ಬೃಹತ್‌ ಯೋಜನೆಗಳಿಲ್ಲದ ಸಮಾಧಾನಕರ ಬಜೆಟ್‌


Team Udayavani, Feb 17, 2018, 7:30 AM IST

s-20.jpg

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2018-19 ನೇ ಸಾಲಿನ ಬಜೆಟ್‌ನಲ್ಲಿ ಹಾಸನ ಜಿಲ್ಲೆಯ ಅಭಿವೃದ್ಧಿಯ ಬೃಹತ್‌ ಯೋಜನೆಗಳನ್ನು ಘೋಷಣೆ ಮಾಡದಿದ್ದರೂ ಜನರು ಸಮಾಧಾನಪಡಬಹುದಾದ ಕೆಲವು ರೈತಪರ ಯೋಜನೆಗಳನ್ನು ಪ್ರಕಟಿಸಿದ್ದಾರೆ.

ಹಾಸನದ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕ್ಯಾನ್ಸರ್‌ ಚಿಕಿತ್ಸಾ ಕೇಂದ್ರ ಸ್ಥಾಪನೆಯ ಘೋಷಣೆಯು ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿದ್ದು, ಬಹುದಿನಗಳ ಹಾಸನ ನಗರದ ಜನರ ಬೇಡಿಕೆಯಾಗಿದ್ದ ರೈಲ್ವೆ ಮೇಲ್ಸೇತುವೆಗೆ ಬಜೆಟ್‌ ಮಂಡನೆಗೆ ಮುನ್ನಾದಿನ ಸಚಿವ ಸಂಪುಟದ ಅನುಮೋದನೆ ನೀಡಿರುವುದೂ ಹಾಸನದ ಜನರಿಗೆ ಹರ್ಷ ತಂದಿದೆ.

ಹಾಸನದ ಚನ್ನಪಟ್ಟಣ ಕೆರೆ, ಸತ್ಯಮಂಗಲ ಕೆರೆ ಮತ್ತು ಹುಣಸಿನ ಕೆರೆಗಳ ಪುನಶ್ಚೇತನಕ್ಕೆ ನೆರವು ನೀಡುವುದಾಗಿ  ಘೋಷಣೆ ಮಾಡಿರುವುದು ಹಿರಿಯ ನಾಗರಿಕರ ವೇದಿಕೆಯು ಕಳೆದೊಂದು ವರ್ಷದಿಂದ ನಡೆಸಿಕೊಂಡು ಬರುತ್ತಿದ್ದ ಹೋರಾಟಕ್ಕೆ ಜಯ ಸಿಕ್ಕಿದಂತಾಗಿದೆ. ಹಾಗೆಯೇ ಅರಕಲಗೂಡು ತಾಲೂಕು ಕೊಣನೂರು ಹಾಗೂ ಚನ್ನರಾಯಟ್ಟಣದ ಅಮಾನಿ ಕೆರೆಗಳಿಂದ ನೀರೆತ್ತಿ ವಿವಿಧ ಕೆರೆಗಳಿಗೆ ನೀರು ತುಂಬಿಸುವ 70 ಕೋಟಿ ರೂ. ಯೋಜನೆಗೂ ನೆರವು ಘೋಷಣೆ ಮಾಡಿರುಮದು ರೈತ ಸಮುದಾಯಕ್ಕೆ ಸಮಾಧಾನ ತಂದಿದೆ.

ಹಾಸನದ ಹೊರ ವಲಯದ ಹಳ್ಳಿಗಳು ಹಾಗೂ ಸತ್ಯಮಂಗಲ ಕೆರೆಗೆ ನೀರು ತುಂಬಿಸುವ 20 ಕೋಟಿ ರೂ. ಬಹುಗ್ರಾಮ ಕುಡಿಯುವ ನೀರು ಯೋಜನೆಗೂ ಮಂಜೂರಾತಿ ನೀಡಿರುವುದು ನಾಲ್ಕು ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿದಂತಾಗಿದೆ. ಈ ಯೋಜನೆಯಿಂದ ಹಾಸನದ ವಿದ್ಯಾನಗರ, ವಿವೇಕ ನಗರ, ಚಿಕ್ಕ ಹೊನ್ನೇಹಳ್ಳಿ ತೇಜೂರು, ಸತ್ಯಮಂಗಲ ಸೇರಿದಂತೆ ಹಲವು ಬಡಾವಣೆಗಳ ಕುಡಿಯುವ ನೀರಿನ ಬವಣೆ ನಿವಾರಣೆಗೆ ನೆರವಾಗಲಿದೆ.

ರೈತರಿಗೆ ಇನ್ನೊಂದು ಸಂತೋಷದ ವಿಷಯವೆಂದರೆ ತೆಂಗು ಬೆಳೆ ಪುನಶ್ಚೇತನಕ್ಕೆ ನೆರವು ಘೋಷಣೆ ಮಾಡಿರುವುದು. ತೆಂಗು ಬೆಳೆಗಾರರಿಗೆ ಸಂತಸ ತಂದಿದೆ. ಸತತ ಬರಗಾಲದಿಂದ ತೆಂಗಿನ ಮರಗಳನ್ನು ಕಳೆದುಕೊಂಡಿದ್ದ ಬೆಳೆಗಾರರಿಗೆ ಹೊಸದಾಗಿ ತೆಂಗು ಬೆಳೆ ಬೆಳೆಸಲು ನೆರವು ಸಿಗಲಿದೆ. ಜೊತೆಗೆ ಅರಕಲಗೂಡು ತಾಲೂಕು ರುದ್ರಪಟ್ಟಣದಲ್ಲಿ ವಿದ್ಯುತ್‌ ಉಪಕೇಂದ್ರ ಸ್ಥಾಪನೆಯನ್ನೂ ಘೋಷಣೆ ಮಾಡಿದ್ದಾರೆ. ಚನ್ನರಾಯಪಟ್ಟಣ ತಾಲೂಕಿನಿಂದ ನಾಗಮಂಗಲ ತಾಲೂಕಿಗೆ ಹೇಮಾವತಿ ನೀರು ಹರಿಸುವ ಸಾಹುಕಾರ್‌ ಚನ್ನಯ್ಯ ನಾಲೆಯ ಅಧುನೀಕರಣ ಯೋಜನೆಗೂ ಬಜೆಟ್‌ನಲ್ಲಿ  ಪ್ರಸ್ತಾಪ ಮಾಡಿರುವುದು ಆ ಭಾಗದ ರೈತರಿಗೆ ಸಮಾಧಾನ ತಂದಿದೆ.

ದೂರದ ಬೆಂಗಳೂರು, ಮೈಸೂರು ನಗರಗಳಿಗೆ ಹೋಗಿ ಚಿಕಿತ್ಸೆ ಪಡೆಯುವ ತೊಂದರೆ ನಿವಾರಣೆಯಾಗಲಿದೆ. ಬೇಲೂರು, ಹಳೆಬೀಡು, ಶ್ರವಣಬೆಳಗೊಳದಲ್ಲಿ ಪ್ರವಾಸಿ ಸೌಲಭ್ಯಗಳ ಅಭಿವೃದ್ಧಿಗೆ ನೆರವು ಘೋಷಣೆ ಮಾಡಿರುವುದು ಜಿಲ್ಲೆಯ ಪ್ರವಾಸೋದ್ಯಮದ ಅಭಿವೃದ್ಧಿಗೆ ನೆರವಾಗಲಿದ್ದು, ಆ ಮೂಲಕ ಉದ್ಯೋಗ ಸೃಷ್ಟಿಗೂ ಪೂರಕವಾಗಿದೆ. ಅರಸೀಕೆರೆ ಪಟ್ಟಣದ ಒಳ ಚರಂಡಿ ಯೋಜನೆಗೂ ನೆರವು ಘೋಷಣೆ ಮಾಡಿದ್ದಾರೆ.

ದೂರದೃಷ್ಟಿಯ ಬೃಹತ್‌ ಅಭಿವೃದ್ಧಿ ಯೋಜನೆಗಳಾದ ವಿಮಾನ ನಿಲ್ದಾಣ, ಗೊರೂರಿನ ಹೇಮಾವತಿ ಜಲಾಯಶದ ಮುಂಭಾಗ ಉದ್ಯಾನವನ ನಿರ್ಮಾಣ, ಹಾಸನ ತಾಲೂಕು ದುದ್ದ, ಶಾಂತಿಗ್ರಾಮ ಹೋಬಳಿಯ ಗ್ರಾಮಗಳಿಗೆ ಹೇಮಾವತಿ ನೀರು ಪೂರೈಸುವ ಬಹುಗ್ರಾಮ ಕುಡಿಯುವ ನೀರು, ಆನೆ ಕಾರಿಡಾರ್‌ ಮತ್ತಿತರ ದೂರ ದೃಷ್ಟಿಯ ಯೋಜನೆಗಳನ್ನು ಬಜೆಟ್‌ನಲ್ಲಿ ಪ್ರಕಟಿಸದಿದ್ದರೂ ಮುಖ್ಯಮಂತ್ರಿಯವರು ಜಿಲ್ಲೆಯ ಜನರನ್ನು ಸಮಾಧಾನಪಡಿಸುವ ಯೋಜನೆಗಳನ್ನು ಚುನಾವಣಾ ವರ್ಷದಲ್ಲಿ ಪ್ರಕಟಿಸಿ ಸಮಾಧಾನಗೊಳಿಸಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಕೃಷಿ, ಕೈಗಾರಿಕೆಗೆ ಪೂರಕ ವಾತಾವರಣವಿದೆ. ಆದರೆ ಮುಖ್ಯಮಂತ್ರಿಯವರು ಬಜೆಟ್‌ನಲ್ಲಿ  ವಿಮಾನ ನಿಲ್ದಾಣ, ಗೊರೂರಿನ ಉದ್ಯಾನವನ, ಆನೆ ಕಾರಿಡಾರ್‌, ಆಲೂಗಡ್ಡೆ ಬೆಳೆಯ ಪ್ರೋತ್ಸಾಹಕರ ಯೋಜನೆಗಳನ್ನು ಪ್ರಕಟಿಸದೆ ಮೂಗಿಗೆ ತುಪ್ಪಹಚ್ಚುವಂತಹ ಚುನಾವಣೆಯಲ್ಲಿ ಲಾಭ ಪಡೆಯುವ ಯೋಜನೆಗಳನ್ನು ಜಿಲ್ಲೆಗೆ ಪ್ರಕಟಿಸಿದ್ದಾರೆ. ಇನ್ನು ಎರಡು ತಿಂಗಳೂ ಅಧಿಕಾರದಲ್ಲಿರದ ಇವರು ಬಜೆಟ್‌ ಮಂಡಿಸಿ ಏನು ಪ್ರಯೋಜನವಿದೆ ?
ಎಚ್‌.ಎಸ್‌.ರಘು, ಜಿಲ್ಲಾ ಜೆಡಿಎಸ್‌ ವಕ್ತಾರ

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.