ಹಾಸನ-ಸಕಲೇಶಪುರ; ರಾಷ್ಟ್ರೀಯ ಹೆದ್ದಾರಿ 6 ತಿಂಗಳು ಮುಚ್ಚುವುದಕ್ಕೆ ವಿರೋಧ
4 ವರ್ಷ ಗಳಾಗುತ್ತ ಬಂದರೂ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಕಾಣದಿರುವುದು ಜನರಲ್ಲಿ ಅಸಮಾಧಾನ ಸೃಷ್ಟಿಸಿದೆ.
Team Udayavani, Jan 10, 2022, 11:20 AM IST
ಸಾಂದರ್ಭಿಕ ಚಿತ್ರ.
ಸಕಲೇಶಪುರ: ರಾಷ್ಟ್ರೀಯ ಹೆದ್ದಾರಿ 75ರ ಚತುಷ್ಪಥ ರಸ್ತೆ ಕಾಮಗಾರಿಗಾಗಿ ರಾಷ್ಟ್ರೀಯ ಹೆದ್ದಾರಿ 75ನ್ನು ಸುಮಾರು 6 ತಿಂಗಳ ಕಾಲ ಮುಚ್ಚಲು ಅವಕಾಶ ನೀಡುವಂತೆ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಿರುವ ರಾಜ್ಕಮಲ್ ಕಂಪೆನಿ ಮನವಿ ಮಾಡಿರುವುದು ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳ ಆಕ್ರೋಶಕ್ಕೆ ಕಾರಣವಾಗಿದೆ.
ಹಾಸನ-ಸಕಲೇಶಪುರ-ಮಾರನಹಳ್ಳಿ ನಡುವಿನ ಸುಮಾರು 56 ಕಿ.ಮೀ. ದೂರದ ರಸ್ತೆಯನ್ನು ಮೊದಲಿಗೆ ಚತುಷ್ಪಥ ರಸ್ತೆ ಕಾಮ ಗಾರಿ ಮಾಡಲು ಐಸೋಲೆಕ್ಸ್ ಕಂಪೆನಿ ಗುತ್ತಿಗೆ ಪಡೆದಿತ್ತು. ಈ ಕಂಪೆನಿ ದಿವಾಳಿಯಾದ್ದರಿಂದ ಉಪ ಗುತ್ತಿಗೆ ಪಡೆದಿದ್ದ ರಾಜ್ಕಮಲ್ ಕಂಪೆನಿಯೇ ಕಾಮಗಾರಿ ಮುಂದು ವರಿಸಲು ಒಪ್ಪಿಕೊಂಡಿದೆ. ಈಗ ಕಾಮಗಾರಿ ಪ್ರಾರಂಭವಾಗಿ 4 ವರ್ಷ ಗಳಾಗುತ್ತ ಬಂದರೂ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಕಾಣದಿರುವುದು ಜನರಲ್ಲಿ ಅಸಮಾಧಾನ ಸೃಷ್ಟಿಸಿದೆ.
ಇದನ್ನೂ ಓದಿ:ಹಿಮವರ್ಷ : ರಾಜ್ಯದ 400ಕ್ಕೂ ಅಧಿಕ ಪ್ರಮುಖ ರಸ್ತೆಗಳು ಬಂದ್
ಆರು ತಿಂಗಳಲ್ಲಿ ರಸ್ತೆ ಕಾಮಗಾರಿ ಸಾಧ್ಯವೇ?
ಹಾಸನ-ಸಕಲೇಶಪುರ ನಡುವಿನ 40 ಕಿ.ಮೀ. ದೂರದ ನೇರ ರಸ್ತೆ ಶೇ.50-60ರಷ್ಟು ಮುಗಿಸಲು 4 ವರ್ಷ ತೆಗೆದುಕೊಳ್ಳಲಾಗಿದೆ. ಇನ್ನು ಈ ಮಾರ್ಗದಲ್ಲಿ ಕಾಮಗಾರಿ ಮುಗಿಸದೆ ಏಕಾಏಕಿ ಸಕಲೇಶಪುರ ಹಾಗೂ ಮಾರನಹಳ್ಳಿ ನಡುವಿನ ಪಶ್ಚಿಮಘಟ್ಟದ ಕಡಿದಾದ ತಿರುವಿನ ರಸ್ತೆಯ ಕಾಮಗಾರಿ ಮುಗಿಸಲು 6 ತಿಂಗಳು ಕಾಲಾವಕಾಶ ಕೇಳಿದ್ದು, ಹೆದ್ದಾರಿ ಮುಚ್ಚಲು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳ ಮುಖಂಡರು ಮೊದಲಿಗೆ ಹಾಸನ-ಸಕಲೇಶಪುರ ನಡುವಿನ ಕಾಮಗಾರಿ ಮುಗಿಸಿದ ಬಳಿಕ ಸಕಲೇಶಪುರ ಹಾಗೂ ಮಾರನಹಳ್ಳಿ ನಡುವಿನ ಕಾಮಗಾರಿಗೆ ರಸ್ತೆ ಬಂದ್ ಮಾಡಲಿ ಎಂದಿದ್ದಾರೆ. ಕಾಮಗಾರಿ ಮುಗಿಸದೆ ಏಕಾಏಕಿ ಸಕಲೇಶಪುರ ಮಾರನಹಳ್ಳಿ ನಡುವೆ ಹೆದ್ದಾರಿ ಬಂದ್ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಜನಾದ್ರಿಗೆ ಭೂಸ್ವಾಧೀನ : ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ, ಹೆಚ್ಚಿನ ಪರಿಹಾರಕ್ಕೆ ಪಟ್ಟು
ವಿದ್ಯುತ್ ಕಂಪೆನಿಗಳ ಸುಧಾರಣೆ: ಏಕಸದಸ್ಯ ಸಮಿತಿ ಅವಧಿ ಮುಂದುವರಿಕೆ ;ಸಿಎಂ ಸೂಚನೆ
ಬಹುನಿರೀಕ್ಷಿತ ಕಾಶಿ ಯಾತ್ರೆಗೆ ಅಂತಿಮ ಮಾರ್ಗಸೂಚಿ: ಸರಕಾರದಿಂದ ಅಧಿಕೃತ ಆದೇಶ
ರಸ್ತೆಯಲ್ಲಿ ಸಿಕ್ಕ ಹಣವನ್ನು ವಾರಸುದಾರರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಟೀ ಅಂಗಡಿ ಮಾಲೀಕ
ರಾಜ್ಯ ಬಿಜೆಪಿಯ ಮಾಧ್ಯಮ ವಕ್ತಾರ ಚಂದ್ರಶೇಖರ್ ನಿಧನ
MUST WATCH
ತನ್ನ ಕ್ಷೇತ್ರದಲ್ಲಿನ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾತನಾಡಿದ ಖಾದರ್
ಚಿಕ್ಕಮಗಳೂರು : ವೀಲಿಂಗ್ ಶೋಕಿ ಮಾಡಿದವರಿಗೆ ಖಾಕಿಗಳ ಬುಲ್ಡೋಜರ್ ಟ್ರೀಟ್ಮೆಂಟ್
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಹೊಸ ಸೇರ್ಪಡೆ
ಗುಜರಾತ್: ವಿದ್ಯಾರ್ಥಿನಿಯರಿಗೆ ಬಿಜೆಪಿ ಸೇರುವಂತೆ ಪ್ರಾಂಶುಪಾಲರ ಸೂಚನೆ: ಕಾಂಗ್ರೆಸ್ ಆಕ್ಷೇಪ
ಜೆಟ್ಏರ್ ವೇಸ್ಗೆ ವಿಮಾನ ಯಾರು ಕೊಡ್ತಾರೆ?
ಕಾಶ್ಮೀರದಲ್ಲಿ ಮತ್ತಿಬ್ಬರು ಉಗ್ರರ ಹತ್ಯೆ: ಲಷ್ಕರ್ ಉಗ್ರನ ಬಂಧನ; ಶಸ್ತ್ರಾಸ್ತ್ರಗಳು ವಶ
ಮಹೀಂದ್ರಾ ಸ್ಕಾರ್ಪಿಯೋ-ಎನ್ ಬಿಡುಗಡೆ: ಜು.30ರಿಂದ ಮುಂಗಡ ಬುಕಿಂಗ್ ಆರಂಭ
ಕೆಂಪೇಗೌಡ ಭಾವಚಿತ್ರಕ್ಕೆ ಅಪಮಾನ : ತಪ್ಪಿಸ್ಥರ ವಿರುದ್ದ ಕ್ರಮ ; ಶಾಸಕ ಡಾ.ರಂಗನಾಥ್