

Team Udayavani, Apr 6, 2024, 10:50 PM IST
ಅರಸೀಕೆರೆ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ 25 ಗ್ಯಾರಂಟಿ ಭರವಸೆಗಳನ್ನು ಜಾರಿಗೆ ತರಬೇಕಾದರೆ ಪ್ರಸ್ತುತ ವರ್ಷದಲ್ಲಿ ಕೇಂದ್ರ ಸರಕಾರ ಮಂಡಿಸಿದ ಬಜೆಟ್ನ ನಾಲ್ಕು ಪಟ್ಟು ಹಣ ಸಂಗ್ರಹಿಸಬೇಕಾಗುತ್ತದೆ. ಈ ಹಣವನ್ನು ತರಲು ಯಾರ ಜೇಬಿಗೆ ಕೈ ಹಾಕುತ್ತೀರಿ ಎಂದು ಕಾಂಗ್ರೆಸ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪ್ರಶ್ನಿಸಿದ್ದಾರೆ.
ತಾಲೂಕಿನ ಗಂಡಸಿ ಹೋಬಳಿ ನಾಗರಹಳ್ಳಿ ಗ್ರಾಮದಲ್ಲಿ ಜರಗಿದ ಜೆಡಿಎಸ್ ಸಭೆಯಲ್ಲಿ ಮಾತನಾಡಿದ ಅವರು, ಕೇವಲ ಮೂರು ರಾಜ್ಯಗಳಲ್ಲಿ ಆಡಳಿತದಲ್ಲಿ ಇರುವ ಕಾಂಗ್ರೆಸ್, ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಸುಳ್ಳು ಭರವಸೆ ಸೇರಿ 25 ಗ್ಯಾರಂಟಿ ಘೋಷಣೆ ಮೂಲಕ ಅಧಿಕಾರಕ್ಕೆ ಬರಲು ಕನಸು ಕಾಣುತ್ತಿದೆ ಎಂದು ಕಿಡಿಕಾರಿದರು.
Ad
You seem to have an Ad Blocker on.
To continue reading, please turn it off or whitelist Udayavani.