ಶುದ್ಧ ನೀರಿನ ಘಟಕ ನಿರ್ವಹಣೆ: ತನಿಖೆಗೆ ಸೂಚನೆ


Team Udayavani, Jan 23, 2020, 3:00 AM IST

shuddha-neerina

ಹಾಸನ: ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆಯ ಬಗ್ಗೆ ರಾಜ್ಯಾದ್ಯಂತ ವ್ಯಾಪಕ ದೂರುಗಳಿವೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ 131 ಘಟಕಗಳ ಪೈಕಿ 100ಕ್ಕೂ ಹೆಚ್ಚು ಘಟಕಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ದೂರಿನ ಬಗ್ಗೆ ಒಂದು ವಾರದಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್‌ ಹೊಯ್ಸಳ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನೆಯ ಸಂದರ್ಭದಲ್ಲಿ ಅರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ.ಶಿವಲಿಂಗೇಗೌಡ ಅರಸೀಕೆರೆ ತಾಲೂಕಿನಲ್ಲಿ ಬಹುತೇಕ ಶುದ್ಧ ನೀರಿನ ಘಟಕಗಳು ವಿಫ‌ಲವಾಗಿವೆ. ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು ಎಂಬ ಉದ್ದೇಶದಿಂದ ಸರ್ಕಾರ ಸ್ಥಾಪನೆ ಮಾಡಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ಉದ್ದೇಶವೇ ಸಫ‌ಲವಾಗುತ್ತಿಲ್ಲ. ನೀರು ಶುದ್ಧೀಕರಿಸುವ ಯಂತ್ರಗಳೇ ನಕಲಿ ಎಂಬ ಆರೋಪಗಳಿವೆ. ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ನಿರ್ವಹಿಸುತ್ತಿರುವ ಘಟಕಗಳ ಹೊರತುಪಡಿಸಿದರೆ ಜಿಲ್ಲಾ ಪಂಚಾಯತ್‌, ಖಾಸಗಿ ಕಂಪನಿಗಳು ಹಾಗೂ ಕೆಆರ್‌ಐಡಿಎಲ್‌ ನಿರ್ವಹಣೆಯ ಕುಡಿಯುವ ನೀರಿನ ಘಟಕಗಳು ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ದೂರಿದರು.

ಅಸಮಾಧಾನ: ಒಮ್ಮೆ ಸ್ಥಾಪನೆ ಮಾಡಿದ ಶುದ್ಧ ಕುಡಿಯುವ ನೀರಿನ ಘಟಕಗಳು ದುರಸ್ತಿಗೆ ಬಂದರೆ ಅವುಗಳನ್ನು ಗ್ರಾಮ ಪಂಚಾಯತಿಗಳೂ ದುರಸ್ತಿ ಮಾಡಿಸುವುದಿಲ್ಲ. ಹಾಗಾಗಿ ಅರಸೀಕೆರೆ ತಾಲೂಕಿನಲ್ಲಿ ಶುದ್ಧ ನೀರಿನ ಘಟಕಗಳು ಬಹುಪಾಲು ಸ್ಥಗಿತವಾಗಿದ್ದು, ಈ ಘಟಕಗಳಿಗೆ ಸರ್ಕಾರ ವೆಚ್ಚ ಮಾಡಿರುವ ಸುಮಾರು 15 ಕೋಟಿ ರೂ. ವ್ಯರ್ಥವಾಗುತ್ತಿದೆ ಎಂದು ಆಸಮಾಧಾನ ವ್ಯಕ್ತಪಡಿಸಿದರು.

ಬೇರೆ ಕ್ಷೇತ್ರದ ವಿಷಯ ನನಗೆ ಬೇಡ: ಮಧ್ಯ ಪ್ರವೇಶಿಸಿದ ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಸಿ.ಎನ್‌.ಬಾಲಕೃಷ್ಣ ನಮ್ಮ ಕ್ಷೇತ್ರದಲ್ಲಿ ಶೇ.90 ರಷ್ಟು ಘಟಕಗಳು ಸಮರ್ಪಕವಾಗಿ ನಡೆಯುತ್ತಿವೆ. ಕೆಆರ್‌ಐಡಿಎಲ್‌ನ ಘಟಕಗಳು ಮಾತ್ರ ನಡೆಯುತ್ತಿಲ್ಲ ಎಂದು ಹೇಳಿದಾಗ ಸಿಟ್ಟಿಗೆದ್ದ ಅರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ.ಶಿವಲಿಂಗೇಗೌಡ ಬೇರೆ ವಿಧಾನಸಭಾ ಕ್ಷೇತ್ರಗಳ ಗೊಡವೆ ನನಗೆ ಬೇಡ ನನ್ನ ಕ್ಷೇತ್ರದಲ್ಲಿ ಹಾಳಾಗಿವೆ. ಈ ಬಗ್ಗೆ ತನಿಖೆ ನಡೆಸಿ. ನಾನು ಸುಳ್ಳು ಹೇಳಿದ್ದರೆ ನೇಣು ಹಾಕಿಸಿಕೊಳ್ಳಲು ಸಿದ್ಧ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಂಜಿನಿರ್‌ಗಳಿಂದ ಮಾಹಿತಿ ಪಡೆದ ಸಚಿವರು: ಅರಸೀಕೆರೆ ತಾಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಕುಡಿಯುವ ನೀರು ಪೂರೈಕೆ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳಿಂದಲೂ ಸಚಿವ ಈಶ್ವರಪ್ಪ ಅವರು ಮಾಹಿತಿ ಪಡೆದರು. 131 ಘಟಕಗಳ ಪೈಕಿ 29 ಘಟಕಗಳು ಮಾತ್ರ ಸ್ಥಗಿತವಾಗಿವೆ. ಇನ್ನುಳಿದ ಘಟಕಗಳು ಸಮರ್ಪಕವಾಗಿ ನಿರ್ವಹಣೆಯಾಗುತ್ತಿವೆ ಎಂದು ಎಂಜಿನಿಯರ್‌ ಮಾಹಿತಿ ನೀಡಿದರು. ಅದಕ್ಕೂ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಒಪ್ಪದಿದ್ದಾಗ ಸಚಿವರು ತನಿಖೆಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಉಸ್ತುವಾರಿಯಲ್ಲಿ ಉಪ ಕಾರ್ಯಕದರ್ಶಿ ನೇತೃತ್ವದ ಹೊರ ತಾಲೂಕಿನ ತಾ.ಪಂ. ಇಒ ಮತ್ತು ಎಇಇ ಒಳಗೊಂಡ ತಂಡವು ತನಿಖೆ ನಡೆಸಿ ಒಂದು ವಾರದಲ್ಲಿ ವರದಿ ನೀಡಬೇಕು ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಅವರು ನಿರ್ದೇಶನ ನೀಡಿದರು.

ಕಸ ವಿಲೇವಾರಿಗೆ ಜಾಗ ಕೊಡಿಸಿ: ಗ್ರಾಮೀಣ ಪ್ರದೇಶದಲ್ಲಿ ಘನ ತಾಜ್ಯ ವಿಲೇವಾಗಿ ಘಟಕಗಳನ್ನು ಪ್ರತಿ ಗ್ರಾಮ ಪಂಚಾಯತ್‌ ಕಚೇರಿ ವ್ಯಾಪ್ತಿಯಲ್ಲೂ ಸ್ಥಾಪಿಸಬೇಕಾಗಿದೆ. ಹಾಸನ ಜಿಲ್ಲೆಯ 267 ಗ್ರಾಮ ಪಂಚಾಯತ್‌ಗಳ ಪೈಕಿ 35 ಗ್ರಾಮ ಪಂಚಾಯತ್‌ಗಳಲ್ಲಿ ಮಾತ್ರ ಘನ ತಾಜ್ಯ ವಿಲೇವಾರಿ ಘಕಗಳ ಸ್ಥಾಪನೆಗೆ ಭೂಮಿ ನಿಗದಿಪಡಿಸಲಾಗಿದೆ. ಇನ್ನುಳಿದ ಗ್ರಾಮ ಪಂಚಾಯತ್‌ಗಳಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ತುರ್ತಾಗಿ ಭೂಮಿ ಗುರ್ತಿಸಿಕೊಡಬೇಕು. ತಾಜ್ಯ ವಿಲೇವಾರಿ ಘಟಕಗಳ ಸ್ಥಾಪನೆಗೆ ಪ್ರತಿ ಗ್ರಾಮ ಪಂಚಾಯತಿಗೂ ಕೇಂದ್ರ ಸರ್ಕಾರ 20 ಲಕ್ಷ ರೂ. ಕೊಡುತ್ತದೆ ಎಂದು ಹೇಳಿದ ಈಶ್ವರಪ್ಪ ಅವರು ಶಾಸಕರು ನೇತೃತ್ವ ವಹಿಸಿಕೊಂಡು ಗ್ರಾಮ ಪಂಚಾಯತಿಗಳಲ್ಲಿ ತಾಜ್ಯ ವಿಲೇವಾರಿ ಘಟಕಗಳ ಸ್ಥಾಪನೆಗೆ ಸ್ಥಳ ಒದಗಿಸಬೇಕು ಎಂದು ಮನವಿ ಮಾಡಿದರು.

ಅಕ್ರಮ ಸಾಗುವಳಿ: ಶಾಸಕ ಎ.ಟಿ.ರಾಮಸ್ವಾಮಿ ಅವರು ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಭೂಮಿಯನ್ನು ರೈತರು ಅಕ್ರಮವಾಗಿ ಸಾಗುವಳಿ ಮಾಡಿಕೊಂಡು ಹಕ್ಕುಪತ್ರ ನೀಡಲು ಅರ್ಜಿ ಸಲ್ಲಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕ ಉದ್ದೇಶಕ್ಕೆ ಭೂಮಿ ಉಳಿದಿಲ್ಲ. ಈಗಲಾದರೂ ಅಧಿಕಾರಿಗಳು ಸಾರ್ವಜನಿಕ ಉದ್ದೇಶಕ್ಕೆ ಭೂಮಿಯನ್ನು ಹುಡುಕಿ ಕಾಯ್ದಿರಿಸಬೇಕು ಎಂದು ಒತ್ತಾಯಿಸಿದರು.

ಶೇ.40:60 ಅನುಪಾತ ಮೀರದಿರಲಿ: ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಯಲ್ಲಿ ಜಿಲ್ಲೆಗೆ 2019 -20 ನೇ ಸಾಲಿನಲ್ಲಿ 62 ಲಕ್ಷ ಮಾನವ ದಿನಗಳ ಉದ್ಯೋಗ ಸೃಷ್ಟಿಯ ಗುರಿಯಿದ್ದು 273 ಕೋಟಿ ರೂ. ವೆಚ್ಚದ ಅಂದಾಜು ಮಾಡಲಾಗಿತ್ತು. ಈ ವರೆಗೆ 191 ಕೋಟಿ ರೂ. ವೆಚ್ಚವಾಗಿದೆ. ಕೂಲ ಮೊತ್ತ 2.06 ಕೋಟಿ ರೂ. ಸಾಮಗ್ರಿ ಮೊತ್ತ 57 .26 ಕೋಟಿ ರೂ. ಪಾವತಿಯ ಬಾಕಿ ಇದೆ ಎಂದು ಜಿಪಂ ಸಿಇಒ ಪರಮಶ್‌ ಸಭೆಗೆ ಮಾಹಿತಿ ನೀಡಿದರು.

ಕೂಲಿ ಮೊತ್ತಕ್ಕಿಂತ ಸಾಮಗ್ರಿ ಮೊತ್ತ ಶೇ. 60 ಕ್ಕಿಂತ ಹೆಚ್ಚಿರುವ ಬಗ್ಗೆ ಆರ್‌ಡಿಪಿಆರ್‌ ಪ್ರಧಾನ ಕಾರ್ಯದರ್ಶಿ ಎಲ್‌.ಕೆ.ಅತೀಕ್‌ ಅವರು ಆಕ್ಷೇಪ ವ್ಯಕ್ತಪಡಿಸಿದರು. ಇನ್ನು ಮುಂದೆ ಕೂಲಿ ಮತ್ತು ಸಾಮಗ್ರಿ ವೆಚ್ಚ ಶೇ. 40 ಮತ್ತು 60 ರಷ್ಟನ್ನು ಮೀರದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಬಿ.ಎಸ್‌ ಶ್ವೇತಾ ಮಾತನಾಡಿ, ಹಾಸನ ಜಿಲ್ಲಾ ಪಂಚಾಯತ್‌ಗೆ ಹೆಚ್ಚು ಅನುದಾನ ನೀಡಬೇಕು. ಮಹಾತ್ಮಗಾಂಧಿ ಗ್ರಾಮೀಣ ಉಧ್ದೋಗ ಖಾತರಿ ಯೋಜನೆಗೆ ಹೆಚ್ಚು ಅನುದಾನ ನೀಡಬೇಕು ಎಂದು ಸಚಿವರಿಗೆ ಮನವಿ ಮಾಡಿದರು.

ಕುಡಿಯುವ ನೀರು ಯೋಜನೆ ಪೂರ್ಣಗೊಳಿಸಿ
ಹಾಸನ: ಜಿಲ್ಲೆಯಲ್ಲಿ ಕಾವೇರಿ ಮತ್ತು ಹೇಮಾವತಿ ನದಿ ಹರಿಯುತ್ತಿದ್ದರೂ ಹಲವೆಡೆ ಇನ್ನೂ ಕುಡಿಯುವ ನೀರಿನ ಸಮಸ್ಯೆಗಳಿವೆ ಯಾವುದಾದರೊಂದು ಯೋಜನೆಯಡಿ ಕುಡಿಯುವ ನೀರು ಒದಗಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ಸೂಚಿಸಿದರು. ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಚಾಲ್ತಿಯಲ್ಲಿರುವ ಬಹುಗ್ರಾಮ ಕುಡಿಯುವ ನೀರು ಯೋಜನೆ, ಅಮೃತ ಯೋಜನೆ ಜಲಧಾರೆ ಹಾಗೂ ಇತರೆ ಯೋಜನೆಗಳಲ್ಲಿ ಪ್ರಾರಂಭಿಸ ಲಾಗಿರುವ ಕೆಲಸಗಳನ್ನು ತ್ವರಿತವಾಗಿ ಮುಗಿಯಬೇಕು.

ಅರಸೀಕೆರೆ ತಾಲೂಕಿಗೆ ಯಗಚಿ, ಹೇಮಾವತಿ ನದಿಯಿಂದ ಕುಡಿಯುವ ನೀರು ಪೂರೈಸುವ ಬಹುಗ್ರಾಮ ಕುಡಿಯುವ ನೀರು ಯೋಜನೆಗಳನ್ನು ಪೂರ್ಣಗೊಳಿಸಲು ಬೇಕಾಗಿರುವ ಹೆಚ್ಚುವರಿ ಹಣ ಬಿಡುಗಡೆ ಮಾಡಲಾಗುವುದು, ಫೆಬ್ರವರಿ ಅಂತ್ಯದೊಳಗೆ ಕಾಮಗಾರಿ ಮುಗಿಸಿ ಎಂದು ಸಚಿವರು ಸೂಚನೆ ನೀಡಿದರು. ಶಾಸಕ ಕೆ.ಎಂ.ಶಿವಲಿಂಗೇಗೌಡ ಹಾಗೂ ಸಿ.ಎನ್‌.ಬಾಲಕೃಷ್ಣ ಅರಸೀಕೆರೆ ಮತ್ತು ಚನ್ನರಾಯಪಟ್ಟಣ ತಾಲೂಕುಗಳ ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆ, ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಹಾಗೂ ಅಗತ್ಯ ಅನುದಾನಗಳ ಬಗ್ಗೆ ಸಚಿವರ ಗಮನ ಸೆಳೆದರು.

ಹಾಸನ ಕ್ಷೇತದ ಶಾಸಕ ಪ್ರೀತಂ ಜೆ. ಗೌಡ ಮಾತನಾಡಿ, ಹಾಸನ ನಗರ ಬೆಳೆಯುತ್ತಿದೆ.ಆದಕ್ಕೆ ಹೊಂದಿಕೊಂಡಿರುವ 8 ಗ್ರಾಮ ಪಂಚಾಯ್ತಿಗಳಲ್ಲಿ ಸುಮಾರು 80 ಸಾವಿರ ಜನಸಂಖ್ಯೆಯಿದ್ದು, ಪ್ರತಿ ದಿನ ಕೊಳವೆ ಬಾವಿ ನೀರನ್ನೇ ಆಶ್ರಯಿಸಬೇಕಾಗಿದೆ. ಹಾಲಿ ಚಾಲ್ತಿಯಲ್ಲಿರುವ ಅಮೃತ ಯೋಜನೆಯನ್ನು ಗ್ರಾಮ ಪಂಚಾಯತಿಗಳಿಗೂ ವಿಸ್ತರಣೆ ಮಾಡಲು ಕಷ್ಟವಾಗಿದೆ ಹಾಗಾಗಿ ಹೇಮಾವತಿ ನದಿಯಿಂದ ಹಾಸನ ಕಸಬಾ ತಾಲೂಕಿನ ಹೋಬಳಿ ಸಾಲಗಾಮೆ, ಕಟ್ಟಾಯ ಹೋಬಳಿಗಳಿಗೆ ನೀರು ಪೂರೈಸುವ ಹೊಸ ಯೋಜನೆ ಜಾರಿಗೊಳಿಸಿ ಎಂದು ಮನವಿ ಮಾಡಿದರು.

ಶಾಸಕ ಎ.ಟಿ. ರಾಮಸ್ವಾಮಿ ಮಾತನಾಡಿ, ಅರಕಲಗೂಡು ಕ್ಷೇತ್ರದಲ್ಲಿ ಕಾವೇರಿ-ಹೇಮಾವತಿ ನದಿ ಹರಿದರೂ ಇನ್ನೂ ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವವಿದೆ. ಹಾಗಾಗಿ ಪೂರಕವಾದ ಯೋಜನೆಯನ್ನು ಅನುಷ್ಠಾನಗೊಳಿಸಬೇಕು, ಕೆರೆಗಳನ್ನು ತುಂಬಿಸುವ ಕಾಮಗಾರಿಗಳು ನಡೆಯಬೇಕು ಎಂದರು. ಜಿಪಂ ಅಧ್ಯಕ್ಷೆ ಬಿ.ಎಸ್‌.ಶ್ವೇತಾ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್‌.ಕೆ.ಅತೀಕ್‌, ಗ್ರಾಮೀಣಾಭಿವೃದ್ಧಿ ಸಚಿವರ ವಿಶೇಷ ಕರ್ತವ್ಯ ಅಧಿಕಾರಿ ಜಯರಾಂ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಮುಖ್ಯ ಇಂಜಿನಿಯರ್‌ ಪ್ರಕಾಶ್‌, ಜಿಪಂ ಸಿಇಒ ಪರಮೇಶ್‌ ಇದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.