ಸ್ಥಳೀಯ ಸಂಸ್ಥೆಗಳಲ್ಲಿ ಶಾಸಕರ ಹಸ್ತಕ್ಷೇಪಕ್ಕೆ ಖಂಡನೆ


Team Udayavani, Mar 5, 2020, 3:00 AM IST

staliya-samste

ಅರಸೀಕೆರೆ: ಕ್ಷೇತ್ರದ ಶಾಸಕ ಕೆ.ಎಂ.ಶಿವಲಿಂಗೇಗೌಡರು ಸ್ಥಳೀಯ ಜನಪ್ರತಿನಿಧಿಗಳ ಅಧಿಕಾರ ಹಾಗೂ ಅನುದಾನದಲ್ಲಿ ಹಸ್ತಕ್ಷೇಪ ಮಾಡುವ ಮೂಲಕ ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಗೆ ಅವಮಾನ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್‌ ಮುಖಂಡರು ನಗರದ ಗ್ರಾಮೀಣ ನೀರು ಸರಬರಾಜು ಯೋಜನಾ ಕಚೇರಿಯ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಜಿಪಂ ಸದಸ್ಯ ಪಟೇಲ್‌ ಶಿವಪ್ಪ, ಪ್ರಜಾಪ್ರಭುತ್ವ ಆಡಳಿತದಲ್ಲಿ ಪಂಚಾಯತ್‌ ರಾಜ್‌ ವ್ಯವಸ್ಥೆಯಲ್ಲಿ ಅಧಿಕಾರ ವಿಕೇಂದ್ರೀಕರಣ ಮಾಡುವ ಮೂಲಕ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡುತ್ತದೆ. ಸ್ಥಳೀಯ ಜನಪ್ರತಿನಿಧಿಗಳು ಕಾರ್ಯಯೋಜನೆ ಅನುಷ್ಠಾನ ಗೊಳಿಸಬೇಕೆಂಬ ಉದ್ದೇಶದಿಂದ ಆಡಳಿತ ವ್ಯವಸ್ಥೆ ರೂಪಿಸಲಾಗಿದೆ.

ಆದರೆ ಕ್ಷೇತ್ರದ ಶಾಸಕರು ಜಿಲ್ಲಾ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಅಧಿಕಾರ ವ್ಯಾಪ್ತಿ ಅರ್ಥ ಮಾಡಿಕೊಳ್ಳದೇ ಕಾಂಗ್ರೆಸ್‌ ಪಕ್ಷದ ಸದಸ್ಯರು ಆಯ್ಕೆಯಾಗಿರುವ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳ ಅನುದಾನದಲ್ಲಿ ಹಾಗೂ ಅನುಷ್ಠಾನದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆಪಾದಿಸಿದರು. ಜಿಲ್ಲೆಯಲ್ಲಿ ಯಾವ ಕ್ಷೇತ್ರದ ಶಾಸಕರು ಮಾಡದಂತಹ ಅನ್ಯಾಯವನ್ನು ಮಾಡುವ ಮೂಲಕ ಸ್ಥಳೀಯ ಜನಪ್ರತಿನಿಧಿಗಳ ಅಧಿಕಾರವನ್ನೇ ಕಿತ್ತುಕೊಳ್ಳುತ್ತಿದ್ದಾರೆ ಎಂದು ದೂರಿದರು.

ಬೆಂಬಲಿಗರಿಗೆ ಕಾಮಗಾರಿ ಗುತ್ತಿಗೆ: ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆಯಿಂದ ಗಂಡಸಿ ಮತ್ತು ಕಣಕಟ್ಟೆ ಹೋಬಳಿಯಲ್ಲಿ ಜಿಲ್ಲಾ ಪಂಚಾಯಿತಿ ಅಧೀನದಲ್ಲಿ ಅನುಷ್ಠಾನಗೊಳ್ಳಬೇಕಿದ್ದ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ತಮ್ಮ ಪಕ್ಷದ ಕಾರ್ಯಕರ್ತರಿಗೆ ಗುತ್ತಿಗೆ ನೀಡಿ ಸರ್ವಾಧಿಕಾರಿ ಧೋರಣೆ ಪ್ರದರ್ಶಿಸುತ್ತಿರುವುದು ನೋಡಿದರೆ ಶಾಸಕರಿಗೆ ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯ ಅಧಿಕಾರ ವಿಕೇಂದ್ರೀಕರಣದ ಬಗ್ಗೆ ಗೌರವ ಇಲ್ಲದಂತೆ ಕಾಣುತ್ತದೆ ಎಂದು ಅವರು ಕಿಡಿ ಕಾರಿದರು.

ಪ್ರತಿಭಟನೆಯಲ್ಲಿ ಬೇಲೂರು ಕ್ಷೇತ್ರದ ಜಿಪಂ ಸದಸ್ಯರಾದ ಮಂಜಪ್ಪ, ಚಂದ್ರಶೇಖರ್‌, ಜಿಪಂ ಮಾಜಿ ಸದಸ್ಯೆ ಸುಲೋಚನಾ ಬಾಯಿ, ನಗರಸಭೆ ಸದಸ್ಯ ವೆಂಕಟಮುನಿ, ನಗರಸಭೆ ಮಾಜಿ ಸದಸ್ಯ ಶ್ರೀನಿವಾಸ್‌, ಉಮಾಶಂಕರ್‌, ಜಯಪದ್ಮ , ನಿರಂಜನ್‌, ಯೋಗೀಶ್‌, ಮದನ್‌, ದಲಿತ ಸಂಘಟನೆಗಳ ಒಕ್ಕೂಟಗಳ ಅಧ್ಯಕ್ಷ ವೆಂಕಟೇಶ್‌, ಅಣ್ಣಾ ದೊರೈ, ಮಾಡಾಳು ರಂಗನಾಥ್‌, ನಂಜಪ್ಪ, ಕೃಷ್ಣನಾಯ್ಕ ಹಾಗೂ ಮತ್ತಿತರರು ಭಾಗವಹಿಸಿದ್ದರು.

ಸಂವಿಧಾನದ ಆಶಯಗಳಿಗೆ ಧಕ್ಕೆ: ಜಿಪಂ ಸದಸ್ಯ ಮಾಡಾಳು ಸ್ವಾಮಿ ಮಾತನಾಡಿ, ಜಿಲ್ಲೆಯ ಯಾವ ಶಾಸಕರೂ ಜಿಲ್ಲಾ ಪಂಚಾಯಿತಿ ಸದಸ್ಯರ ಅನುದಾನಕ್ಕೆ ಕತ್ತರಿ ಹಾಕುವುದಿರಲಿ ಅಥವಾ ಕಾಮಗಾರಿಗೆ ಸಂಬಂಧಿಸಿದ ಹಸ್ತಕ್ಷೇಪ ಮಾಡಿಲ್ಲ ಆದರೆ. ಸ್ಥಳೀಯ ಶಾಸಕರು ಉದ್ದೇಶ ಪೂರಕವಾಗಿಯೇ ಕಾಂಗ್ರೆಸ್‌ ಸದಸ್ಯರು ಆಯ್ಕೆಯಾಗಿರುವ ಕ್ಷೇತ್ರಗಳಲ್ಲಿ ಹಸ್ತಕ್ಷೇಪ ಮಾಡುವ ಮೂಲಕ ಸಂವಿಧಾನದ ಆಶಯಗಳಿಗೆ ಧಕ್ಕೆ ತರುತ್ತಿದ್ದಾರೆ. ಶಾಸಕರು ತಮ್ಮ ವರ್ತನೆಯನ್ನು ಸರಿಪಡಿಸಿಕೊಳ್ಳದಿದ್ದರೆ ಕಾಂಗ್ರೆಸ್‌ನಿಂದ ಬೀದಿಗಿಳಿದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

ಬೆಲೆ ತೆರಬೇಕಾಗುತ್ತದೆ: ಕಾಂಗ್ರೆಸ್‌ ಮುಖಂಡ ಶಶಿಧರ್‌ ಮಾತನಾಡಿ, ಶಾಸಕರು ತಮಗೆ ಸರ್ಕಾರದಿಂದ ಬರುವ ಕೋಟ್ಯಂತರ ರೂ. ಅನುದಾನದ ಜೊತೆಗೆ ಜಿಪಂ ಸದಸ್ಯರ ಅನುದಾನವನ್ನು ಬಳಕೆ ಮಾಡಿಕೊಂಡು ಮುಂದಿನ ಗ್ರಾಮಪಂಚಾಯಿತಿ ಚುನಾವಣೆಯ ದೃಷ್ಟಿಯಿಂದ ಜೆಡಿಎಸ್‌ ಕಾರ್ಯಕರ್ತರಿಗೆ ಕಾಮಗಾರಿಗಳನ್ನು ನೀಡುವ ಆಸೆ ತೋರಿಸಿ ಹಿಡಿದಿಟ್ಟುಕೊಳ್ಳಲು ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳ ಅಧಿಕಾರ ಮೊಟಕುಗೊಳಿಸುತ್ತಿರುವುದು ಸರಿಯಲ್ಲ. ಮುಂದಿನ ದಿನಗಳಲ್ಲಿ ಇದಕ್ಕೆ ಅವರು ಬೆಲೆ ತೆರಬೇಕಾಗುತ್ತದೆ ಎಂದರು.

ಟಾಪ್ ನ್ಯೂಸ್

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.