ವಿಂಧ್ಯಗಿರಿ ತಪ್ಪಲಿನಲ್ಲಿ ಕಲಾ ಉತ್ಸವಕ್ಕೆ ಚಾಲನೆ
Team Udayavani, Jan 27, 2018, 6:10 AM IST
ಶ್ರವಣಬೆಳಗೊಳ: ಭಗವಾನ್ ಬಾಹುಬಲಿ ಸ್ವಾಮಿಗೆ ಮಾಡುವ ಹಾಲಿನ ಅಭಿಷೇಕ ಹರಿದು ಹೋಗುತ್ತದೆ. ಆದರೆ ಕಲಾವಿದರು ಮಾಡುವ ಅಭಿಷೇಕ ಎಲ್ಲಾ ಕಾಲಕ್ಕೂ ಸಲ್ಲುತ್ತದೆ ಎಂದು ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು.
ಶ್ರವಣಬೆಳ ಗೊಳದ ವಿಂಧ್ಯಗಿರಿ ತಪ್ಪಲಿನ ಸ್ವಾಗತ ಕಚೇರಿಯಲ್ಲಿ ನಡೆದ ಕಲಾ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿಂಧ್ಯಗಿರಿ ಬೆಟ್ಟದಲ್ಲಿರುವ ಭಗವಾನ್ ಬಾಹುಬಲಿ ಸ್ವಾಮಿಯು ಜಗತ್ತಿನಲ್ಲಿರುವ ಎಲ್ಲಾ ಕಲಾವಿದರಿಗೂ ಸ್ಫೂರ್ತಿಯಾಗಿದೆ. ಬಾಹುಬಲಿ ನಿರ್ಮಾ ಣದಲ್ಲಿ ರೇಖಾಚಿತ್ರದ ಹಿನ್ನೆಲೆಯಿದೆ ಎಂದರು.
ತಾಯಿಯ ಇಚ್ಛೆ: ಚಾವುಂಡರಾಯನ ತಾಯಿಯ ಇಚ್ಛೆಯಂತೆ ಫೌದಾನಪುರದಲ್ಲಿರುವ ಬಾಹುಬಲಿ ಸ್ವಾಮಿಯ ದರ್ಶನಕ್ಕೆ ತೆರಳುವಾಗ ಚಂದ್ರಗಿರಿ ಬೆಟ್ಟದಲ್ಲಿ ತಂಗಿದ್ದಾಗ ಕನಸು ಬಿತ್ತು. ಅದರಂತೆ ಚಾವುಂಡರಾಯ ವಿಂಧ್ಯಗಿರಿ ಬೆಟ್ಟದಲ್ಲಿರುವ ದೊಡ್ಡಕಲ್ಲಿಗೆ ಬಾಣ ಬಿಟ್ಟಾಗ ರೇಖಾಚಿತ್ರ ಮೂಡುತ್ತದೆ. ನಂತರ ಬೆಟ್ಟದ ತುದಿಯಲ್ಲಿ ನಿರ್ಮಾಣ ಮಾಡಿ ದರ್ಶನ ಪಡೆದು ತಲಕಾವೇರಿಗೆ ಹಿಂದಿರುಗುತ್ತಾರೆ. ಆದ್ದರಿಂದ ಚಿನ್ನಕ್ಕಿಂತ ಕಲೆಗೆ ಹೆಚ್ಚು ಬೆಲೆಯಿದೆ ಎಂದು ಹೇಳಿದರು. ನಂತರ ಚಿತ್ರಕಲಾ ಪರಿಷತ್ತು ಕಾರ್ಯದರ್ಶಿ ಅಪ್ಪಾಜಿ ಮಾತನಾಡಿ, ಪುರಾಣ ಚರಿತ್ರೆ ಹಾಗೂ ಧರ್ಮಗಳು ಸಹ ಕಲೆಗಳನ್ನು ಬಿಟ್ಟಿಲ್ಲ. ದೇಶದ ವಿವಿಧ ಭಾಗಗಳಿಂದ ಕಲಾವಿದರನ್ನು ಒಗ್ಗೂಡಿಸಿ ಕಾರ್ಯಕ್ರಮ ನಡೆಸುತ್ತಿರುವುದು ಪ್ರಶಂಸನೀಯ ಎಂದು ಹೇಳಿದರು.
ಹಿರಿಯ ಕಲಾವಿದ ರಾಮ ಶರ್ಮ, ಕ್ರಾಂತಿಕುಮಾರ್ ಪಾಂಡ್ಯ, ಪುಷ್ಪ ಪಾಂಡ್ಯ, ಸಂಜಯ ಕುಮಾರ್ ಇತರ ಕಲಾವಿದರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ