ಕೃಪೆ ತೋರಿದ ವರುಣ: ಕೃಷಿ ಚಟುವಟಿಕೆ ಆರಂಭ

ತಾಲೂಕಿನಲ್ಲಿ ವಾಡಿಕೆಗಿಂತ ಶೇ.30 ಕಡಿಮೆ ಮಳೆ

Team Udayavani, Jul 8, 2019, 12:03 PM IST

hasan-tdy-1..

ಸಕಲೇಶಪುರದಲ್ಲಿ ಮಳೆಯಾದ ಹಿನ್ನೆಲೆಯಲ್ಲಿ ಬಿತ್ತನೆಗೆ ರೈತರು ಭೂಮಿ ಹದ ಮಾಡುತ್ತಿದ್ದಾರೆ.

ಸಕಲೇಶಪುರ: ಕಳೆದ 2 ದಿನಗಳಿಂದ ತಾಲೂಕಿನಲ್ಲಿ ಉತ್ತಮವಾಗಿ ಮಳೆ ಸುರಿಯುತ್ತಿದ್ದು ಇದರಿಂದ ಭತ್ತದ ನಾಟಿ ಕಾರ್ಯ ವೇಗಗೊಂಡಿದೆ.

ಜೂನ್‌ ತಿಂಗಳು ಮುಗಿದು ಜುಲೈ ತಿಂಗಳು ಆರಂಭವಾಗಿದ್ದರೂ ಸಹ ತಾಲೂಕಿನಲ್ಲಿ ಉತ್ತಮ ಮಳೆ ಬಿದ್ದಿರದ ಕಾರಣ ಭತ್ತದ ನಾಟಿ ಕಾರ್ಯವನ್ನು ಹಲವಡೆ ಆರಂಭಿಸಲು ಸಾಧ್ಯವಾಗಿರಲಿಲ್ಲ. ಜೂನ್‌ ಅಂತ್ಯಕ್ಕೆ ವಾಡಿಕೆಯಂತೆ 1,882 ಮಿ.ಮೀ. ಮಳೆಯಾಗಬೇಕಾಗಿದ್ದು ಆದರೆ 1,318 ಮಿ.ಮೀ. ಮಳೆಯಾಗಿದೆ. ಇದರಿಂದ ತಾಲೂಕಿನಲ್ಲಿ ಜೂನ್‌ ಮಾಹೆಯಲ್ಲಿ ಶೇ.30 ಕಡಿಮೆ ಮಳೆಯಾಗಿದೆ. ಕಳೆದ ವರ್ಷದ ಜೂನ್‌ ಅಂತ್ಯಕ್ಕೆ 2,344 ಮಿ.ಮೀ ಮಳೆ ಬಿದ್ದದ್ದರಿಂದ ಅತಿವೃಷ್ಟಿ ಉಂಟಾಗಿ ವ್ಯಾಪಕ ಬೆಳೆ ನಾಶವಾಗಲು ಕಾರಣವಾಗಿತ್ತು.

1,350 ಕ್ವಿಂಟಲ್ ಭತ್ತ ವಿತರಣೆ: ಕಳೆದ ಸಾಲಿನಲ್ಲಿ 9ರಿಂದ 12 ಸಾವಿರ ಹೆಕ್ಟೇರ್‌ನಲ್ಲಿ ಭತ್ತ ನಾಟಿ ತಾಲೂಕಿ ನಲ್ಲಿ ಮಾಡಲಾಗಿತ್ತು. ಈ ಬಾರಿ ಮಳೆಯ ಕೊರತೆ ಕಾರಣ ಜೂನ್‌ ಮಾಹೆಯಲ್ಲಿ ಕೇವಲ 8ಸಾವಿರ ಹೆಕ್ಟೇರ್‌ನಲ್ಲಿ ಭತ್ತದ ನಾಟಿ ಮಾಡಲಾಗಿದೆ. ಆನೆ ಹಾವಳಿಯಿಂದ ಶೇ.5 ರಷ್ಟು ಭತ್ತದ ನಾಟಿ ಕಡಿಮೆ ಯಾಗಿದೆ. ಕೃಷಿ ಇಲಾಖೆ ವತಿಯಿಂದ 1,350 ಕ್ವಿಂಟಲ್ ಭತ್ತ ವಿತರಣೆಯನ್ನು ರೈತರಿಗೆ ಮಾಡಲಾಗಿದೆ. ಮಳೆ ಕೊರತೆ ಕಾರಣ ಕಳೆದ ಜೂನ್‌ನಲ್ಲಿ ಭತ್ತದ ನಾಟಿ ಮಾಡದ ರೈತರು ಇದೀಗ ನಾಟಿಯನ್ನು ಆರಂಭಿಸಿದ್ದಾರೆ.

ಮಳೆ ಪ್ರಮಾಣ ಇಳಿಮುಖ: ಕಳೆದ ಜೂನ್‌ನಲ್ಲಿ ತಾಲೂಕಿನ ಜೀವನದಿ ಹೇಮಾವತಿಯಲ್ಲಿ ಒಳಹರಿವಿನ ಪ್ರಮಾಣ ಕಡಿಮೆಯಿದ್ದು ಆದರೆ ಕಳೆದ 2ದಿನಗಳಿಂದ ಸುರಿದ ಉತ್ತಮ ಮಳೆಗೆ ಹೇಮಾವತಿ ನದಿಯಲ್ಲಿ ನೀರಿನ ಒಳಹರಿವಿನ ಮಟ್ಟ ನಿಧಾನವಾಗಿ ಏರುತ್ತಿದೆ. ಅತಿ ಹೆಚ್ಚು ಮಳೆ ಬೀಳುವ ಹೆತ್ತೂರು, ಯಸಳೂರು, ಕಾಡುಮನೆ ಮುಂತಾದ ಕಡೆ 2000 ಮಿ.ಮೀ ಈ ಸಮಯಕ್ಕೆ ಬೀಳಬೇಕಾಗಿತ್ತು. ಆದರೆ ಈ ಬಾರಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಕಳೆದ ಬಾರಿ ಈ ಸಮಯಕ್ಕೆ ಸುರಿದ ಮಳೆಯಿಂದಾಗಿ ತಾಲೂಕಿನಲ್ಲಿ ವ್ಯಾಪಕ ಅನಾಹುತಗಳು ಸಂಭವಿಸಿದ್ದವು. ಆದರೆ ಅದೃಷ್ಟವಷಾತ್‌ ಈ ಬಾರಿ ಯಾವುದೇ ಅನಾಹುತ ಸಂಭವಿಸಿಲ್ಲ. ಮಳೆಗಾಳಿಯಿಂದಾಗಿ ಹಲವು ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಹಲವು ಗ್ರಾಮಗಳು ಕತ್ತಲೆಯಲ್ಲಿ ಇರಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ತುಂಬದ ಹಿನ್ನೀರು: ಪ್ರತಿವರ್ಷ ಈ ಸಮಯದಲ್ಲಿ ಹೇಮಾವತಿ ಹಿನ್ನೀರು ಪ್ರದೇಶಗಳಲ್ಲಿ ವ್ಯಾಪಕ ನೀರು ತುಂಬಿ ನೋಡುಗರ ಮನ ಸೆಳೆಯುತ್ತಿತ್ತು. ಸುಮಾರು 12ರಿಂದ 14 ರಷ್ಟು ಅಡಿ ನೀರು ಹೇಮಾವತಿ ಸೇತುವೆ ಯಲ್ಲಿ ಕಂಡು ಬರುತ್ತಿತ್ತು. ಮಳೆಯ ಪ್ರಮಾಣ ನಿಧಾನವಾಗಿ ಏರುತ್ತಿದ್ದರೂ ಸಹ ಹೇಮಾವತಿ ಸೇತುವೆ ಯಲ್ಲಿ ಕೇವಲ 3ರಿಂದ 4 ಅಡಿಗಳಷ್ಟು ನೀರು ದಾಖ ಲಾಗಿದೆ. ಹೇಮಾವತಿ ಸೇತುವೆ ಸಮೀಪದಲ್ಲೇ ಇರುವ ಹೊಳೆಮಲ್ಲೇಶ್ವರ ದೇಗುಲದ ಒಳಗೆ ನೀರು ಹರಿದು ಜನಪ್ರತಿನಿಧಿಗಳು ಹಾಗೂ ಸಂಘಟನೆಗಳು ತುಂಬಿದ ಹೇಮೆಗೆ ಬಾಗಿನ ಕೊಡುವುದು ಸಾಮಾನ್ಯವಾಗಿತ್ತು. ಆದರೆ ಈ ಬಾರಿ ಹೇಮೆಗೆ ಬಾಗಿನ ಕೊಡುವುದು ಕನಸಾಗಿಯೇ ಉಳಿಯುವ ಸಾಧ್ಯತೆಗಳಿವೆ.

 

● ಸುಧೀರ್‌ ಎಸ್‌.ಎಲ್

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.