ಕುಗ್ರಾಮ ಜಗಾಟದಲ್ಲಿ ಸಿಎಂ ಗ್ರಾಮವಾಸ್ತವ್ಯಕ್ಕೆ ಒತ್ತಾಯ

ಮೂಲ ಸೌಕರ್ಯವಿಲ್ಲದ ಗ್ರಾಮದಲ್ಲಿ 13 ಕುಟುಂಬಗಳ ವಾಸ • ಜನರ ಸಂಚಾರಕ್ಕೆ ಬೆತ್ತದ ಸೇತುವೆಯೇ ಆಧಾರ

Team Udayavani, Jun 24, 2019, 10:56 AM IST

hasan-tdy-1..

ಸಕಲೇಶಪುರ ತಾಲೂಕಿನ ಮಲೆನಾಡಿನ ಕುಗ್ರಾಮ ಜಗಾಟದಲ್ಲಿ ಗ್ರಾಮಸ್ಥರಿಂದಲೆ ನಿರ್ಮಾಣಗೊಂಡಿರುವ ಬೆತ್ತದ ಸೇತುವೆ

ಸಕಲೇಶಪುರ: ಹೊಳೆ ದಾಟಲು ಗ್ರಾಮಸ್ಥರೇ ಮಾಡಿಕೊಂಡಿರುವ ಬೆತ್ತದ ಸೇತುವೆಯನ್ನು ಆಶ್ರಯಿಸಿರುವ ತಾಲೂಕಿನ ಹೊಂಗಡಹಳ್ಳ ಗ್ರಾಪಂ ವ್ಯಾಪ್ತಿಯ ಕುಗ್ರಾಮ ಜಗಾಟದಲ್ಲಿ ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯ ಮಾಡಬೇಕೆಂಬ ಕೂಗು ಬಲವಾಗಿ ಕೇಳುತ್ತಿದೆ.

ತಾಲೂಕಿನ ಹೊಂಗಡಹಳ್ಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಗ್ರಾಮವಾದ ಜಗಾಟ ಗ್ರಾಮ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದರೂ ಸುಮಾರು 13 ಕುಟುಂಬಗಳ ಜನ ಇಲ್ಲಿ ನೂರಾರು ವರ್ಷಗಳಿಂದ ಜೀವನ ನಡೆಸುತ್ತಿದ್ದಾರೆ.

ಮಳೆ ಬಂದರೆ ಕರೆಂಟ್ ಕಟ್: ಅತಿ ಹೆಚ್ಚು ಮಳೆ ಬೀಳುವ ಪ್ರದೇಶಗಳಲ್ಲಿ ಇದು ಒಂದಾಗಿದ್ದು, ಮಳೆಗಾಲದಲ್ಲಿ ಸಂಪೂರ್ಣವಾಗಿ ಈ ಗ್ರಾಮ ವಿದ್ಯುತ್‌ ಪೂರೈಕೆಯಿಂದ ವಂಚಿತವಾಗಿ ಬಹುತೇಕವಾಗಿ ಕತ್ತಲಿನಲ್ಲೇ ಇರುತ್ತದೆ. ಗ್ರಾಮದಲ್ಲಿ ಬಟ್ಟೆಕುಮೇರಿ ನದಿ ಒಂದು ಕಡೆ ಹರಿಯುತ್ತಿದ್ದು ಜೊತೆಗೆ ಅನೇಕ ಹಳ್ಳ ಕೊಳ್ಳಗಳು ಸಹ ಇಲ್ಲಿದೆ. ಗ್ರಾಮದ ಅವ್ಯವಸ್ಥೆಯನ್ನು ಕಂಡು ಹಲವು ಕುಟುಂಬಗಳು ಗ್ರಾಮವನ್ನು ತೊರೆದಿದ್ದು ಕೆಲವು ಕುಟುಂಬಗಳು ಹೊಂಗಡಹಳ್ಳದಲ್ಲಿ ನೆಲೆಸಿದ್ದು ಕೆಲವು ಕುಟುಂಬಗಳು ಸಕಲೇಶಪುರದಲ್ಲಿ ಇನ್ನು ಕೆಲವು ಕುಟುಂಬಗಳು ಬೆಂಗಳೂರಿನಲ್ಲಿ ನೆಲೆಸಿದೆ.

ಗ್ರಾಮದಿಂದ ಹೊರ ಬಂದಿರುವ ಹಲವು ಕುಟುಂಬಗಳು ಉದ್ಯಮ ವ್ಯವಹಾರದಲ್ಲಿ ಹೆಸರು ಮಾಡಿದ್ದರೂ ಸಹ ಗ್ರಾಮದೊಂದಿಗೆ ಸಂಪರ್ಕ ಹೊಂದಿರುವುದು ಸಂತೋಷದ ವಿಷಯವಾಗಿದೆ.

ಅಪಾಯಕಾರಿ ಸೇತುವೆ: ಜಗಾಟದಲ್ಲಿರುವ ಬಹುತೇಕ ಕುಟುಂಬಗಳು ಕೃಷಿಯನ್ನು ಆಶ್ರಯಿಸಿದ್ದು ಇವರ ಮನೆಗಳು ಒಂದು ಕಡೆಯಿದ್ದು ಕೃಷಿ ಭೂಮಿ ಮತ್ತೂಂದು ಭಾಗದಲ್ಲಿರುವುದರಿಂದ ಕೃಷಿ ಭೂಮಿಗೆ ಹೋಗಲು ನದಿಯನ್ನು ದಾಟಬೇಕಾಗಿದೆ. ಈ ಹಿನ್ನೆಲೆಯಲ್ಲಿ ಹೊಳೆ ದಾಟಲು ಜನರು ತಾವೇ ಬೆತ್ತದಿಂದ ತೂಗು ಸೇತುವೆಯನ್ನು ನಿರ್ಮಿಸಿ ಬಳಸುತ್ತಿದ್ದಾರೆ.

ಗ್ರಾಮದ ಜನರು ಹೊಳೆ ದಾಟಲು ಜನ ಜೀವ ಕೈಯಲ್ಲಿ ಹಿಡಿದುಕೊಂಡು ಹೋಗಬೇಕು. ಪ್ರತಿ ವರ್ಷ ಎರಡು ಬಾರಿ ಸೇತುವೆ ದುರಸ್ತಿ ಮಾಡಬೇಕಾಗಿದ್ದು ಈ ಹಿನ್ನೆಲೆಯಲ್ಲಿ ಬೆತ್ತಕ್ಕಾಗಿ ಗ್ರಾಮಸ್ಥರು ಕಾಡಿಗೆ ಹೋಗಿ ಕಾಡು ಪ್ರಾಣಿಗಳ ಭಯದಲ್ಲೇ ಬೆತ್ತವನ್ನು ಸಂಗ್ರಹಿಸಿ ಸೇತುವೆಯ ದುರಸ್ತಿ ಕಾರ್ಯ ಮಾಡಿಕೊಳ್ಳಬೇಕಾಗಿದೆ.

ಮಳೆಗಾಲದಲ್ಲೇ ಭಯ: ಬೇಸಿಗೆಯಲ್ಲಿ ಹೇಗಾದರೂ ತಿರುಗಾಡಬಹುದು ಆದರೆ ಮಳೆಗಾಲದಲ್ಲಿ ಒಂದು ಅಡಿ ನೀರು ಜಾಸ್ತಿಯಾದರು ಸಹ ಸೇತುವೆಯ ಮೇಲೆ ತಿರುಗಾಡುವುದು ಅಪಾಯಕಾರಿಯಾಗಿದೆ. ಮಕ್ಕಳು, ವೃದ್ಧರು, ಮಹಿಳೆಯರು ಸೇರಿದಂತೆ ಗ್ರಾಮದ ಪ್ರತಿಯೊಬ್ಬರು ತಿರುಗಾಡಲು ಇದೇ ಸೇತುವೆಯನ್ನು ಆಶ್ರಯಿಸಿದ್ದಾರೆ.

ಸೇತುವೆ ನಿರ್ಮಾಣಕ್ಕೆ ಆಗ್ರಹ: ಗ್ರಾಮಕ್ಕೆ ಸೇತುವೆ ಅತ್ಯವಶ್ಯವಾಗಿದ್ದು ಇಲ್ಲೊಂದು ಸೇತುವೆ ನಿರ್ಮಾಣವಾದರೆ ಗ್ರಾಮಸ್ಥರು ಬಿಸಿಲೆ ಹಾಗೂ ಸುಬ್ರಹ್ಮಣ್ಯ ಕಡೆಗೆ ಹೋಗಲು ಸುಮಾರು 30 ಕಿ.ಮೀ.ಗೂ ಹೆಚ್ಚು ದೂರ ಕಡಿಮೆಯಾಗುತ್ತದೆ. ಗ್ರಾಮದ ಮಕ್ಕಳು ಶಾಲೆಗಾಗಿ ಸುಮಾರು 3 ಕಿ.ಮೀ ದೂರದ ಹೊಂಗಡಹಳ್ಳ ಗ್ರಾಮದಲ್ಲಿರುವ ಶಾಲೆಗೆ ವಿದ್ಯಾಭ್ಯಾಸಕ್ಕೆ ತೆರಳಬೇಕಾಗಿದ್ದು ಸಣ್ಣಪುಟ್ಟ ಅಗತ್ಯಗಳಿಗೂ ಸಹ ಹೊಂಗಡಹಳ್ಳ ಗ್ರಾಮಕ್ಕೇ ಹೋಗಬೇಕಾಗಿದೆ.

ಮಳೆಗಾಲಕ್ಕೆ ಮೊದಲೇ ಆಹಾರ ವಸ್ತುಗಳನ್ನು ಶೇಖರಣೆ ಮಾಡಿಕೊಳ್ಳಬೇಕಾದ ಅವಶ್ಯಕತೆಯಿದ್ದು ಗ್ರಾಮದಲ್ಲಿ ಕೃಷಿ ಮಾಡುವುದು ಸಹ ಕಷ್ಟಕರವಾಗಿದೆ. ಅತ್ಯಧಿಕವಾಗಿ ಸುರಿಯುವ ಮಳೆಯಿಂದ ಕಾಫಿ ಹೆಚ್ಚಾಗಿ ಬೆಳೆಯಲು ಸಾಧ್ಯವಾಗುವುದಿಲ್ಲ. ಮೆಣಸನ್ನು ಬೆಳೆಯಲು ಇಲ್ಲಿ ಅಸಾಧ್ಯವಾಗಿದೆ. ಪ್ರಮುಖ ಬೆಳೆಯಾದ ಏಲಕ್ಕಿ ಬೆಳೆ ಕಂದು ರೋಗದಿಂದ ನಾಶವಾಗಿದೆ. ಆದರೂ ಸಹ ಗ್ರಾಮಸ್ಥರು ಕಾಫಿ, ಏಲಕ್ಕಿ ಜೊತೆಗೆ ಭತ್ತ, ಬೀನ್ಸ್‌, ಹಸಿರು ಮೆಣಸಿನ ಕಾಯಿ ಬೆಳೆಯನ್ನು ಬೆಳೆದು ಜೀವನ ಸಾಗಿಸುತ್ತಿದ್ದಾರೆ.

ಕಾಡು ಪ್ರಾಣಿಗಳ ಹಾವಳಿ: ಕಾಡು ಪ್ರಾಣಿಗಳ ಹಾವಳಿ ಸಹ ವಿಪರೀತವಾಗಿದ್ದು , ಕಾಡು ಪ್ರಾಣಿಗಳು ಒಂದೆಡೆ ಬೆಳೆದ ಬೆಳೆಯನ್ನು ನಾಶ ಮಾಡುತ್ತವೆ. ಜೊತೆಗೆ ತಮ್ಮ ಜೀವಗಳನ್ನು ರಕ್ಷಿಸಿಕೊಳ್ಳಬೇಕಾದ ಅನಿವಾರ್ಯತೆಗೆ ಗ್ರಾಮಸ್ಥರು ಸಿಲುಕಿದ್ದಾರೆ. ಗ್ರಾಮದಲ್ಲಿ ಬೆರಳೆಣಿಕೆಯಷ್ಟು ಕುಟುಂಬಗಳು ಇರುವುದರಿಂದ ಅಭಿವೃದ್ಧಿ ಎಂಬುದು ಮರಿಚೀಕೆಯಾಗಿದ್ದು ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯಕ್ಕೆ ಈ ಭಾಗಕ್ಕೆ ಬರಲಿ ಎಂಬ ಕೂಗು ಹೊಂಗಡಹಳ್ಳ ಪಂಚಾಯಿತಿ ವ್ಯಾಪ್ತಿಯಲ್ಲಿ ಕೇಳಿ ಬರುತ್ತಿದೆ.

ಮುಖ್ಯಮಂತ್ರಿಗಳು ಬರದಿದ್ದಲ್ಲಿ ಉತ್ತಮ ಜಿಲ್ಲಾಧಿಕಾರಿಯೆಂದು ಹೆಸರು ಪಡೆದಿರುವ ಅಕ್ರಂ ಪಾಷಾ ಅವರು ಅರಸೀಕೆರೆ ತಾಲೂಕಿನ ಜೆಸಿಪುರದಲ್ಲಿ ಗ್ರಾಮವಾಸ್ತವ್ಯ ಮಾಡಿದ್ದು, ಇದೇ ರೀತಿಯಲ್ಲಿ ಹೊಂಗಡಹಳ್ಳ ಗ್ರಾ.ಪಂ ವ್ಯಾಪ್ತಿಯಲ್ಲಿ ಗ್ರಾಮ ವಾಸ್ತವ್ಯ ಮಾಡಿ ಇಲ್ಲಿನ ಸಮಸ್ಯೆಗಳನ್ನು ಬಗೆಹರಿಸಬಹುದೆಂಬ ನಿರೀಕ್ಷೆಯನ್ನು ಈ ಭಾಗದ ಜನ ಹೊಂದಿದ್ದಾರೆ.

ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸಿ: ಹೊಂಗಡಹಳ್ಳ ತಾಲೂಕಿನ ಕೊನೆಯ ಗ್ರಾಮ ಪಂಚಾಯಿತಿ. ಇಲ್ಲಿನ ಮೂಕನ ಮನೆ ಫಾಲ್ಸ್, ಕಾಗಿನೆರೆ ಪ್ರಕೃತಿ ಸೌಂದರ್ಯ ತಾಣ ಸೇರಿದಂತೆ ಹಲವು ಪ್ರೇಕ್ಷಣೀಯ ಸ್ಥಳಗಳು ಇರುವ ಸ್ಥಳ. ಸರ್ಕಾರ ಈ ಭಾಗವನ್ನು ಪ್ರವಾಸಿ ತಾಣವಾಗಿಯೂ ಕೂಡ ಅಭಿವೃದ್ಧಿ ಮಾಡಬಹುದು.ಆದಷ್ಟು ಬೇಗ ಇಲ್ಲಿ ಸೇತುವೆೆ ನಿರ್ಮಾಣ ಆಗಲಿ.ಈ ಭಾಗದ ಜನರ ದಶಕಗಳ ಕನಸು ನೆನಸಾಗಲಿ.

 

● ಸುಧೀರ್‌ ಎಸ್‌.ಎಲ್.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.