ಕಾಂಗ್ರೆಸ್ ಶಾಸಕ ರಾಜೇಗೌಡಗೆ ಬಿಜೆಪಿ ಗಾಳ?
Team Udayavani, Nov 8, 2018, 6:25 AM IST
ಹಾಸನ: ಜೆಡಿಎಸ್ನ ಇಬ್ಬರು ಶಾಸಕರ ಸೆಳೆಯಲು ಬಿಜೆಪಿಯವರು ಆಮಿಷವೊಡ್ಡಿದ್ದರು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ ಬೆನ್ನಲ್ಲೇ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜೇಗೌಡ ಅವರು, ತಮಗೂ ಬಿಜೆಪಿಯವರು ಆಮಿಷವೊಡ್ಡಿ ಆಪರೇಷನ್ ಕಮಲಕ್ಕೆ ಯತ್ನಿಸಿದ್ದರು ಎಂದು ಬಹಿರಂಗಪಡಿಸಿದರು.
ಹಾಸನಾಂಬೆಯ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಬಂದರೆ 50 ಕೋಟಿ ರೂ. ಹಾಗೂ ಸಚಿವ ಸ್ಥಾನ ಕೊಡುವುದಾಗಿ ಯಡಿಯೂರಪ್ಪ ಅವರು ತಮ್ಮ ಸಂಬಂಧಿಕರು ಹಾಗೂ ಸಕಲೇಶಪುರದ ಬಿಜೆಪಿ ಪರಾಜಿತ ಅಭ್ಯರ್ಥಿಯ ಮೂಲಕ ಆಮಿಷವೊಡಿದ್ದರು. ಆದರೆ ನಾನು ಬಿಜೆಪಿಯವರ ಆಮಿಷಕ್ಕೆ ಬಗ್ಗಲಿಲ್ಲ ಎಂದು ಹೇಳಿದರು.