ಸಿಎಂಗೆ ಮರ್ಯಾದೆ ಇಲ್ಲವಾ ? ನಾಚಿಕೆ ಆಗಲ್ಲವಾ ?
Team Udayavani, Feb 26, 2017, 9:35 AM IST
ಹಾಸನ: ಜಿಲ್ಲಾಡಳಿತವು ಕುಡಿಯುವ ನೀರಿನ ಅಭಾವ ಪರಿಹರಿಸಲು ಸಹಕರಿಸುತ್ತಿಲ್ಲ. ಅಧಿಕಾರಿಗಳು ಮನ ಬಂದಂತೆ ನಡೆದುಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿಯವರು ನೀಡಿದ ಆದೇಶವನ್ನು ಅಧಿಕಾರಿಗಳು ಕೇಳುವುದಿಲ್ಲವೆಂದರೆ ಮುಖ್ಯಮಂತ್ರಿಯವರಿಗೆ ನಾಚಿಕೆ ಆಗಲ್ಲವಾ? ಅವರಿಗೆ ಮರ್ಯಾದೆ ಇಲ್ಲವಾ ? ಇಂತಹ ಆಡಳಿತ ನಡೆಸಲು ಮುಖ್ಯಮಂತ್ರಿಯಾಗಬೇಕಾ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ವಿರುದ್ಧ ಕಿಡಿಕಾರಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅರಸೀಕೆರೆಯಲ್ಲಿ ಫೆ.18 ರಂದು ನಡೆದ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ವೀರಾವೇಶದಿಂದ ಮಾತನಾಡಿದರು. ಕುಡಿಯುವ ನೀರಿನ ಸಮಸ್ಯೆ ಪರಿಹರಿಸದಿದ್ದರೆ ಡೀಸಿ, ಸಿಇಒ ಹೊಣೆ ಮಾಡಲಾಗುವುದು ಎಂದು ಗುಡುಗಿದ್ದರು. ಆದರೆ ಹಾಸನಕ್ಕೆ ಕುಡಿಯುವ ನೀರು ಪೂರೈಕೆ ಸ್ಥಗಿತಗೊಂಡಿದ್ದರೂ ಮೌನ ವಹಿಸಿರುವ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಯವರ ಮೇಲೆ ಏನು ಕ್ರಮ ಕೈಗೊಳ್ಳುತೀರಿ ಎಂದು ಪ್ರಶ್ನಿಸಿದರು.
ಪ್ರಾದೇಶಿಕ ಆಯುಕ್ತರಿಗೆ ಪೋನ್ ಮಾಡಿ ಕೇಳಿದರೆ, ಯಗಚಿಯಿಂದ ಹಾಸನಕ್ಕೆ ಬಿಡುತ್ತಿದ್ದ 20 ಕ್ಯೂಸೆಕ್ ನೀರನ್ನು ನಿಲ್ಲಿಸಲು ಹೇಳಿಲ್ಲ ಎನ್ನುತ್ತಾರೆ. ನೀರು ನಿಲ್ಲಿಸಿರುವುದೂ ಗೊತ್ತಿಲ್ಲ ಎನ್ನುತ್ತಾರೆ. ಇನ್ನೊಂದೆಡೆ ನೀರಾವರಿ ಸಲಹಾ ಸಮಿತಿ ಸಭೆ ಕರೆಯಲು ಎಂಜಿನಿಯರುಗಳಿಗೆ ಹೇಳಿದ್ಧೇನೆ ಎನ್ನುತ್ತಾರೆ ಇಂಥ ಅಧಿಕಾರಿಗಳನ್ನಿಟ್ಟುಕೊಂಡು ಜನರ ಕುಡಿಯುವ ನೀರಿನ ಅಭಾವ ಪರಿಹರಿಸಲು ಸಾಧ್ಯವೇ ? ಐಎಎಸ್ ಅಧಿಕಾರಿಗಳೆಂದರೆ ಕಿರೀಟ ಹಾಕಿಕೊಂಡಿರುವ ರಾಜರೇ ? ಇನ್ನು ಹಾಸನ ಜಿಲ್ಲಾಧಿಕಾರಿ ಇದ್ದಾರೆ . ಅವರ ಆಡಳಿತದಲ್ಲಿ ದೇವರೇ ಹಾಸನ ಜಿಲ್ಲೆಯನ್ನು ಕಾಪಾಡಬೇಕು ಎಂದು ವ್ಯಂಗ್ಯವಾಡಿದರು.
ನಾನು ಮುಖ್ಯಮಂತ್ರಿಯಾಗಿದ್ದಾಗ ಒಬ್ಬ ಐಎಎಸ್ ಅಧಿಕಾರಿಗೆ ಫೋನ್ನಲ್ಲಿ ಹೇಳಿದ ಕೆಲಸ ಮಾಡಲಿಲ್ಲ ಎಂದು ಆ ಅಧಿಕಾರಿಯನ್ನು ಸಸ್ಪೆ$ಂಡ್ ಮಾಡಿದೆ. ಆನಂತರ ಎಲ್ಲಾ ಐಎಎಸ್ ಅಧಿಕಾರಿಗಳು ಬಂದು ನಿಮಗೆ ಸಹಕಾರ ನೀಡುವುದಿಲ್ಲ ಎಂಬ ಧಾಟಿಯಲ್ಲಿ ಬೆದರಿಸಲು ಬಂದರು. ಆಯ್ತು ಹಾಗೇ ಮಾಡಿ ಎಂದೆ. ಆದರೆ ಒಂದೂವರೆ ವರ್ಷ ಯಾವ ಐಎಎಸ್ ಅಧಿಕಾರಿಯೂ ಬಾಲ ಬಿಚ್ಚಲಿಲ್ಲ ಎಂದು ಉದಾಹರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ
Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ
Lok Sabha Polls: ಕಾಗೆ ಮಾತು ಕಾಂಗ್ರೆಸ್ನ ಮನಸ್ಥಿತಿ: ಬಿ.ವೈ.ರಾಘವೇಂದ್ರ
Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ
Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ
Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ
Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್ ಗೆ ಬಿಜೆಪಿ ತಿರುಗೇಟು
ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ
Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ