30 ವರ್ಷದಿಂದ ಪಾಳು ಬಿದ್ದ ಕ್ವಾಟ್ರಸ್‌ ತೆರವುಗೊಳಿಸಿ


Team Udayavani, Jan 29, 2021, 8:11 PM IST

Clear the quartz that has been ruined for 30 years

ಆಲೂರು: ಪಟ್ಟಣ ಪಂಚಾಯಿತಿಗೆ ಸೇರಿದ ವಾಣಿಜ್ಯ ಸಂಕೀರ್ಣ ಹಿಂಭಾಗದ ಹಳೇ ಪೊಲೀಸ್‌ ಕ್ವಾಟ್ರಸ್‌ ಶಿಥಿಲಗೊಂಡು, ಗಿಡಗಂಟಿಗಳು ಬೆಳೆದು ಅಕ್ರಮ ಚಟುವಟಿಕೆ ತಾಣವಾಗಿದೆ. ಇದರಿಂದ ಅಕ್ಕಪಕ್ಕದ ಅಂಗಡಿ ಮಾಲಿಕರಿಗೆ, ಸ್ಥಳೀಯರು ನಿವಾಸಿಗಳಿಗೆ ತೀವ್ರತೊಂದರೆ ಆಗುತ್ತಿದೆ. ಪಟ್ಟಣದ ತಾಲೂಕು ಕಚೇರಿ, ಪಪಂ, ಪೊಲೀಸ್‌ ಠಾಣೆಗೆ ಕೂಗಳತೆ ದೂರದಲ್ಲಿನ ಈ ಹಳೇ ಕ್ವಾಟ್ರಸ್‌ 30 ವರ್ಷಗಳಿಂದ ಪಾಳು ಬಿದ್ದಿವೆ. ಕಟ್ಟಡದ ಸುತ್ತಲು ಗಿಡ ಗಂಟಿಗಳು ಬೆಳೆದು, ಕಟ್ಟಡ ಸಂಪೂರ್ಣ ಮುಚ್ಚಿ ಹೋಗಿದೆ. ಪುಂಡ ಪೋಕರಿಗಳಿಗೆ ಅಕ್ರಮ ಚಟುವಟಿಕೆಗಳ ಅಡ್ಡವಾಗಿದೆ. ಸಾರ್ವಜನಿಕರು ಮಲ, ಮೂತ್ರ ವಿಸರ್ಜನೆ ತಾಣವಾಗಿ ಮಾಡಿಕೊಂಡಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯ: ಕ್ವಾಟ್ರಸ್‌ ಅಕ್ಕಪಕ್ಕದ ನಿವಾಸಿಗಳು, ಅಂಗಡಿಯವರು ಕಸ ಸುರಿಯುತ್ತಿದ್ದು, ಕ್ವಾಟ್ರಸ್‌ ಜಾಗ ತಿಪ್ಪೆಗುಂಡಿಯಾಗಿದೆ. ಶಿಥಿಲಗೊಂಡ ಕಟ್ಟಡದ ಒಳಗಡೆ ಕುಡಿದು ಬಿಸಾಡಿರುವ ಮದ್ಯದ ಬಾಟಲಿಗಳು, ಎಲ್ಲಂದರಲ್ಲಿ ಕಸ ಹಾಕಿರುವುದರಿಂದ ಸೊಳ್ಳೆಗಳ ಕಾಟ ಹೇಳತೀರದಾಗಿದೆ. ಕ್ರೀಮಿ ಕೀಟಗಳ ಉತ್ಪತ್ತಿಯ ತಾಣವಾಗಿದೆ. ಈ ಹಳೇ ಕ್ವಾಟ್ರಸ್‌ ಬಗ್ಗೆ ಚಿಂತಿಸದೆ, ಅಧಿಕಾರಿಗಳು ತೋರುತ್ತಿರುವ ದಿವ್ಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ತೊಂದರೆ ಅನುಭವಿಸಬೇಕಿದೆ.

ಪಟ್ಟಣದ ಶೆಟ್ಟರ್‌ ಬೀದಿ, 10ನೇ ವಾರ್ಡ್‌, ಅಂಬೇಡ್ಕರ್‌ ರಸ್ತೆಗೆ ಹೋಗುವ ಸಾರ್ವಜನಿಕರು ಈ ಕಟ್ಟಡದ ಪಕ್ಕದ ರಸ್ತೆಯ ಮೂಲಕವೇ ಸಂಚರಿಸಬೇಕು. ಕತ್ತಲು ಕವಿದಂತೆ ಕಳ್ಳಕಾಕರ ಉಪಟಳ ಹೆಚ್ಚಾಗುತ್ತದೆ. ಸಂಜೆ 7 ಗಂಟೆ ನಂತರ ಈ ರಸ್ತೆಯಲ್ಲಿ ಜನ ಭಯದಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕ್ವಾಟ್ರಸ್‌ ತೆರವು ಗೊಳಿಸಲಿ, ಅಲ್ಲಿಯವರೆಗೆ ಗಿಡಗಂಟಿ ತೆರವು ಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಿದೆ. ಈ ಕಟ್ಟಡದ ಪಕ್ಕದಲ್ಲಿ ಪಟ್ಟಣ ಪಂಚಾಯಿತಿಗೆ ಸೇರಿದ ವಾಣಿಜ್ಯ ಸಂಕೀರ್ಣವಿದ್ದು, ಟೈಲರ್‌ ಶಾಪ್‌, ಜೆರಾಕ್ಸ್ ಅಂಗಡಿ, ಎಲೆಕ್ಟ್ರೀಕಲ್‌ ಅಂಗಡಿ, ಬೇಕರಿ, ಮರಗೆಲಸ ನಡೆಸುವ ಅಂಗಡಿಗಳು ಇವೆ. ದಿನಕ್ಕೆ ನೂರಾರು ಜನರು ಇಲ್ಲಿಗೆ ಬಂದು ಹೋಗುತ್ತಾರೆ.

ಇದನ್ನೂ ಓದಿ:ಹಿಟಾಚಿ ವಾಹನಕ್ಕೆ ತಗುಲಿದ ವಿದ್ಯುತ್ ತಂತಿ: ಕೂದಲೆಳೆ ಅಂತರದಲ್ಲಿ ತಪ್ಪಿದ ಮಹಾದುರಂತ

ಹಳೇ ಪೊಲೀಸ್‌ ಕ್ವಾಟ್ರಸ್‌ ಸ್ವತ್ಛತೆ ಇಲ್ಲದೆ ಪಾಳು ಬಿದ್ದಿರುವ ಕಾರಣದಿಂದ ನಗರಕ್ಕೆ ಬಂದು ಹೋಗುವವರು ಮಲಮೂತ್ರ ವಿಸರ್ಜನೆ ಇಲ್ಲಿಯೇ ಮಾಡುತ್ತಿದ್ದಾರೆ.ಸ್ವತ್ಛತೆ ಕಾಣದ ಈ ಕ್ವಾಟ್ರಸ್‌ ಬಳಿ ಇರು  ಅಂಗಡಿ ಮುಗ್ಗಟ್ಟುಗಳಿಗೆ ವ್ಯಾಪಾರಸ್ಥರು ಬರಲು ಮುಜುಗರ ಪಡುತ್ತಿದ್ದಾರೆ. ವ್ಯಾಪಾರದ ಮೇಲೆ ಗಂಭೀರ ಪರಿಣಾಮ ಬೀರಿದೆ. ಅಂಗಡಿಯ ಬಾಡಿಗೆ ಕಟ್ಟಲು ಕೂಡ ಸಾಧ್ಯವಾಗುತ್ತಿಲ್ಲ, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಇತ್ತ ಗಮನಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಅಂಗಡಿ ಮಾಲಿಕರು ಮನವಿ ಮಾಡಿದ್ದಾರೆ. ಜನಪ್ರತಿನಿಧಿಗಳು, ಸಂಬಂಧಿಸಿದ ಅಧಿಕಾರಿಗಳು ಸ್ವತ್ಛತೆ ಕಾಣದೆ ಸಾರ್ವಜನಿಕರಿಗೆ ದಿನನಿತ್ಯ ಒಂದಲ್ಲಾ ಒಂದು ರೀತಿಯ ಸಮಸ್ಯೆ ಉಂಟು ಮಾಡುತ್ತಿರುವ ಹಳೇ ಪೊಲೀಸ್‌ ಕ್ವಾಟ್ರಸ್‌ ಕಟ್ಟಡ ತೆರವು ಗೊಳಿಸಿ ಜನರಿಗೆ ಶಾಶ್ವತ ಪರಿಹಾರ ನೀಡುತ್ತಾರೆ ಎಂದು ಕಾದು ನೋಡಬೇಕಿದೆ.

ಕುಮಾರಸ್ವಾಮಿ ಆಲೂರು

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.