣದಲ್ಲಿ ಬಸ್ಸಿಗೆ ಹತ್ತಿದಾಗ ಕೊರಳಿನಲ್ಲಿ ಮಾಂಗಲ್ಯ ಸರವಿರಲಿಲ್ಲ.

ಬಸ್ಸಿಗೆ ಹತ್ತುವಾಗ ನೂಕು ನುಗ್ಗಲಿನಲ್ಲಿ 1,50,000 ರೂ. ಬೆಲೆಯ 30 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಕಳವು ಮಾಡಲಾಗಿದೆ. ಈ ಸಂಬಂಧ ಬೇಲೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾಲಿಷ್‌ ನೆಪದಲ್ಲಿ ಸರ ಕಳವು: ಪಾಲಿಷ್‌ ಮಾಡುವ ನೆಪದಲ್ಲಿ 88,500 ರೂ. ಬೆಲೆಯ ಚಿನ್ನಾಭರಣಗಳನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿರುವ ಪ್ರಕರಣ ಹಾಸನದ ಹೊರ ವಲಯದ ಮಣಚನಹಳ್ಳಿಯಲ್ಲಿ ನಡೆದಿದೆ. ಮಣಿಚನಹಳ್ಳಿ ಗ್ರಾಮದ ಜಯಮ್ಮ ಅವರ ಮಗಳು ಶಾರದಾ ಎಂಬವರು ಗುರುವಾರ ಮಧ್ಯಾಹ್ನ ಮನೆಯಲ್ಲಿದ್ದಾಗ ಇಬ್ಬರು ವ್ಯಕ್ತಿಗಳು ಬೈಕ್‌ನಲ್ಲಿ ಬಂದು ಹಿತ್ತಾಳೆ, ಚಿನ್ನ ಮತ್ತು ಬೆಳ್ಳಿ ಪದಾರ್ಥಗಳನ್ನು ಪಾಲಿಸ್‌ ಮಾಡಿಕೊಡುವುದಾಗಿ ನಂಬಿಸಿದರು. 30 ಗ್ರಾಂ ತೂಕದ ಮಾಂಗಲ್ಯ ಸರ, 5 ಗ್ರಾಂ ತೂಕದ ಕಿವಿಯ ಓಲೆ, ಜುಮುಕಿಯನ್ನು ಮನೆಯ ಬಾಗಿಲಿನಲ್ಲಿ ಪಾಲಿಷ್‌ ಮಾಡುವಾಗ ಅಪರಿಚಿತ ವ್ಯಕ್ತಿಗಳು ಕುಡಿಯಲು ನೀರು ಕೇಳಿದರು. ಜಯಮ್ಮ ಅವರು ನೀರು ತರಲು ಒಳಹೋದಾಗ 88,500 ರೂ. ಬೆಲೆಯ ಚಿನ್ನಾಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಈ ಸಂಬಂಧ ಹಾಸನ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಂಗಲ್ಯ ಸರ ಅಪಹರಣ: ಅಂಗಡಿಗೆ ಹೋಗುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿರುವ ಪ್ರಕರಣ ಹಾಸನ ನಗರದಲ್ಲಿ ನಡೆದಿದೆ. ಹಾಸನದ ರಂಗೋಲಿಹಳ್ಳ ಚರ್ಚ್‌ ಕ್ರಾಸ್‌ನ ವಾಸಿ ಪಾಪಮ್ಮ ಎಂಬವರು ಗುರುವಾರ ಬೆಳಗ್ಗೆ ಸಾಲಗಾಮೆ ರಸ್ತೆಯಲ್ಲಿರುವ ಅಂಗಡಿಗೆ ಹೋಗಿ ಎಣ್ಣೆ ಸಕ್ಕರೆ ತೆಗೆದುಕೊಂಡು ಸಾಲಗಾಮೆ ರಸ್ತೆ ದಾಟಿ ವಾಪಸ್‌ ಮನೆಗೆ ಬರುತ್ತಿದ್ದಾಗ ಬೈಕ್‌ನಲ್ಲಿ ಬಂದ ವ್ಯಕ್ತಿಗಳಿಬ್ಬರು ಪಾಪಮ್ಮ ಅವರ ಕೊರಳಿನಿಂದ 1,80,000 ರೂ.ಬೆಲೆಯ 45 ಗ್ರಾಂ ತೂಕದ ಚಿನ್ನ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಸಂಬಂಧ ಹಾಸನ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಲಸದ ಹುಡುಗರಿಂದ ನಗದು, ಚಿನ್ನಾಭರಣ ಕಳವು :

ಹಾಸನ: ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಇಬ್ಬರು ಹುಡುಗರು 2 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 25 ಸಾವಿರ ರೂ. ನಗದು ಮತ್ತು ಸೀರೆ ಕಳವು ಮಾಡಿರುವ ಪ್ರಕರಣ ಅರಕಲಗೂಡು ತಾಲೂಕು, ಕಸಬಾ ಹೋಬಳಿ, ರಂಗಾಪುರ ಗ್ರಾಮದಲ್ಲಿ ನಡೆದಿದೆ.

ರಂಗಾಪುರ ಗ್ರಾಮದ ಶಿವಲಿಂಗಯ್ಯ ಎಂಬುವರು 11 ಎಕರೆ ಜಮೀನು ಹೊಂದಿದ್ದು, ಜಮೀನಿನ ಕೆಲಸಕ್ಕೆ 15 ಸಾವಿರ ರೂ. ಸಂಬಳ ನಿಗದಿಪಡಿಸಿ ಹುಬ್ಬಳಿಯಿಂದ ಬಂದಿದ್ದ ರಘು ಮತ್ತು ಬಾಬು ಎಂಬ ಹುಡುಗರನ್ನು ಫೆ.7 ರಿಂದ ಇಟ್ಟುಕೊಂಡಿದ್ದರು. ಹುಡುಗರು ಪಕ್ಕದ ಮನೆಯ ಶೆಡ್‌ನ‌ಲ್ಲಿ ವಾಸವಿದ್ದರು. ಶಿವಲಿಂಗಯ್ಯ ಅವರು ಮಂಗಳವಾರ ಸಂಜೆ ತಮ್ಮ ಪತ್ನಿಯೊಂದಿಗೆ

ಕಾರಿನಲ್ಲಿ ಮದುವೆ ಆರತಕ್ಷತೆಗೆ ಕುಶಾಲನಗರಕ್ಕೆ ಹೋಗಿದ್ದರು. ಈ ಸಂದರ್ಭದಲ್ಲಿ ಕೆಲಸದ ಹುಡುಗರು ಮನೆಯ ಹಿಂಬಾಗಿಲ ಬೀಗವನ್ನು ಮರಿದು ಒಳನುಗ್ಗಿ ಬೀರುವಿನಲ್ಲಿಟ್ಟಿದ್ದ 25,000 ರೂ.ನಗದು, 2 ಲಕ್ಷ ರೂ. ಬೆಲೆಯ ಚಿನ್ನಾಭರಣ, 20 ಸಾವಿರ ಬೆಲೆಯ 4 ರೇಷ್ಮೆ ಸೀರೆ ಮತ್ತು 30,000 ಸಾವಿರ ಬೆಲೆಯ ಬೈಕ್‌ ಅನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ. ಈ ಸಂಬಂಧ ಶಿವಲಿಂಗಯ್ಯ ಅವರು ಅರಕಲಗೂಡು ಪೊಲೀಸ್‌ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.