ವೈದ್ಯರ ಸೇವೆ ಶ್ಲಾಘನೀಯ
Team Udayavani, Jul 2, 2021, 7:50 PM IST
ಬೇಲೂರು: ಕೊರೊನಾ ಸಂದರ್ಭದಲ್ಲಿ ಜೀವದ ಹಂಗು ತೊರೆದುರೋಗಿಗಳೊಂದಿಗೆ ಕರ್ತವ್ಯ ನಿರ್ವಹಿಸುವ ವೈದ್ಯರ ಸೇವೆ ಶ್ಲಾಘನೀಯ ಎಂದು ಬೇಲೂರು ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರಭಾಕರ್ ಹೇಳಿದರು.
ಪಟ್ಟಣದಕಾವೇರಿ ಕ್ಲಿನಿಕ್ನಲ್ಲಿ ಲಯನ್ಸ್ ಕ್ಲಬ್ ವತಿಯಿಂದಹಮ್ಮಿಕೊಂಡಿದ್ದವೈದ್ಯರ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಸಮಾಜಕ್ಕೆಹಾಗೂ ಜನರಿಗೆ ವೈದ್ಯರ ಪಾತ್ರ ಬಹುಮುಖ್ಯ. ಅವರ ಪ್ರಾಮುಖ್ಯತೆ ಮತ್ತುಜವಾಬ್ದಾರಿ ಮಹತ್ವ ಪಡೆದುಕೊಂಡಿರುತ್ತದೆ. ವೈದ್ಯರ ಕೆಲಸ, ಪ್ರವೃತ್ತಿ,ಜವಾಬ್ದಾರಿ ಹಾಗೂ ಪ್ರಾಮುಖ್ಯತೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಅಗತ್ಯವಿದ್ದು, ವೈದ್ಯರಿಗೆ ಆತ್ಮವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಲಯನ್ಸ್ ಸಂಸ್ಥೆ ಹಲವಾರುಕಾರ್ಯಕ್ರಮಗಳನ್ನು ರೂಪಿಸಿದೆ ಎಂದರು.
ವೈದ್ಯ ಡಾ.ಸಂತೋಷ ಮಾತನಾಡಿ, ಭಾರತದಲ್ಲಿ ಪ್ರಸಿದ್ಧ ವೈದ್ಯಬಿ.ಸಿ.ರಾಯ್ ಅವರ ಗೌರವಾರ್ಥ ವೈದ್ಯರ ದಿನವನ್ನು ಜು.1ರಂದುಆಚರಿಸಲಾಗುತ್ತದೆ ಎಂದರು. ವೈದ್ಯ ಚಂದ್ರಮೌಳಿ ಮಾತನಾಡಿ, ವೈದ್ಯರ ನಿಷ್ಠೆಶ್ರಮ ಹಾಗೂ ನಿಸ್ವಾರ್ಥ ಭಾವದಿಂದ ನೀಡುವ ಆರೈಕೆಗೆ ಮೌಲ್ಯ ಕಟ್ಟಲುಸಾಧ್ಯವಿಲ್ಲ ಎಂದರು.
ಈ ಸಂದರ್ಭದಲ್ಲಿ ವೈದ್ಯರಾದ ಡಾ.ಚಂದ್ರಮೌಳಿ, ಡಾ.ಗುರುಚರಣ್, ಡಾ.ಸಂತೋಷ್ ಅವರನ್ನು ಅಭಿನಂದಿಸಲಾಯಿತು. ಮಾಜಿಅಧ್ಯಕ್ಷ ಬಿಟ್ರಾವಳ್ಳಿ ಉಮೇಶ್, ಕೆ.ಎಲ್.ಸುರೇಶ್, ಕಾರ್ಯದರ್ಶಿಮಂಜುನಾಥ್, ಸದಸ್ಯರಾದ ನೌಷದ್, ನರಸಿಂಹಸ್ವಾಮಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು
Inheritance Tax: ಸ್ಯಾಮ್ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!
Yugadi: ವರುಷದ ಆದಿ ಯುಗಾದಿ
U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ