ಆಹಾರೋತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲು ಸಹಕರಿಸಿ
ಸಮಗ್ರ ಕೃಷಿ ಮಾಹಿತಿ ರಥ ಸಂಚಾರಕ್ಕೆ ಚಾಲನೆ ನೀಡಿದ ತಾಲೂಕು ಕೃಷಿ ಅಧಿಕಾರಿ ಮನವಿ
Team Udayavani, Jul 1, 2019, 11:15 AM IST
ಜಾವಗಲ್ ರೈತ ಸಂಪರ್ಕ ಕೇಂದ್ರದಲ್ಲಿ ಏರ್ಪಡಿಸಿದ್ದ ಕೃಷಿ ಮಾಹಿತಿ ರಥ ಸಂಚಾರ ಕಾರ್ಯಕ್ರಮಕ್ಕೆ ತಾಪಂ ಸದಸ್ಯರಾದ ವಿಜಯಕುಮಾರ್, ಪ್ರಭಾಕರ್ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಜಾವಗಲ್: ಆಹಾರೋತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲು ರೈತ ಬಾಂಧವರು ಸಹಕರಿಸಬೇಕೆಂದು ಅರಸೀಕೆರೆ ತಾಲೂಕು ಕೃಷಿ ಅಧಿಕಾರಿ ಕಾಂತರಾಜು ತಿಳಿಸಿದರು.
ಹಾಸನ ಜಿಲ್ಲಾ ಪಂಚಾಯಿತಿ, ಅರಸೀಕೆರೆ ತಾಲೂಕು ಆಡಳಿತ ಹಾಗೂ ಕೃಷಿ ಇಲಾಖೆ, ಜಾವಗಲ್ ಹೋಬಳಿ ರೈತ ಸಂಪರ್ಕ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ 2019ರ ಅಂಗವಾಗಿ ಜಾವ ಗಲ್ ಹೋಬಳಿಯ ಜಾವಗಲ್ ರೈತ ಸಂಪರ್ಕ ಕೇಂದ್ರದ ಆವರಣದಲ್ಲಿ ಏರ್ಪಡಿಸಿದ್ದ ಸಮಗ್ರ ಕೃಷಿ ಮಾಹಿತಿ ರಥ ಸಂಚಾರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಿ: ತಾಂತ್ರಿಕ ಬೇಸಾಯಪದ್ದತಿ, ತಾಂತ್ರಿಕ ಉಪಕರಣಗಳ ಬಳಕೆ, ಸಾವಯುವ ಗೊಬ್ಬರ ಮತ್ತು ಕೊಟ್ಟಿಗೆ ಗೊಬ್ಬರ ಬಳಕೆ, ಮಳೆಯ ಪ್ರಮಾಣಕ್ಕೆ ಅನು ಗುಣವಾದ ಸಿರಿಧಾನ್ಯಬೆಳೆಯುವುದು, ಮಾಗಿ ಉಳಿಮೆ, ಇಳಿಜಾರಿಗೆ ಅಡ್ಡಲಾಗಿ ಉಳಿಮೆ, ಲಘು ಪೋಷಕಾಂಶಗಳ ಬಳಕೆ , ಮಣ್ಣು ಪರೀಕ್ಷೆ ಮತ್ತಿತರ ತಾಂತ್ರಿಕ ವಿಧಾನಗಳನ್ನು ಕೃಷಿಕರು ಅಳವಡಿಸಿಕೊಂಡು ಇರುವ ಕೃಷಿ ಪ್ರದೇಶ ದಲ್ಲಿಯೇ ಅಧಿಕ ಇಳುವರಿ ಪಡೆಯ ಬಹುದೆಂದು ಕೃಷಿಕರಿಗೆ ಸಲಹೆ ನೀಡಿದರು.
ಸರ್ಕಾರದ ಸೌಲಭ್ಯ ಸದ್ಬಳಕೆಯಾಗಲಿ: ರಥ ಸಂಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತ ನಾಡಿದ ನೇರ್ಲಿಗೆ ತಾಪಂ ಸದಸ್ಯ ತಿಮ್ಮನಹಳ್ಳಿ ವಿಜಯಕುಮಾರ್ ಮಾತನಾಡಿ, ಸರ್ಕಾರವು ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ, ಹುದಿ-ಬದಿ, ಕೊಟ್ಟಿಗೆ ನಿರ್ಮಾಣ, ಪಾಲಿಹೌಸ್ ನಿರ್ಮಾಣ, ರಿಯಾಯಿತಿ ದರದಲ್ಲಿ ಬೀಜ, ಗೊಬ್ಬರ, ಕೃಷಿ ಉಪಕರಣಗಳನ್ನು ನೀಡುತ್ತಿದೆ. ಕೃಷಿಕರು ಸರ್ಕಾರದ ಸೌಲಭ್ಯಗಳನ್ನು ಪಡೆದು ಕೊಂಡು ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಪಡಿಸಿಕೊಳ್ಳಬೇಕೆಂದರು.
ತಾಪಂ ಸದಸ್ಯ ಜೆ.ಕೆ.ಪ್ರಭಾಕರ್ ಮಾತನಾಡಿ, ಕಡಿಮೆ ನೀರಿನಲ್ಲಿ ಬೆಳೆಯುವ ಬೆಳೆಗಳಿಗೆ ಆದ್ಯತೆ ನೀಡಬೇಕು ಎಂದರು. ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಸುಬ್ರಹ್ಮಣ್ಯ ಇಲಾಖೆ ವತಿಯಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಸಹಾಯಕ ಕೃಷಿ ಅಧಿಕಾರಿ ವೀರಭದ್ರಪ್ಪ, ಪಿಡಿಒ ಮಂಜುನಾಥ್, ತಾಲೂಕು ಆತ್ಮ ತಾಂತ್ರಿಕ ವ್ಯವಸ್ಥಾಪಕ ಗೋಮಟೇಶ ನಾಯ್ಕ, ರಂಜಿತಾ, ಲೆಕ್ಕ ಸಹಾಯಕ ಮಲ್ಲೇಶ್, ರೈತ ಅನುವುಗಾರಾದ ಹನುಮಂತೇಗೌಡ, ಜಗದೀಶ್, ಬಸವ ರಾಜು, ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan; ನೀರಿಗಾಗಿ ಪ್ರತಿಭಟನೆ ನಡೆಸಿದ ಜೆಡಿಎಸ್: ಎಚ್ಚರಿಕೆ
Lok Sabha Election: ತಪ್ಪು ತಿದ್ದಿಕೊಳ್ಳಲು ಅವಕಾಶ ಕೊಡಿ: ಎಚ್ಡಿಕೆ
ಶಿರಾಡಿಘಾಟಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ… ಗ್ಯಾಸ್ ಸೋರಿಕೆ, ಅಗ್ನಿಶಾಮಕ ಸಿಬ್ಬಂದಿ ದೌಡು
Stamp paper: ರೈತರು, ಜನರಿಗೆ ಛಾಪಾಕಾಗದ ದರ ಏರಿಕೆ ಬರೆ
Hijab controversy: ಹಾಸನದ ಖಾಸಗಿ ಕಾಲೇಜಿನಲ್ಲಿ ಹಿಜಾಬ್- ಕೇಸರಿ ಶಾಲು ವಿವಾದ
MUST WATCH
ಹೊಸ ಸೇರ್ಪಡೆ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು
Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ