ಆಹಾರೋತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲು ಸಹಕರಿಸಿ

ಸಮಗ್ರ ಕೃಷಿ ಮಾಹಿತಿ ರಥ ಸಂಚಾರಕ್ಕೆ ಚಾಲನೆ ನೀಡಿದ ತಾಲೂಕು ಕೃಷಿ ಅಧಿಕಾರಿ ಮನವಿ

Team Udayavani, Jul 1, 2019, 11:15 AM IST

hasan-tdy-3..

ಜಾವಗಲ್ ರೈತ ಸಂಪರ್ಕ ಕೇಂದ್ರದಲ್ಲಿ ಏರ್ಪಡಿಸಿದ್ದ ಕೃಷಿ ಮಾಹಿತಿ ರಥ ಸಂಚಾರ ಕಾರ್ಯಕ್ರಮಕ್ಕೆ ತಾಪಂ ಸದಸ್ಯರಾದ ವಿಜಯಕುಮಾರ್‌, ಪ್ರಭಾಕರ್‌ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಜಾವಗಲ್: ಆಹಾರೋತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲು ರೈತ ಬಾಂಧ‌ವರು ಸಹಕರಿಸಬೇಕೆಂದು ಅರಸೀಕೆರೆ ತಾಲೂಕು ಕೃಷಿ ಅಧಿಕಾರಿ ಕಾಂತರಾಜು ತಿಳಿಸಿದರು.

ಹಾಸನ ಜಿಲ್ಲಾ ಪಂಚಾಯಿತಿ, ಅರಸೀಕೆರೆ ತಾಲೂಕು ಆಡಳಿತ ಹಾಗೂ ಕೃಷಿ ಇಲಾಖೆ, ಜಾವಗಲ್ ಹೋಬಳಿ ರೈತ ಸಂಪರ್ಕ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ 2019ರ ಅಂಗವಾಗಿ ಜಾವ ಗಲ್ ಹೋಬಳಿಯ ಜಾವಗಲ್ ರೈತ ಸಂಪರ್ಕ ಕೇಂದ್ರದ ಆವರಣದಲ್ಲಿ ಏರ್ಪಡಿಸಿದ್ದ ಸಮಗ್ರ ಕೃಷಿ ಮಾಹಿತಿ ರಥ ಸಂಚಾರ ಉದ್ಘಾಟನಾ ಸಮಾರಂಭ‌ದಲ್ಲಿ ಮಾತನಾಡಿದರು.

ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಿ: ತಾಂತ್ರಿಕ ಬೇಸಾಯಪದ್ದತಿ, ತಾಂತ್ರಿಕ ಉಪಕರಣಗಳ ಬಳಕೆ, ಸಾವಯುವ ಗೊಬ್ಬರ ಮತ್ತು ಕೊಟ್ಟಿಗೆ ಗೊಬ್ಬರ ಬಳಕೆ, ಮಳೆಯ ಪ್ರಮಾಣಕ್ಕೆ ಅನು ಗುಣವಾದ ಸಿರಿಧಾನ್ಯಬೆಳೆಯುವುದು, ಮಾಗಿ ಉಳಿಮೆ, ಇಳಿಜಾರಿಗೆ ಅಡ್ಡಲಾಗಿ ಉಳಿಮೆ, ಲಘು ಪೋಷಕಾಂಶಗಳ ಬಳಕೆ , ಮಣ್ಣು ಪರೀಕ್ಷೆ ಮತ್ತಿತರ ತಾಂತ್ರಿಕ ವಿಧಾನಗಳನ್ನು ಕೃಷಿಕರು ಅಳವಡಿಸಿಕೊಂಡು ಇರುವ ಕೃಷಿ ಪ್ರದೇಶ ದಲ್ಲಿಯೇ ಅಧಿಕ ಇಳುವರಿ ಪಡೆಯ ಬಹುದೆಂದು ಕೃಷಿಕರಿಗೆ ಸಲಹೆ ನೀಡಿದರು.

ಸರ್ಕಾರದ ಸೌಲಭ್ಯ ಸದ್ಬಳಕೆಯಾಗಲಿ: ರಥ ಸಂಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತ ನಾಡಿದ ನೇರ್ಲಿಗೆ‌ ತಾಪಂ ಸದಸ್ಯ ತಿಮ್ಮನಹಳ್ಳಿ ವಿಜಯಕುಮಾರ್‌ ಮಾತನಾಡಿ, ಸರ್ಕಾರವು ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ, ಹುದಿ-ಬದಿ, ಕೊಟ್ಟಿಗೆ ನಿರ್ಮಾಣ, ಪಾಲಿಹೌಸ್‌ ನಿರ್ಮಾಣ, ರಿಯಾಯಿತಿ ದರದಲ್ಲಿ ಬೀಜ, ಗೊಬ್ಬರ, ಕೃಷಿ ಉಪಕರಣಗಳನ್ನು ನೀಡುತ್ತಿದೆ. ಕೃಷಿಕರು ಸರ್ಕಾರದ ಸೌಲಭ‌್ಯಗಳನ್ನು ಪಡೆದು ಕೊಂಡು ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಪಡಿಸಿಕೊಳ್ಳಬೇಕೆಂದರು.

ತಾಪಂ ಸದಸ್ಯ ಜೆ.ಕೆ.ಪ್ರಭಾಕರ್‌ ಮಾತನಾಡಿ, ಕಡಿಮೆ ನೀರಿನಲ್ಲಿ ಬೆಳೆಯುವ ಬೆಳೆಗಳಿಗೆ ಆದ್ಯತೆ ನೀಡಬೇಕು ಎಂದರು. ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಸುಬ್ರಹ್ಮಣ್ಯ ಇಲಾಖೆ ವತಿಯಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಸಹಾಯಕ ಕೃಷಿ ಅಧಿಕಾರಿ ವೀರಭದ್ರಪ್ಪ, ಪಿಡಿಒ ಮಂಜುನಾಥ್‌, ತಾಲೂಕು ಆತ್ಮ ತಾಂತ್ರಿಕ ವ್ಯವಸ್ಥಾಪಕ ಗೋಮಟೇಶ ನಾಯ್ಕ, ರಂಜಿತಾ, ಲೆಕ್ಕ ಸಹಾಯಕ ಮಲ್ಲೇಶ್‌, ರೈತ ಅನುವುಗಾರಾದ ಹನುಮಂತೇಗೌಡ, ಜಗದೀಶ್‌, ಬಸವ ರಾಜು, ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.