ಕೊಬ್ಬರಿ ಧಾರಣೆ ಏರಿಕೆ: ತೆಂಗು ಬೆಳೆಗಾರರು ಚೇತರಿಕೆ

ತೆಂಗು ಬೆಳೆಗಾರರಲ್ಲಿ ನಿರಾಸೆಯ ಭಾವನೆಗಳು ಮೂಡಿಸುವಂತೆ ಮಾಡುತ್ತಿರುವುದು ವಿಪರ್ಯಾಸವಾಗಿದೆ.

Team Udayavani, Jun 17, 2022, 6:29 PM IST

ಕೊಬ್ಬರಿ ಧಾರಣೆ ಏರಿಕೆ: ತೆಂಗು ಬೆಳೆಗಾರರು ಚೇತರಿಕೆ

ಅರಸೀಕೆರೆ: ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ತಾಲೂಕಿನ ಪ್ರಮುಖ ವಾಣಿಜ್ಯ ಬೆಳೆಯಾದ ತೆಂಗಿನ ಕಾಯಿ, ಕೊಬ್ಬರಿ ಧಾರಣೆಯಲ್ಲಿ ಸ್ಪಲ್ಪ ಚೇತರಿಕೆ ಕಂಡಿದ್ದು ತೆಂಗು ಬೆಳೆಗಾರರ ಮೊಗದಲ್ಲಿ ಕೊಂಚ ಮಂದಹಾಸ ಮೂಡುವಂತೆ ಮಾಡಿದೆ.

ಇತ್ತೀಚೆಗೆ ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾದ ಕೊಬ್ಬರಿಯ ಬೆಲೆ 12.000 ರೂ.ಗಳಿಗೆ ಕುಸಿತ ಉಂಟಾದ ಹಿನ್ನೆಲೆ ತೆಂಗು ಬೆಳೆಗಾರರು ತೀವ್ರ ಆತಂಕಕ್ಕೆ ಒಳಗಾಗಿದ್ದರು. ಕಳೆದ ಎರಡು ವಾರದಲ್ಲಿ 14000ಕ್ಕೆ ಬಂದ ಕಾರಣ ಸ್ಪಲ್ಪ ಧಾರಣೆ ಏರಿಕೆ ಉಂಟಾಗುತ್ತಿರುವ ಕಾರಣ ತೆಂಗು ಬೆಳೆಗಾರರ ಮೊಗದಲ್ಲಿ ಮಂದಹಾದ ಮೂಡಿದಂತಾಗಿದೆ.

ಶಿಥಲೀಕರಣ ಘಟಕಕ್ಕೆ ಬೇಡಿಕೆ: ಕೇಂದ್ರ ಸರ್ಕಾರ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಕೊಬ್ಬರಿ ಬೆಳೆಯಲು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೊಬ್ಬರಿ ಸಂಗ್ರಹಣೆಗಾಗಿ ಉತ್ತಮ ಸುವ್ಯವ ಸ್ಥೆಯ ಶಿಥಲೀಕರಣ ಘಟಕವನ್ನು ಸ್ಥಾಪಿಸುವ ಮೂಲಕ, ಬೆಲೆ ಏರಿಕೆಯ ಹಾವು ಏಣಿಯಾಟಕ್ಕೆ ಕಡಿವಾಣ ಹಾಕುವ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂಬುದು ರೈತರ ಬಹುದಿನಗಳ ಹೋರಾಟದ ಒತ್ತಾಸೆಯಾಗಿದೆ.

46 ಸಾವಿರ ಹೆಕ್ಟೇರ್‌ ಜಮೀನಿನಲ್ಲಿ ತೆಂಗು ಬೆಳೆ: ತಾಲೂಕಿನಲ್ಲಿ ಸುಮಾರು 46 ಸಾವಿರ ಹೆಕ್ಟೇರ್‌ ಜಮೀನಿನಲ್ಲಿ ತೆಂಗು ಬೆಳೆಯಲಾಗಿದ್ದು, ಇದರಲ್ಲಿ ಶೇ.50ರಷ್ಟು ಭಾಗವನ್ನು ಕೊಬ್ಬರಿಗೆ ಮೀಸಲಾಗಿಟ್ಟಿದ್ದಾರೆ. ಉತ್ತರ ಭಾರತದಲ್ಲಿ ಆಗಸ್ಟ್‌ನಿಂದ ಡಿಸೆಂಬರ್‌ ತಿಂಗಳವರೆಗೂ ಬಹುಬೇಡಿಕೆ ಇರುವ ಕೊಬ್ಬರಿಗೆ ಗಣೇಶ ಚತುರ್ಥಿ, ದೀಪಾವಳಿ, ನವರಾತ್ರಿಯಂತಹ ವಿಶೇಷ ಹಬ್ಬಗಳ ಸಂದರ್ಭದಲ್ಲಿ ಮಾರುಕಟ್ಟೆಯಲ್ಲಿ ಕೊಬ್ಬರಿಗೆ ಉತ್ತಮ ಬೆಲೆ ದೊರೆಯುತ್ತದೆ. ತದ ನಂತರದಲ್ಲಿ ಮಾರುಕಟ್ಟೆಯಲ್ಲಿ ಕೊಬ್ಬರಿಗೆ ಬೆಲೆ ತೀವ್ರ ಕುಸಿತ ಉಂಟಾಗಿ ತೆಂಗು ಬೆಳೆಗಾರರಿಗೆ ನಷ್ಟ ಉಂಟಾಗುವ ಕಾರಣ, ಕೊಬ್ಬರಿ ಸಂಗ್ರಹಣೆಗಾಗಿ ಶಿಥಲೀಕರಣ ಘಟಕ ಸ್ಥಾಪಿಸಬೇಕು ಎಂಬುವುದು ರೈತರ ಒತ್ತಾಸೆಯಾಗಿದೆ.

ತೆಂಗು ಬೆಳೆಗಾರರ ಚೇತರಿಕೆ: ಕಳೆದ ಜನವರಿ-ಫೆಬ್ರವರಿ ತಿಂಗಳಿನಲ್ಲಿ 12 ಸಾವಿರ ರೂ. ಆಸುಪಾಸಿನಲ್ಲಿದ್ದ ಬೆಲೆ ನಂತರ ನಡೆದ ಕೆಲವು ಹರಾಜುಗಳಲ್ಲಿ 13,200 ರೂ.ಗಳಿಗೆ ಸೀಮಿತವಾಗಿತ್ತು. ಜೂನ್‌ ತಿಂಗಳ ಮೊದಲ ವಾರ ನಡೆದ ಕೆಲವು ಹರಾಜಿನಲ್ಲಿ 13.900 ರೂ. ತಲುಪುವ ಮೂಲಕ ಸ್ಪಲ್ಪ ಪ್ರಾಮಾಣದಲ್ಲಿ ಬೆಲೆಯಲ್ಲಿ ಚೇತರಿಕೆಯ ಹಾದಿಯನ್ನು ರೈತರು ಕಂಡಂತಾಗಿದೆ.

ತಾಲೂಕಿನ ಬಾಣಾವರ, ಕಣಕಟ್ಟೆ, ಕಸಬಾ, ಜಾವಗಲ್‌ ಹಾಗೂ ಗಂಡಸಿ ಹೋಬಳಿ ವ್ಯಾಪ್ತಿಯಲ್ಲಿನ ತೋಟಗಳಿಂದ ಅಪಾರ ಪ್ರಮಾಣದ ತೆಂಗಿನ ಕಾಯಿ ಲಭ್ಯವಾಗುತಿತ್ತು. ಜೊತೆಗೆ ಕಡೂರು, ತರೀಕೆರೆ, ಭದ್ರಾವತಿ, ಬೇಲೂರು, ಹೊಸದುರ್ಗ, ಕೆ.ಆರ್‌.ನಗರ ಸೇರಿದಂತೆ ವಿವಿಧೆಡೆಗಳಿಂದ ನಿರೀಕ್ಷೆಗೂ ಮೀರಿದ ಪ್ರಮಾ ಣದಲ್ಲಿ ತೆಂಗಿನ ಕಾಯಿ-ಕೊಬ್ಬರಿ ರಾಶಿ ಅಧಿಕವಾಗಿತ್ತು.

ಇಳುವರಿ ಕುಸಿತಕ್ಕೆ ಕಾರಣ: ಬರಗಾಲ, ಮಳೆಯ ಅಭಾವ, ತೇವಾಂಶ ಕೊರತೆಯಿಂದ ಬಳಲಿದ್ದ ತೆಂಗಿನ ಮರಗಳಿಗೆ ಮಹಾ ಮಾರಿಯಂತೆ ಕಾಡಿದ ನುಸಿರೋಗ, ಬೆಂಕಿರೋಗ ಹಾಗೂ ಕಪ್ಪುತಲೆ ಹುಳು ಬಾಧೆಯಿಂದ ತೆಂಗಿನ ಮರಗಳು ಸುಳಿಬಿದ್ದು ನಾಶವಾಗಿ ಸಾವಿರಾರು ಹೆಕ್ಟೇರ್‌ ಪ್ರದೇಶದಲ್ಲಿದ್ದ 15 ಲಕ್ಷಕ್ಕೂ ಹೆಚ್ಚು ತೆಂಗು ಬೆಳೆ ಸಂಪೂರ್ಣ ನಾಶವಾಗಿದ್ದು, ಅಳಿದುಳಿದ ಮರಗಳಲ್ಲಿ ಸಹ ಇಳುವರಿ ಕಡಿಮೆಯಾಗಿದ್ದು, ರೈತರಿಗೆ ನಷ್ಟ ಉಂಟುಮಾಡುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿಯಾಗಿದೆ. ಇದರ ನಡುವೆಯೂ ಮಾರುಕಟ್ಟೆಯಲ್ಲಿ ತೆಂಗಿನ ಕಾಯಿ ಮತ್ತು ಕೊಬ್ಬರಿ ಬೆಲೆಯಲ್ಲಿ ಹಾವು ಏಣಿ ಏರಿಳಿತದ ಆಟ ನಡೆಯುತ್ತಿರುವುದು ನೋಡಿದರೇ ಸಹಜವಾಗಿಯೇ ತೆಂಗು ಬೆಳೆಗಾರರಲ್ಲಿ ನಿರಾಸೆಯ ಭಾವನೆಗಳು ಮೂಡಿಸುವಂತೆ ಮಾಡುತ್ತಿರುವುದು ವಿಪರ್ಯಾಸವಾಗಿದೆ.

ಕಳೆದ ವರ್ಷ ಕೊಬ್ಬರಿ ಬೆಲೆ 17 ಸಾವಿರವಿದ್ದು ಈಗ 13.900 ಎರಿಕೆಯಾಗಿದೆ. ಉತ್ತರ ಭಾರತದಲ್ಲಿನ ಹಬ್ಬ-ಹರಿದಿನಗಳಲ್ಲಿ ರಾಜ್ಯದ ಕೊಬ್ಬರಿಗೆ ಬೇಡಿಕೆ ಹೆಚ್ಚು ಇರುವ ಕಾರಣ ಕೊಬ್ಬರಿ ಬೆಲೆ ಏರಿಕೆ ಕಾರಣವಾಗುತ್ತದೆ. ಉಳಿದಂತೆ ಕೊಬ್ಬರಿ ಬೆಳೆಯಲ್ಲಿ ಏರಿಳಿತಗಳು ಪದೇ ಪದೇ ಕಾಣಿಸಿಕೊಳ್ಳುತ್ತವೆ.
●ಸಿದ್ಧ ರಂಗಸ್ವಾಮಿ, ಕೃಷಿ ಉತ್ಪನ್ನ
ಮಾರುಕಟ್ಟೆ ಸಮಿತಿ ಕಾರ್ಯದರ್ಶಿ

ಸತತ ಐದು ವರ್ಷಗಳ ಕಾಲ ನೀರು ಗೊಬ್ಬರ ಹಾಕಿ ಬೆಳೆದ ತೆಂಗಿನ ಮರವು ನಮಗೆ ಜೀವನ ನಿರ್ವಹಣೆಗೆ ಸಹಕಾ ರಿಯಾಗಿದೆ. ಆದರೆ ಬೆಲೆ ಕುಸಿತ ಸಂದರ್ಭದಲ್ಲಿ ಅನಿವಾರ್ಯತೆಯಿಂದ ಕೊಬ್ಬರಿ ಮಾರಾಟ ಮಾಡಬೇಕಾಗುತ್ತದೆ. ಇದರಿಂದ ಲಾಭಕ್ಕಿಂತ ನಷ್ಟವೇ ಹೆಚ್ಚಾಗಿದೆ ಎಂಬುದು ಕೃಷಿಕರ ಸಂಕಷ್ಟವಾಗಿದೆ.
●ಕನಕೆಂಚೇನಹಳ್ಳಿ ಪ್ರಸನ್ನಕುಮಾರ್‌
ರೈತ ಮುಖಂಡ

ಉತ್ತರ ಭಾರತದ ರಾಜ್ಯಗಳಲ್ಲಿ ಆಗಸ್ಟ್‌ ತಿಂಗಳಿಂದ ನವಂಬರ್‌ ತಿಂಗಳಲ್ಲಿ ಕರ್ನಾಟಕದ ಕೊಬ್ಬರಿಗೆ ಬೇಡಿಕೆ ಹೆಚ್ಚಿರುವುದು ಬೆಲೆ ಹೆಚ್ಚಳಕ್ಕೆ ಕಾರಣವಾಗುತ್ತದೆ. ಮುಂಬರುವ ಹರಾ ಜುಗಳಲ್ಲಿ ತೆಂಗಿನ ಕಾಯಿ ಧಾರಣೆ ಜತೆಗೆ ಕೊಬ್ಬರಿ ಬೆಲೆಯೂ ಏರಿಕೆಯಾಗುವ ಬಹು ನಿರೀಕ್ಷೆಯಿದೆ.
●ರಾಜು, ಕೊಬ್ಬರಿ ವ್ಯಾಪಾರಿ

●ರಾಮಚಂದ್ರ, ಅರಸೀಕೆರೆ

ಟಾಪ್ ನ್ಯೂಸ್

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hasana: “ದೇಶ ಆಳಿದ ಕುಟುಂಬ ಸದಸ್ಯನ ದುಷ್ಕೃತ್ಯ ಬೇಸರ ತರಿಸಿದೆ’: ಕೆ.ಎಂ.ಶಿವಲಿಂಗೇಗೌಡ

Hasana: “ದೇಶ ಆಳಿದ ಕುಟುಂಬ ಸದಸ್ಯನ ದುಷ್ಕೃತ್ಯ ಬೇಸರ ತರಿಸಿದೆ’: ಕೆ.ಎಂ.ಶಿವಲಿಂಗೇಗೌಡ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

1–wwqaeeq

Mangaluru; ಮಂಗಳಾ ಕಪ್‌ ಓಪನ್‌ ಬ್ಯಾಡ್ಮಿಂಟನ್‌ ಕೂಟಕ್ಕೆ ಚಾಲನೆ

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

1-weewewq

Punjab ಅಭಿಮಾನಿಗಳ ಕ್ಷಮೆ ಕೋರಿದ ನಾಯಕ ಸ್ಯಾಮ್‌ ಕರನ್‌

1-wqeqewqewq

Tennis; ಇದೇ ಕೊನೆಯ ಸೀಸನ್‌:ಡೊಮಿನಿಕ್‌ ಥೀಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.