ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಅಗತ್ಯ


Team Udayavani, Jan 6, 2020, 1:41 PM IST

makalige

ಹಾಸನ: ಸಂಸ್ಕಾರವುಳ್ಳ ವಿದ್ಯೆ ಗೌರವಯುತ ಜೀವನ ಕಟ್ಟಿಕೊಳ್ಳಲು ಸಹಕಾರಿ ಯಾಗುತ್ತದೆ ಎಂದು ಶ್ರೀ ಆದಿ ಚುಂಚನಗಿರಿ ಮಹಾಸಂಸ್ಥಾನ ಹಾಸನ  ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಹೇಳಿದರು. ನಗರದ ಎಂ.ಜಿ. ರಸ್ತೆಯ ಶ್ರೀ ಆದಿಚುಂಚನಗಿರಿ ಆಂಗ್ಲ ಮಾಧ್ಯಮ ಶಾಲೆಯ  ಸಭಾಂಗಣದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ನಡೆಸಿದ ವಿಜ್ಞಾನ ವಿಷಯದ ಪ್ರಾಯೋಗಿಕ ಕಾರ್ಯಾಗಾರ ಉದ್ಘಾಟಿಸಿ ಆಶೀವರ್ಚನ  ನೀಡಿದರು.

ಸಮಯ ವ್ಯರ್ಥ ಮಾಡದಿರಿ: ವಿದ್ಯಾರ್ಥಿ ಜೀವನದಲ್ಲಿ ಸಮಯ  ವ್ಯರ್ಥ ಮಾಡದೇ ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಶ್ರದ್ಧೆ ಹಾಗೂ ಆಸಕ್ತಿ ತೋರಿ ಕಲಿಯಬೇಕು. ಆಗ ಮಾತ್ರ ಬದುಕಿನಲ್ಲಿ ಉನ್ನತ ಗುರಿಯೆಡೆಗೆ ಸಾಗಲು ಸಾಧ್ಯ ವಾಗುತ್ತದೆ ಇಲ್ಲವಾ ದಲ್ಲಿ ಅನರ್ಥಗಳು ಅವನತಿಯತ್ತ  ಕರೆದೊಯ್ಯುತ್ತವೆ ಎಂದು ವಿದ್ಯಾರ್ಥಿ ಗಳಿಗೆ ಎಚ್ಚರಿಕೆ ನೀಡಿದರು.

ಪವಿತ್ರ ಮನೋಭಾವನೆಯಿಂದ ವಿದ್ಯಾಭ್ಯಾಸದಲ್ಲಿ ತೊಡಗಿಕೊಳ್ಳುವ  ಗುಣವನ್ನು ವಿದ್ಯಾರ್ಥಿಗಳು ಬೆಳೆಸಿ ಕೊಳ್ಳಬೇಕು. ಆಸಕ್ತಿಯಿಂದ ಕಲಿಯುವ ವಿದ್ಯೆ ಸದಾ ಉಳಿಯುತ್ತದೆ ಹಾಗಾಗಿ ಮನಸ್ಸಿನಲ್ಲಿರುವ ಕೆಟ್ಟ ವಿಷಯಗಳನ್ನು  ಹೊರ  ಹಾಕಿದರೆ ಒಳಿತು ತುಂಬಿಸಿ ಕೊಳ್ಳಲು ನೆರವಾಗುತ್ತದೆ ಎಂದರು.

ಹೊಸ ವಿಷಯ ಕಲಿಯಿರಿ: ಹೊಸ ವಿಷಯಗಳ ಕಲಿಕೆಗೆ ವಿದ್ಯಾರ್ಥಿಗಳು  ಸದಾ  ಉತ್ಸುಕರಾಗಿರಬೇಕು. ಕಲಿಸುವ ವರಿಗೆ ಇರುವ ಶ್ರದ್ಧೆ ಕಲಿಯುವವರಿಗೂ ಇದ್ದರೆ ಮಾತ್ರ ಅದು ಸಾರ್ಥಕ ಎನಿಸಿ ಕೊಳ್ಳುತ್ತದೆ. ನಮ್ಮ ಜ್ಞಾನ  ಭಂಡಾರಕ್ಕೆ ಸದಾ ಹೊಸ ಷಯಗಳನ್ನು ತುಂಬುವ ಕೆಲಸ ನಿರಂತರವಾಗಿ ಆಗಬೇಕು.

ಆಗ ಮಾತ್ರ ಪರಿಪೂರ್ಣ ಮನುಷ್ಯ ಎನಿಸಿಕೊಳ್ಳಲು ಸಾಧ್ಯವಿದೆ ಎಂದು ವಿದ್ಯಾರ್ಥಿಗಳಿಗೆ ಶಂಭುನಾಥ ಸ್ವಾಮೀಜಿ ಕಿವಿಮಾತು ಹೇಳಿದರು. ಹೊಳೆರನಸೀಪುರ ತಾಲೂಕಿನ ಅಕ್ಷರ ದಾಸೋಹ ಸಹಾಯಕ  ಯೋಜನಾ ನಿರ್ದೇಶಕ ಹರೀಶ್‌ ಮಾತನಾಡಿ, ಯಾವುದೇ ಕೆಲಸದಲ್ಲಿ ಒಂದೆರಡು ಬಾರಿ ವಿಫ‌ಲರಾದರೆ ನಿರಾಶರಾಗ ಬೇಕಿಲ್ಲ. ಏಕೆಂದರೆ ಸತತ  ಪರಿಶ್ರಮ ದಿಂದ ಒಂದಿಲ್ಲೊಂದು ದಿನ ಸಾಧನೆ ಸಾಧ್ಯವಿದೆ ಎಂಬುದನ್ನು ಅರಿತು ಮುನ್ನಡೆಯಬೇಕು ಎಂದರು.

ನಿವೃತ್ತ ಉಪ ಪ್ರಾಂಶುಪಾಲ ಪಾರ್ಥ  ಸಾರಥಿ ಸಂಸ್ಥೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿಜ್ಞಾನ ಷಯದ ಪ್ರಾಯೋಗಿಕ ಕಾರ್ಯಾಗಾರ ನಡೆಸಿಕೊಟ್ಟರು. ಶ್ರೀ ಆದಿಚುಂಚನಗಿರಿ ಪಿಯು ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್‌, ಮಠದ ವ್ಯವಸ್ಥಾಪಕ ಚಂದ್ರಶೇಖರ್‌, ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ವಿಕ್ರಮ್‌ದೇವ್‌ ಪ್ರಭು, ಶಿಕ್ಷಕ ಮಂಜುನಾಥ್‌ ಹಾಗೂ ಇನ್ನಿತರರು ಹಾಜರಿದ್ದರು.

Ad

ಟಾಪ್ ನ್ಯೂಸ್

America: ಕಾರು-ಮಿನಿ ಟ್ರಕ್‌ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ

America: ಕಾರು-ಮಿನಿ ಟ್ರಕ್‌ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ

ಗೃಹ ಸಚಿವ ಪರಮೇಶ್ವರ್ ಮತ್ತು ಕುಟುಂಬ ಬೆಳ್ಮಣ್ಣು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ

ಗೃಹ ಸಚಿವ ಪರಮೇಶ್ವರ್ ಮತ್ತು ಕುಟುಂಬ ಬೆಳ್ಮಣ್ಣು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ

ಮೈದುಂಬಿದೆ ಬೆಳ್ಕಲ್‌ ತೀರ್ಥ: ಜಲಧಾರೆಯ ಸೊಬಗು; ಮೋಜು – ಮಸ್ತಿಯಲ್ಲಿ ಮೈಮರೆಯಬೇಡಿ

ಮೈದುಂಬಿದೆ ಬೆಳ್ಕಲ್‌ ತೀರ್ಥ: ಜಲಧಾರೆಯ ಸೊಬಗು; ಮೋಜು – ಮಸ್ತಿಯಲ್ಲಿ ಮೈಮರೆಯಬೇಡಿ

ಮದುವೆ ನೆಪದಲ್ಲಿ ಲೈಂಗಿ*ಕ ಕಿರುಕುಳ: ಆರ್‌ಸಿಬಿ ವೇಗಿ ಯಶ್‌ ದಯಾಳ್‌ ವಿರುದ್ಧ FIR ದಾಖಲು

ಮದುವೆ ನೆಪದಲ್ಲಿ ಲೈಂಗಿ*ಕ ಕಿರುಕುಳ: ಆರ್‌ಸಿಬಿ ವೇಗಿ ಯಶ್‌ ದಯಾಳ್‌ ವಿರುದ್ಧ FIR ದಾಖಲು

Tragedy: ಶಾಲಾ ಬಸ್ಸಿಗೆ ರೈಲು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಮೃ*ತ್ಯು, ಹಲವರಿಗೆ ಗಾಯ

Tragedy: ಶಾಲಾ ಬಸ್ಸಿಗೆ ರೈಲು ಢಿಕ್ಕಿ… ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃ*ತ್ಯು

1

ಒಂದಾ ಸಿನಿಮಾ ಮಾಡಿ, ಇಲ್ಲಾ ಟಿವಿಯಲ್ಲೇ ಹೋಗಿ ಕೂತ್ಕೊಳಿ: ನಿರ್ಮಾಪಕ ಶ್ರೀನಿವಾಸ್‌

ಈ ತರ ರಾಗಿ ಬನ್ ದೋಸೆ ಯಾವತ್ತಾದ್ರೂ ಮಾಡಿದ್ದೀರಾ! ರುಚಿಗೂ ಬೆಸ್ಟ್… ಆರೋಗ್ಯಕ್ಕೂ ಬೆಸ್ಟ್

ಈ ತರ ರಾಗಿ ಬನ್ ದೋಸೆ ಯಾವತ್ತಾದ್ರೂ ಮಾಡಿದ್ದೀರಾ! ರುಚಿಗೂ ಬೆಸ್ಟ್… ಆರೋಗ್ಯಕ್ಕೂ ಬೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R.Ashok

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಪ್ರಶ್ನೆಯೇ ಇಲ್ಲ: ಆರ್‌.ಅಶೋಕ್‌

KNrajanna

ಹಾಸನದಲ್ಲಿ ಎಚ್‌.ಡಿ.ದೇವೇಗೌಡ, ರೇವಣ್ಣರನ್ನು ಹಾಡಿ ಹೊಗಳಿದ ಸಚಿವ ಕೆ.ಎನ್‌.ರಾಜಣ್ಣ!

Hassan: ಹೃದಯಾಘಾತದಿಂದ ಮೃತಪಟ್ಟವರ ಮನೆಗೆ ವೈದ್ಯರ ತಂಡ ಭೇಟಿ

Hassan: ಹೃದಯಾಘಾತದಿಂದ ಮೃತಪಟ್ಟವರ ಮನೆಗೆ ವೈದ್ಯರ ತಂಡ ಭೇಟಿ

heart attack

Hassan; ಎಲ್ಲ ಸಾವುಗಳಿಗೆ ಹೃದಯಾಘಾತವೇ ಕಾರಣವಲ್ಲ: ಹಾಸನ ಡಿಎಚ್‌ಒ

three more passed away of heart attacks in Hassan

Hassan: ಮುಂದುವರಿದ ಸಾವಿನ ಸರಣಿ.. ಹೃದಯಾಘಾತಕ್ಕೆ ಮತ್ತೆ ಮೂವರು ಬಲಿ

MUST WATCH

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

udayavani youtube

ಸಾವಯವ ಅಕ್ಕಿ ಹಾಗೂ ಸಾವಯವ ಧಾನ್ಯಗಳ ಬಗ್ಗೆ ಮಾಹಿತಿ

ಹೊಸ ಸೇರ್ಪಡೆ

America: ಕಾರು-ಮಿನಿ ಟ್ರಕ್‌ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ

America: ಕಾರು-ಮಿನಿ ಟ್ರಕ್‌ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ

Arrested: ಕರೆ ಮಾಡಲು ಕೊಟ್ಟ ಮೊಬೈಲ್‌ ವಾಪಸ್‌ ಕೇಳಿದ್ದಕ್ಕೆ ಹಲ್ಲೆ: ಬಂಧನ

Arrested: ಕರೆ ಮಾಡಲು ಕೊಟ್ಟ ಮೊಬೈಲ್‌ ವಾಪಸ್‌ ಕೇಳಿದ್ದಕ್ಕೆ ಹಲ್ಲೆ: ಬಂಧನ

ರಸ್ತೆಯಲ್ಲಿ ಕಾರು ತಗುಲಿದ್ದನ್ನು ಪ್ರಶ್ನಿಸಿದ್ದಕ್ಕೆ ಮಾರಕಾಸ್ತ್ರ ತೋರಿಸಿ ಪ್ರಾಣ ಬೆದರಿಕೆ

ರಸ್ತೆಯಲ್ಲಿ ಕಾರು ತಗುಲಿದ್ದನ್ನು ಪ್ರಶ್ನಿಸಿದ್ದಕ್ಕೆ ಮಾರಕಾಸ್ತ್ರ ತೋರಿಸಿ ಪ್ರಾಣ ಬೆದರಿಕೆ

Bengaluru: ವರದಕ್ಷಿಣೆ‌: ಡಿವೈಎಸ್ಪಿ ವಿರುದ್ಧ ಕೇಸ್‌

Bengaluru: ವರದಕ್ಷಿಣೆ‌: ಡಿವೈಎಸ್ಪಿ ವಿರುದ್ಧ ಕೇಸ್‌

High Court: ಗಾರ್ಡನ್‌ ಅಲ್ಲ, ಫ್ಲೆಕ್ಸ್‌ ಸಿಟಿ: ಹೈಕೋರ್ಟ್‌ ಚಾಟಿ

High Court: ಗಾರ್ಡನ್‌ ಅಲ್ಲ, ಫ್ಲೆಕ್ಸ್‌ ಸಿಟಿ: ಹೈಕೋರ್ಟ್‌ ಚಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.