ತನ್ನ ಲಿಮಿಟ್ಸ್ ನಲ್ಲಿ ಸತತ ಎರಡು ಕೊಲೆ ; ಅಧೀರಗೊಂಡ PSI ಆತ್ಮಹತ್ಯೆಗೆ ಶರಣು!

ಸಾರ್ವಜನಿಕರ ಆಕ್ರೋಶ ಮತ್ತು ಕರ್ತವ್ಯ ಲೋಪದ ಭಯದಿಂದ ನೇಣಿಗೆ ಶರಣಾದ ಸಬ್ ಇನ್ ಸ್ಪೆಕ್ಟರ್

Team Udayavani, Jul 31, 2020, 7:31 PM IST

Kiran-Kumar-PSI-1

ಹಾಸನ: ಇದೊಂದು ವಿಚಿತ್ರ ಪ್ರಕರಣ. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು ತಮ್ಮ ವ್ಯಾಪ್ತಿಯಲ್ಲಿ ಬೆನ್ನು ಬೆನ್ನಿಗೇ ನಡೆದ ಎರಡು ಕೊಲೆ ಘಟನೆಗಳಿಂದ ಅಧೀರರಾಗಿ ತಾವೇ ಆತ್ಮಹತ್ಯೆಗೆ ಶರಣಾಗಿರುವ ದುರದೃಷ್ಟಕರ ಘಟನೆ ಇದು.

ಈ ಘಟನೆ ನಡೆದಿರುವುದು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ. ಇಲ್ಲಿನ ನಗರ ಠಾಣೆಯಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಕಿರಣ್ ಕುಮಾರ್ ಅವರೇ ಈ ರೀತಿಯ ದುಡುಕು ನಿರ್ಧಾರಕ್ಕೊಳಗಾಗಿ ಪ್ರಾಣ ಕಳೆದುಕೊಂಡವರಾಗಿದ್ದಾರೆ.

ತನ್ನ ಠಾಣಾ ಪರಿಮಿತಿಯಲ್ಲಿ ಎರಡೇ ದಿನಗಳ ಅಂತರಲದಲ್ಲಿ ಎರಡು ಕೊಲೆ ನಡೆದ ಹಿನ್ನಲೆಯಲ್ಲಿ ಹಿರಿಯ ಅಧಿಕಾರಿಗಳು ತನ್ನನ್ನು ಕೆಲಸದಿಂದ ಅಮಾನತುಗೊಳಿಸಬದೆಂಬ ಭಯದಿಂದ ಪಿ.ಎಸ್.ಐ. ಕಿರಣ್ ಕುಮಾರ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

ಚನ್ನರಾಯಪಟ್ಟಣದ ಬಾಗೂರು ರಸ್ತೆಯಲ್ಲಿ ಜುಲೈ 29ರಂದು ಪಾರಿವಾಳ ವಿಚಾರಕ್ಕೆ ವ್ಯಕ್ತಿಯೋರ್ವನ ಕೊಲೆಯಾಗಿತ್ತು. ಈ ಕೊಲೆಗೆ ಸಂಬಂಧಿಸಿದಂತೆ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿತ್ತು. ಈ ನಡುವೆ ಜುಲೈ 30ರಂಡು ರಾತ್ರಿ ಇಬ್ಬರು ಕುಡುಕರ ನಡುವಿನ ಗಲಾಟೆಯಲ್ಲಿ ಮೂರನೇ ವ್ಯಕ್ತಿ ಸಂಪತ್ ಎಂಬ ಯುವಕ ಕೊಲೆಯಾಗಿದ್ದ.

ಹೀಗೆ ಕಿರಣ್ ಕುಮಾರ್ ಅವರ ಠಾಣಾ ವ್ಯಾಪ್ತಿಯಲ್ಲಿ ಕೇವಲ 24 ಗಂಟೆಗಳಲ್ಲಿ ಎರಡು ಕೊಲೆ ನಡೆದ ವಿಚಾರ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಶುಕ್ರವಾರದಂದು ಪಿ.ಎಸ್.ಐ. ಕಿರಣ್ ಕುಮಾರ್ ಅವರು ತಮ್ಮ ಠಾಣಾ ಸಿಬ್ಬಂದಿಗಳ ಜೊತೆ ಕೊಲೆ ನಡೆದ ಸ್ಥಳಕ್ಕೆ ಮಹಜರಿಗಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಕೆಲವರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತೊಪಡಿಸಿ ಅಪಹಾಸ್ಯ ಮಾಡಿದ್ದರು ಎನ್ನಲಾಗಿದೆ.


ಇದಲ್ಲದೆ ಚನ್ನರಾಯಪಟ್ಟಣದ ಕೆಲವು ವಾಟ್ಸ್ಯಾಪ್ ಗುಂಪಿನಲ್ಲಿ ಪೊಲೀಸರ ಕಾರ್ಯವೈಖರಿಯ ಬಗ್ಗೆ ಅಸಮಾಧಾನವನ್ನು ವ್ಯಕ್ತಪಡಿಸಿ ಕೆಲವರು ಬಹಳ ಕೆಟ್ಟರೀತಿಯಲ್ಲಿ ಬರೆದುಕೊಂಡಿದ್ದರು ಮತ್ತು ಈ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯೂ ನಡೆಯುತ್ತಿತ್ತು ಎನ್ನಲಾಗಿದೆ.

ಇಷ್ಟೂ ಸಾಲದೆಂಬಂತೆ, ಈ ಎರಡು ಕೊಲೆ ತನಿಖೆಗೆ ಸಂಬಂಧಿಸಿದಂತೆ ಮೈಸೂರಿನಿಂದ ಹಿರಿಯ ಅಧಿಕಾರಿಗಳ ತಂಡ ಚನ್ನರಾಯಪಟ್ಟನಕ್ಕೆ ಆಗಮಿಸುವುದರಲ್ಲಿತ್ತು. ಮತ್ತು ಆ ಹಿರಿಯ ಅಧಿಕಾರಿಗಳ ತಂಡವು ತನ್ನನ್ನ ಕರ್ತವ್ಯ ಲೋಪ ಆರೋಪದಡಿ ಕೆಲಸದಿಂದ ಅಮಾನತುಗೊಳಿಸಬಹುದು ಎಂಬ ಭಯದಿಂದ ಹೆದರಿ ಠಾಣೆಯಿಂದ ಮನೆಗೆ ಹೋದ ಪಿಎಸ್ಐ ಕಿರಣ್ ಕುಮಾರ್ ನೇಣಿಗೆ ಶರಣಾಗಿದ್ದಾರೆ.

ಪಿಎಸ್ಐ ಕಿರಣ್ ಕುಮಾರ್ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕು ಲಾಳನಕೆರೆ ಗ್ರಾಮದವರಾಗಿದ್ದಾರೆ.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.