ಹೆದ್ದಾರಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ
Team Udayavani, Feb 5, 2020, 3:00 AM IST
ಹಾಸನ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯವಿರುವ ಜಮೀನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಅವರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮಂಗಳವಾರ ನಡೆಸಿದ ವಿಡಿಯೋ ಸಂವಾದಲ್ಲಿ ಮಾತನಾಡಿದ ಅವರು ಕೆಪಿಟಿಸಿಎಲ್ ಕಾಮಗಾರಿಗಳಿಗೆ ತುರ್ತಾಗಿ ಸರ್ಕಾರಿ ಜಮೀನು ಗುರುತಿಸಿ ಮಂಜೂರು ಮಾಡಿಕೊಡಬೇಕು. ಪ್ರತಿ ಜಿಲ್ಲೆಯಲ್ಲಿರುವ ವೈದ್ಯಕೀಯ ತ್ಯಾಜ್ಯ ನಿರ್ವಾಹಣಾ ಸಮಿತಿ ರಚಿಸಿ ವ್ಯವಸ್ಥಿತ ವಿಲೇವಾರಿ ಮಾಡಬೇಕು. ಪ್ರತಿ 75 ಕಿ.ಮೀ ವ್ಯಾಪ್ತಿಗೆ ಒಂದರಂತೆ ಇಂತಹ ಘಟಕಗಳನ್ನು ಸ್ಥಾಪಿಸಬೇಕು.
ಅಧಿಕಾರಿಗಳು ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಪೂರಕವಾಗಿ ಸಹಕರಿಸಬೇಕು. ಪ್ರತಿ ಜಿಲ್ಲೆಯಲ್ಲಿ ಯಾವುದಾದರೂ ಕಟ್ಟಡ ನಿರ್ಮಾಣ ಮತ್ತು ಒಡೆಯುವ ಸಂದರ್ಭದಲ್ಲಿ ತ್ಯಾಜ್ಯವನ್ನು ಪುನರ್ ಬಳಕೆ ಮಾಡುವ ಮೂಲಕ ಕೊಳಗೇರಿಗಳ ನಿರ್ಮಾಣವಾಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನದಿಗಳಿಗೆ ಘನ ಹಾಗೂ ದ್ರವ ತ್ಯಾಜ್ಯ ಸೇರದ ಹಾಗೆ ಮುಂಜಾಗ್ರತೆ ವಹಿಸುವ ಯೋಜನೆ ಸಿದ್ಧವಾಗಿದ್ದು, 2021ರೊಳಗೆ ಅದನ್ನು ಅನುಷ್ಠಾನಗೊಳಿಸಬೇಕು. ಎಲ್ಲಾ ನಗರಗಳಲ್ಲಿ ವಾಯುಮಾಲಿನ್ಯ, ಕಾರ್ಖಾನೆಗಳಿಂದ ಬರುವ ಹೊಗೆ ಪ್ರಮಾಣ ಎಷ್ಟಿದೆ ಎಂಬ ಮಾಹಿತಿಯನ್ನು ಸಂಗ್ರಹಿಸಿ ಒದಗಿಸಬೇಕೆಂದು ಹಾಗೂ ಪರಿಸರ ಮಾಲಿನ್ಯ ನಿಯಂತ್ರಿಸಲು ಜಿಲ್ಲಾ ಮಟ್ಟದ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು ಟಿ.ಎಂ. ವಿಜಯ ಭಾಸ್ಕರ್ ಹೇಳಿದರು.
ವೀಡಿಯೋ ಸಂವಾದದಲ್ಲಿ ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಗಣಿ ಮತ್ತು ಭೂ ವಿಜ್ಞಾನ ಇಲಖೆ ಉಪ ನಿರ್ದೇಶಕ ನಾಗರಾಜ್, ಸಹಾಯಕ ಉಪ ಆರಣ್ಯ ಸಂರಕ್ಷಣಾಧಿಕರಿಯಾದ ಜಗದೀಶ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ನಾಗರಾಜ್, ತಹಶೀಾªರ್ ಶಿವಶಂಕರಪ್ಪ ಹಾಗೂ ಸಂತೋಷ್ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ