ಮತಾಂತರ ಆರೋಪಕ್ಕೆ ಖಂಡನೆ


Team Udayavani, Oct 6, 2021, 5:40 PM IST

conversion – satement- gulihatti shankar- opposition

ಹಾಸನ: ಶಾಸಕ ಗೂಳಿಹಟ್ಟಿ ಶೇಖರ್‌ ಅವರು ಮಾಡಿರುವ ಮತಾಂತರದ ಆರೋಪ ಖಂಡಿಸಿ ಹಾಸನ ಜಿಲ್ಲಾ ಕ್ರೈಸ್ತರ ಹಿತ ರಕ್ಷಣಾ ವೇದಿಕೆ ನಗರದಲ್ಲಿ ಮಂಗಳವಾರ ಬೃಹತ್‌ ಪ್ರತಿಭಟನೆ ನಡೆಸಿತು. ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರಾರ್ಥನೆ ಮಾಡುತ್ತಲೇ ಬೃಹತ್‌ ಮೆರವಣಿಗೆಯಲ್ಲಿ ಬಂದ ಕ್ರೈಸ್ತ ಸಮುದಾಯದವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೆಲಕಾಲ ಧರಣಿ ನಡೆಸಿ ಮನವಿ ಸಲ್ಲಿಸಿದರು.

ಕಳೆದ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಗೂಳಿಹಟ್ಟಿ ಶೇಖರ್‌ ಅವರು ತನ್ನ ತಾಯಿಯೂ ಸೇರಿ ತನ್ನ ಕ್ಷೇತ್ರದ ಸುಮಾರು 2 ಸಾವಿರ ಜನರನ್ನು ಕೈಸ್ತರು ಮತಾಂತರ ಮಾಡಿಸಿದ್ದಾರೆ ಎಂದು ಆರೋಪ ಮಾಡಿದ್ದರು. ಆದರೆ ಚಿತ್ರದುರ್ಗ ಜಿಲ್ಲಾ ಪೊಲೀಸ್‌ ಮುಖ್ಯಾಧಿಕಾರಿ ತನಿಖೆಯಿಂದ ದೃಢಪಟ್ಟಿದ್ದು, ಶಾಸಕರ ಆರೋಪದಲ್ಲಿ ಹುರುಳಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:- ಮೋದಿ ಆಡಳಿತದಿಂದ ದೇಶಕ್ಕೆ ಹೊಸ ಶಕ್ತಿ: ರಾಘವೇಂದ್ರ

ಪ್ರಚೋಧನೆ: ಮತಾಂತರದ ಆರೋಪ ಮಾಡುತ್ತಾ ದೇಶಾದ್ಯಂತ ಚರ್ಚುಗಳ ಮೇಲೆ ದಾಳಿ, ಕ್ರೈಸ್ತ ಧರ್ಮಗುರು, ಅಮಾಯಕ ಭಕ್ತರ ಮೇಲೆ ಹಲ್ಲೆ, ಆಸ್ತಿ ಪಾಸ್ತಿಗೆ ಹಾನಿ ಕೃತ್ಯಗಳು ನಿರಂತರವಾಗಿ ನಡೆಯುತ್ತಲೇ ಇವೆ. ಇಂತಹ ಬೆಳವಣಿಗೆಗೆ ಬಿಜೆಪಿ ಮುಖಂಡರೇ ಕಾರಣ. ಕಂದಾಯ ಸಚಿವ ಆರ್‌.ಅಶೋಕ್‌, ಸಂಸದ ಪ್ರತಾಪ್‌ಸಿಂಹ ಅವರ ಹೇಳಿಕೆ ಕೋಮು ಸೌಹಾರ್ದತೆ ಹಾಳು ಮಾಡಲು ಪ್ರಚೋಧನೆ ನೀಡುವಂತಿವೆ ಎಂದರು.

ಹಿಂದೂ ಜಾಗರಣ ವೇದಿಕೆ ಕ್ರೈಸ್ತ ಪ್ರಾರ್ಥನಾ ಸ್ಥಳಗಳ ಮೇಲೆ ದಾಳಿ ನಡೆಸುತ್ತಿರುವ ಪ್ರಕರಣ ನಡೆಯುತ್ತಿವೆ. ಕ್ರೈಸ್ತ ಮಿಷನರಿಗಳು ಗುಂಡು ಸೂಜಿಯಿಂದ ವಿಮಾನ ತಯಾರಿಕೆ ಮಾಡುವವರೆಗೂ ದೇಶಕ್ಕೆ ಕೊಡುಗೆ ನೀಡಿವೆ ಎಂಬುದನ್ನು ಮತಾಂತರದ ಆರೋಪ ಮಾಡುತ್ತಿರುವವರು ತಿಳಿದುಕೊಳ್ಳಬೇಕು.

ಕ್ರೈಸ್ತರು ಶಾಂತಿಪ್ರಿಯರಾಗಿದ್ದು ಯಾರ ಮೇಲೂ ದಾಳಿ ಮಾಡಿದ ಉದಾಹರಣೆ ಇಲ್ಲ ಎಂದು ಕ್ರೆçಸ್ತ ಮುಖಂಡರು ಪ್ರತಿಪಾದಿಸಿದರು.ಅಖೀಲ ಭಾರತ ಕ್ರೆçಸ್ತ ಮಹಾ ಸಭಾದ ರಾಷ್ಟ್ರೀಯ ಅಧ್ಯಕ್ಷ ಪ್ರಜ್ವಲ್‌ ಸ್ವಾಮಿ, ರಾಜ್ಯ ಕ್ರೆçಸ್ತ ಸಂಘಗಳ ಒಕ್ಕೂಟದ ಸುನೀಲ್‌ ಕುಮಾರ್‌, ಜಿಲ್ಲಾಧ್ಯಕ್ಷ ರಾಜೇಶ್‌, ಉಪಾಧ್ಯಕ್ಷ ಕೆ.ಮೂರ್ತಿ, ಕಾರ್ಯದರ್ಶಿ ಎಚ್‌.ಎಂ.ಸುರೇಶ್‌ ಪೌಲ್‌, ಜಂಟಿ ನಿರ್ದೇಶಕ ಎ.ಬಿ.ಪ್ರಕಾಶ್‌, ಖಜಾಂಚಿ ಸ್ಟೀವನ್ಸನ್‌, ಜಿಲ್ಲಾ ಕ್ರೆçಸ್ತರ ಹಿತ ರಕ್ಷಣಾ ಸಮಿತಿ ಜಿಲ್ಲಾಧ್ಯಕ್ಷ ಜೀವನ್‌ ಪ್ರಕಾಶ್‌, ಸದಸ್ಯರಾದ ಎಸ್‌.ಆರ್‌.ಲಿಂಗರಾಜು, ಜಿ.ಎಸ್‌. ಸತೀಶ್‌ ಮತ್ತಿತರರು ನೇತೃತ್ವ ವಹಿಸಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.