ತೆಂಗಿನ ಸಸಿಗಳು ವಿತರಣೆಗೆ ಸಿದ್ಧ
Team Udayavani, May 10, 2020, 5:12 PM IST
ಚನ್ನರಾಯಪಟ್ಟಣ: ತಾಲೂಕಿನ ದಂಡಿಗನಹಳ್ಳಿ ಹೋಬಳಿ ಉದಯಪುರ ಬಳಿ ಇರುವ ಯಲಿಯೂರು ತೋಟಗಾರಿಕೆ ಕ್ಷೇತ್ರದಲ್ಲಿ ತೊಟಗಾರಿಕೆ ಇಲಾಖೆ ವತಿಯಿಂದ 15 ಸಾವಿರಕ್ಕೂ ಹೆಚ್ಚು ತೆಂಗಿನ ಸಸಿಗಳು ಕಡಿಮೆ ಬೆಲೆಯಲ್ಲಿ ರೈತರಿಗೆ ವಿತರಣೆ ಮಾಡಲು ಸಿದ್ಧವಾಗಿವೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು.
ಯಲಿಯೂರು ತೋಟಗಾರಿಕೆ ಕ್ಷೇತ್ರಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಪ್ರತಿ ವರ್ಷದಂತೆ ಪ್ರಸಕ್ತ ಸಾಲಿ ನಲ್ಲಿಯೂ ತೆಂಗಿನ ಸಸಿಗಳನ್ನು ಸರ್ಕಾರದ ಅನುದಾನದಲ್ಲಿ ಇಲಾಖೆ ಬೆಳೆಸಿದೆ. ಇವುಗಳನ್ನು ಪಡೆಯಲು ರೈತರು ಕೃಷಿ ಭೂಮಿಯ ಪಹಣೆ ನೀಡಿ ಒಂದು ಸಸಿಗೆ 65 ರೂ.ನಂತೆ ಪಡೆಯ ಬಹುದಾಗಿದೆ. ಗುಣಮಟ್ಟದ ತೆಂಗಿನ ಸಸಿಯನ್ನು ಬೆಳೆಸಲಾಗಿದೆ ಎಂದು ಹೇಳಿದರು.
ಖಾಸಗಿ ಸಂಸ್ಥೆಯಲ್ಲಿ ಪಡೆಯಲು ಒಂದು ತೆಂಗಿನ ಸಸಿಗೆ 250 ರಿಂದ 300 ರೂ. ನೀಡಬೇಕಾಗಿದೆ. ಆದರೆ ತೋಟ ಗಾರಿಕೆ ಇಲಾಖೆಯಿಂದ ಕಡಿಮೆ ಬೆಲೆಗೆ ನೀಡುವ ಮೂಲಕ ರೈತರನ್ನು ಉತ್ತೇಜನ ಮಾಡಲಾಗುತ್ತಿದೆ. ಇದರ ಅನುಕೂಲ ವನ್ನು ರೈತರು ಪಡೆದುಕೊಳ್ಳಬೇಕಾಗಿದೆ. ಒಬ್ಬ ರೈತನಿಗೆ 20 ಸಸಿಗಳನ್ನು ಮಾತ್ರ ವಿತರಿಸಲಾಗುವುದು ಎಂದು ಹೇಳಿದರು.
ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಸತೀಶ್, ಭಾನುಪ್ರಕಾಶ್, ತೋಟಗಾರಿಕೆ ಕ್ಷೇತ್ರದ ಮೇಲ್ವಿಚಾರಕ ಚಂದ್ರಶೇಖರ್, ವಲಯ ಅರಣ್ಯಾಧಿಕಾರಿ ಎಚ್.ಆರ್.ಹೇಮಂತ್ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ