ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ ಚಿಮಣಿ ಸ್ಫೋಟ


Team Udayavani, Mar 16, 2020, 3:00 AM IST

chamundeshwari

ಚನ್ನರಾಯಪಟ್ಟಣ: ತಾಲೂಕಿನ ಶ್ರೀನಿವಾಸಪುರ ಬಳಿ ಇರುವ ಚಾಮುಂಡೇಶ್ವರಿ ಶುಗರ್ನ ಚಿಮಣಿ ಸ್ಫೋಟಗೊಂಡ ಘಟನೆ ಭಾನುವಾರ ಬೆಳಗ್ಗೆ 10.30ಕ್ಕೆ ಸಂಭವಿಸಿದೆ. ಹೇಮಾವತಿ ಸಹಕಾರ ಸರ್ಕಾನೆಯನ್ನು ಚಾಮುಂಡೇಶ್ವರಿ ಶುಗರ್ ಸಂಸ್ಥೆಯವರು ಗುತ್ತಿಗೆ ಪಡೆದು ಕಾರ್ಖಾನೆ ಉನ್ನತೀಕರರಿಸಿ ಶನಿವಾರ ಬೆಳಗ್ಗೆ ಬಾಯ್ಲರ್‌ಗೆ ಪ್ರಾಯೋಗಿಕವಾಗಿ ಅಗ್ನಿಸ್ಪರ್ಶ ಮಾಡುವ ಮೂಲಕ ಕಾರ್ಖಾನೆ ಪುನಾರಂಭಕ್ಕೆ ಮುಂದಾಗಿದ್ದರು.

10.30ರ ವೇಳೆಯಲ್ಲಿ ಸ್ಫೋಟ: ಶನಿವಾರ ತಡರಾತ್ರಿ 10.30ರ ವೇಳೆಯಲ್ಲಿ ಬಾಯ್ಲರ್‌ ಪೈಪ್‌ ಸಿಡಿಯಿತು ಇದನ್ನು ದುರಸ್ತಿ ಮಾಡಿ ಬೆಂಕಿ ಹಾಕುವುದನ್ನು ಮುಂದುವರೆಸಿದ್ದರು. ಭಾನುವಾರ ಬೆಳಗ್ಗೆ 6.30ರ ವೇಳೆಯಲ್ಲಿ ಬಾಯ್ಲರ್‌ನಿಂದ ಚಿಮಣಿ ಇರುವ ಪೈಪ್‌ ತುಂಡಾಗಿ ಬಿದ್ದಿದೆ. ಇದಾದ ಮೇಲೆ 10.30ರ ವೇಳೆಯಲ್ಲಿ ಚಿಂಣಿ ನ್ಪೋಟಗೊಂಡು ಈ ವೇಳೆ ಕಾರ್ಮಿಕರು ತಿಂಡಿ ಸೇವಿಸಲು ಹೊರಗೆ ಹೋಗಿದ್ದರಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಬಾಯ್ಲರ್‌ ಬೆಂಕಿ ಹಾಕಿದ್ದ ಹೊಗೆ ಚಿಮುಣಿಗೆ ತಲುಪುವಾಗ ಹೊಗೆಯಲ್ಲಿನ ಕಿಟ್ಟವನ್ನು ಶುದ್ಧೀಕರಣ ಮಾಡುವ ಆಧುನಿಕ ತಂತ್ರಜ್ಞಾನದ ಯಂತ್ರಗಳನ್ನು ಅಳವಡಿಸಲಾಗಿತ್ತು. ಯಂತ್ರಗಳನ್ನು ನಿಯಂತ್ರಿಸುವ ಕಂಪ್ಯೂಟರ್‌ ವಿಭಾಗದ ಗಾಜುಗಳು ಪುಡಿಯಾಗಿವೆ. ವಿದ್ಯುತ್‌ ಪರಿವರ್ತಕ ನೆಲಕ್ಕುರುಳಿದೆ.

ದೂಳು ಶುದ್ಧೀಕರಣ ಘಟಕದಲ್ಲಿ ಉಂಟಾದ ಸ್ಫೋಟದ ಶಬ್ಧ ಕಾರ್ಖಾನೆ ಸಮೀಪದಲ್ಲಿರುವ ಕಾಳೇನಹಳ್ಳಿ, ಶ್ರೀನಿವಾಸಪುರ, ನಲ್ಲೂರು, ಗನ್ನಿ ಸೇರಿದಂತೆ ಅನೇಕ ಗ್ರಾಮಕ್ಕೆ ಕೇಳಿಸಿದ್ದು, ಕೂಡಲೇ ಗ್ರಾಮಸ್ಥರು ಕಾರ್ಖಾನೆ ಬಳಿ ಆಗಮಿಸಿದ್ದಾರೆ. ಅಷ್ಟರಲ್ಲಿ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಕಾರ್ಖಾನೆ ಪ್ರಾರಂಭಕ್ಕಾಗಿ ಬಾಯ್ಲರ್‌ಗೆ ಅಗ್ನಿಸ್ಪರ್ಶ ಮಾಡಿದ ಒಂದು ದಿವಸದಲ್ಲಿ ಈ ರೀತಿ ಅವಘಡ ಸಂಭವಿಸಿರುವುದರಿಂದ ರೈತರನ್ನು ಚಿಂತೆಗೆ ದೂಡಿದೆ.

ಚಿಂತೆಗೀಡಾಡ ರೈತರು: ಮಾರ್ಚ್‌ ಅಂತ್ಯಕ್ಕೆ ಕಬ್ಬು ಅರೆಯುವುದಾಗಿ ಕಾರ್ಖಾನೆ ಆಡಳಿತ ಮಂಡಳಿ ಹಾಗೂ ಚಾಮುಂಡೇಶ್ವರಿ ಶುಗರ್ ಸಂಸ್ಥೆ ಭರವಸೆ ನೀಡಿದ್ದು, ಹಲವು ರೈತರಿಗೆ ಕಬ್ಬು ಕಟಾವು ಮಾಡಲು ಅನುಮತಿ ನೀಡಿತ್ತು. ಆದರೆ ಈಗ ದಿಡೀರ್‌ ಸಂಭವಿಸಿರುವ ಅವಘಡದಿಂದ ಕಬ್ಬು ಬೆಳೆಗಾರಿಗೆ ತೊಂದರೆಯಾಗುತ್ತಿದೆ.

ಘಟನೆಯನ್ನು ಕಣ್ಣಾರೆ ಕಂಡ ಬಾಯ್ಲರ್‌ ವಿಭಾಗದ ಮುಖ್ಯಸ್ಥ ನಾಗೇಶ್‌ ಗಾಬರಿಗೊಂಡಿದ್ದು, ಇದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಖಾನೆ ಅವಘಡ ನಡೆದ ಸ್ಥಳಕ್ಕೆ ಶಾಸಕರಾದ ಸಿ.ಎನ್‌.ಬಾಲಕೃಷ್ಣ, ಎಂ.ಎ.ಗೋಪಾಲಸ್ವಾಮಿ, ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ವೆಂಕಟೇಶ ಭೇಟಿ ನೀಡಿ ಪರಿಶೀಲಿಸಿದರು.

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hassan

Holiday: ಹಾಸನ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Sakaleshpura

National Highway ಅವೈಜ್ಞಾನಿಕ ಕಾಮಗಾರಿ: ಕೇಂದ್ರ ಸಚಿವ ಗಡ್ಕರಿಗೆ ಮಾಹಿತಿ

HDK

MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್‌ಡಿಕೆ

Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್‌ ವಸೂಲಿಗೆ ಬಿಡುವುದಿಲ್ಲ

Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್‌ ವಸೂಲಿಗೆ ಬಿಡುವುದಿಲ್ಲ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.