ರೇವಣ್ಣ ಪರ ಬಿಇಒ ಮತಯಾಚನೆ ಆರೋಪ


Team Udayavani, Feb 1, 2023, 4:19 PM IST

tdy-18

ಹೊಳೆನರಸೀಪುರ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ಸರ್ಕಾರಿ ಅಧಿಕಾರಿಯೊಬ್ಬರು ಜೆಡಿಎಸ್‌ನ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಪರವಾಗಿ ಮತ ಯಾಚಿಸಿದ ನಡೆಯನ್ನು ತಾಲೂಕು ಕಾಂಗ್ರೆಸ್‌ ಮುಖಂಡ ಶ್ರೇಯಸ್‌ ಪಟೇಲ್‌ ತೀವ್ರವಾಗಿ ಖಂಡಿಸಿದರು.

ಪಟ್ಟಣದ ಸ್ವಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಬಿಇಒ ಶಾಲಾ ಕಾರ್ಯಕ್ರಮದಲ್ಲಿ ಹಾಲಿ ಶಾಸಕನ ಪರ ಮತಯಾಚಿಸಿ, ಗ್ರಾಮದ ಜನತೆ ಅವರಿಗೆ ಹೆಚ್ಚಿನ ಬೆಂಬಲ ನೀಡುವಂತೆಮನವಿ ಮಾಡಿದ್ದಾರೆ. ಇದು ಕಾನೂನಿನ ಪ್ರಕಾರ ಅಕ್ಷಮ್ಯವೆಂದು ಟೀಕಿಸಿದರು.

ಆಯೋಗಕ್ಕೆ ಪತ್ರ: ಕಳೆದ ಎರಡು ತಿಂಗಳ ಹಿಂದೆ ತಾವು ಕೇಂದ್ರ ಚುನಾವಣಾ ಆಯೋಗ ಸೇರಿದಂತೆ ರಾಜ್ಯ, ಜಿಲ್ಲೆ, ತಾಲೂಕು ಚುನಾವಣಾ ಅಧಿಕಾರಿಗಳಿಗೆ ಪತ್ರ ಬರೆದು ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಹತ್ತಾರು ವರ್ಷಗಳಿಂದ ಠಿಕಾಣಿ ಹಾಕಿರುವ ಅಧಿಕಾರಿಗಳು ಏಕ ಪಕ್ಷೀಯವಾಗಿ ನಡೆದುಕೊಳ್ಳುತ್ತಿದ್ದಾರೆ. ಇದರಿಂದ ಪಾರದರ್ಶಕ ಆಡಳಿತ ಮರೀಚಿಕೆಯಾಗಿದೆ. ಇಂತಹ ಅಧಿಕಾರಿಗಳಿಂದ ಕ್ಷೇತ್ರದಲ್ಲಿ ಮುಕ್ತ ಚುನಾವಣೆ ನಡೆಸಲು ಅಸಾಧ್ಯವಾಗಿದೆ. ಆದ್ದರಿಂದ ಇಂತಹ ಸರ್ಕಾರಿ ಆಧಿಕಾರಿಗಳನ್ನು ವರ್ಗಾವಣೆ ಮಾಡಿ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಮತ್ತೂಮ್ಮೆ ಆಯೋಗಕ್ಕೆ ಪತ್ರ: ತಾವು ಕೇಂದ್ರ ಚುನಾವಣಾ ಬರೆದ ಪತ್ರಕ್ಕೆ ಈ ದಿನದವರಗೆ ಯಾವುದೆ ಲಿಖೀತ ಹಿಂಬರಹ ಬಂದಿಲ್ಲ, ಆದರೂ ಸಹ ಈ ಬಗ್ಗೆ ಅಧಿಕಾರಿಗಳ ಗಮನ ಸೆಳೆಯುವ ಸಲುವಾಗಿ ಮತ್ತೂಮ್ಮೆ ಪತ್ರ ಬರೆದು ಬಹಳ ವರ್ಷಗಳಿಂದ ಠಿಕಾಣಿ ಹೂಡಿರುವಅಧಿಕಾರಿಗಳನ್ನು ವಿಧಾನಸಭಾ ಚುನಾವಣೆ ಮುಗಿಯುವವರಗೆ ವರ್ಗಾವಣೆ ಮಾಡಬೇಕೆಂದು ಮತ್ತೂಮ್ಮೆ ತಾವು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿಗಳನ್ನು ಮನವಿ ಮಾಡುವುದಾಗಿ ತಿಳಿಸಿದರು.

ದುರಾಡಳಿತದ ವಿರುದ್ಧ ಸಮರ: ಈ ಬಾರಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ ತಾಲೂಕಿನಲ್ಲಿ ಕಳೆದ 20 ವರ್ಷ ಗಳಿಂದ ಜನರ ಆಶೋತ್ತಗಳ ವಿರುದ್ಧ ದರ್ಪ ದುರಾಡಳಿತ ವಿರುದ್ಧ ಮತ್ತುಸ್ವಾಭಿಮಾನಗಳ ಪರವಾಗಿ ನಡೆಯುತ್ತಿರುವ ಪ್ರಜಾಪ್ರಭುತ್ವದ ಯುದ್ಧ ಎಂದೆ ಹೇಳಬಹುದಾಗಿದೆ. ಈ ಚುನಾವಣೆಯಲ್ಲಿಸ್ವಾಭಿಮಾನಿಗಳಿಗೆ ದೊರೆಯವ ಜಯ ಆಗಲಿದೆ ಎಂದರು.

ರಸ್ತೆ ಕಾಮಗಾರಿಯಲ್ಲೂ ತಾರತಮ್ಯ: ತಾಲೂಕಿನ ಮಲ್ಲಪ್ಪನ ಹಳ್ಳಿ ರಸ್ತೆಗೆ ವಿದ್ಯುತ್‌ ನಗರದವರೆಗೆ ಕಾಂಕ್ರಿಟ್‌ ರಸ್ತೆ ಮಾಡುತ್ತಿದ್ದು, ಈ ರಸ್ತೆಬೀರನಹಳ್ಳಿ ಗ್ರಾಮ ದವರೆಗೆ ಸಂಪೂರ್ಣ ಗುಂಡಿಗಳಿಂದ ತುಂಬಿವಾಹನಗಳು ಓಡಾಡದಂತೆ ಪರಿಸ್ಥಿತಿ ಎದುರಾಗಿದೆ. ಆದರೆ, ಕಾಂಕ್ರಿಟ್‌ ರಸ್ತೆಯನ್ನು ಕೇವಲ ವಿದ್ಯುತ್‌ ನಗರದವರೆಗೆ ನಡೆಸುತ್ತಿದ್ದು ಇದು ಸರಿಯಲ್ಲ. ಈ ರಸ್ತೆಯನ್ನು ಬೀರನಹಳ್ಳಿ ವರೆಗೆ ಮುಂದುವರೆಸಬೇಕೆಂದು ನೀರಾವರಿ ಇಲಾಖೆ ಆಧಿಕಾರಿಗಳಿಗೆಮನವಿ ಮಾಡುವುದಾಗಿ ತಿಳಿಸಿದರು. ಈ ರಸ್ತೆ ನಿರ್ಮಾಣದಲ್ಲಿ ತಾರತಮ್ಯ ಎಸಗುತ್ತಿರುವ ಅಧಿಕಾರಿಗಳ ವಿರುದ್ಧ ತಾವು ಬೀದಿಗಿಳಿದು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‌ ಪಕ್ಷದ ಜಾಲತಾಣದ ರಾಜ್ಯಉಪಾಧ್ಯಕ್ಷ ಮುಜಾಹಿದ್‌ ಪಾಷಾ, ಪಕ್ಷದ ಮುಖಂಡರಾದ ಹೇಮಂತ್‌ ಕುಮಾರ್‌, ಎಚ್‌.ಟಿ.ಲಕ್ಷ್ಮಣ್‌, ಗೊವಿಂದರಾಜು ಹಾಜರಿದ್ದರು.

ರಾಜ್ಯ, ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆ :

ಪ್ರಸ್ತುತ ತಾಲೂಕಿನಲ್ಲಿ ಇರುವ ಬಹುತೇಕ ಅಧಿಕಾರಿಗಳು ಮಾಜಿ ಸಚಿವ ಹಾಗು ಶಾಸಕರ ಅಣತಿಯಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ಶಾಲಾ ಕಾರ್ಯಕ್ರಮದಲ್ಲಿ ಜೆಡಿಎಸ್‌ ಪಕ್ಷದ ಪರವಾಗಿ ಮತ ಯಾಚಿಸಿ ರುವ ವಿಡಿಯೋ ಬಿಡುಗಡೆ ಮಾಡಿ ಬಿಇಒ ಭಾಗ್ಯಮ್ಮ ಅವರನ್ನು ತಕ್ಷಣವೇ ಸೇವೆಯಿಂದ ಅಮಾನತು ಮಾಡಬೇಕೆಂದು ಆಗ್ರಹಿಸಿದರು. ಜತೆಗೆ ವಿಡಿಯೋ ತುಣುಕನ್ನು ಜಿಲ್ಲಾಧಿಕಾರಿಗಳು, ರಾಜ್ಯ ಚುನಾವಣಾ ಆಯೋಗ ಮತ್ತು ಕೇಂದ್ರ ಚುನಾವಣಾ ಆಯೋಗಕ್ಕೆ ಕಳುಹಿಸಿ ಕ್ರಮ ಕೈಗೊಳ್ಳುವಂತೆ ತಾಲೂಕು ಕಾಂಗ್ರೆಸ್‌ ಮುಖಂಡ ಶ್ರೇಯಸ್‌ ಪಟೇಲ್‌ ಆಗ್ರಹಿಸಿದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.