ನಿಯಮ ಪಾಲಿಸದವರಿಗೆ ದಂಡ: ಶಾಸಕ
Team Udayavani, Apr 27, 2021, 4:07 PM IST
ಸಕಲೇಶಪುರ: ಮಾಸ್ಕ್ ಹಾಕದವರಿಗೆ, ಸಾಮಾಜಿಕ ಅಂತರ ಕಾಪಾಡದವರಿಗೆ, ಕೋವಿಡ್ ನಿಯಮ ಉಲ್ಲಂಘಿ ಸುವವರಿಗೆಕಡ್ಡಾಯವಾಗಿ ದಂಡ ವಿಧಿಸಲು ಪುರಸಭಾಮುಖ್ಯಾಧಿಕಾರಿಗಳು ಹಾಗೂ ಪಂಚಾಯ್ತಿ ಅಭಿವೃದ್ಧಿಅಧಿಕಾರಿಗಳು ಮುಂದಾಗಬೇಕು ಎಂದು ಶಾಸಕ ಎಚ್.ಕೆ. ಕುಮಾರಸ್ವಾಮಿ ಹೇಳಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತ್ರೈಮಾಸಿಕ ಸಭೆ ಹಾಗೂ ಕೋವಿಡ್ ನಿಯಂತ್ರಣ ಸಮಿತಿ ಸಭೆಯಲ್ಲಿ ಮಾತನಾಡಿದರು.
ಅಡ್ಡಪರಿಣಾಮವಿಲ್ಲ: ತಾಲೂಕಿನಲ್ಲಿಯೂ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವುದು ಆತಂಕಕಾರಿ. ಸರ್ಕಾರದ ನಿಯಮಗಳನ್ನು ಸಾರ್ವಜನಿಕರು ಪಾಲನೆ ಮಾಡದಿರುವುದೇಕೋವಿಡ್ ಹೆಚ್ಚಳಕ್ಕೆ ಕಾರಣವಾಗಿದೆ. ಸರ್ಕಾರ ವಿಧಿಸುವ ಕೋವಿಡ್ ನಿಯಮಗಳನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸಬೇಕು. ಈ ನಿಟ್ಟಿನಲ್ಲಿ ಕಡ್ಡಾಯವಾಗಿ ಪ್ರತಿಯೋರ್ವರು ಮಾಸ್ಕ್ ಧರಿಸಬೇಕು ಹಾಗೂಮನೆಯಿಂದ ಹೊರ ಬರುವುದನ್ನು ಆದಷ್ಟು ಕಡಿಮೆಮಾಡಬೇಕು. 45 ವರ್ಷ ದಾಟಿದ ಎಲ್ಲಾ ನಾಗರಿಕರೂಮೊದಲಿಗೆ ಲಸಿಕೆ ಹಾಕಿಸಿಕೊಳ್ಳಲು ಮುಂದಾಗಬೇಕು. ಲಸಿಕೆ ಹಾಕಿಸಿಕೊಳ್ಳುವುದರಿಂದ ಯಾವುದೇ ಅಡ್ಡಪರಿಣಾಮ ಉಂಟಾಗುವುದಿಲ್ಲ ಎಂದು ಹೇಳಿದರು.
ತಾಲೂಕಿನಲ್ಲೇ ಚಿಕಿತ್ಸೆ ನೀಡಿ: ಟಿಎಚ್ಒ ಮಹೇಶ್ ಅವರಿಂದ ಕೋವಿಡ್ ಪ್ರಕರಣಗಳ ಕುರಿತು ವರದಿ ಪಡೆದ ನಂತರ ಮಾತನಾಡಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಉತ್ತಮ ಚಿಕಿತ್ಸೆ ದೊರೆಯುವುದು ಅನುಮಾನ. ಈ ಹಿನ್ನೆಲೆ ಯಾವುದೇ ಕೋವಿಡ್ ರೋಗಿಗಳನ್ನು ಜಿಲ್ಲಾಸ್ಪತ್ರೆಗೆ ಕಳುಹಿಸದೇ ತಾಲೂಕಿನಲ್ಲಿಯೇ ಚಿಕಿತ್ಸೆ ನೀಡುವಂತೆ ಸೂಚಿಸಿದರು.
ಕೋವಿಡ್ ಬಗ್ಗೆ ಜಾಗೃತಿ ಮೂಡಿಸಿ: ಇದೇ ವೇಳೆ ಶಾಸಕರು ಗ್ರಾಮ ಮಟ್ಟದ ಕೊರೊನಾ ಕಾರ್ಯಪಡೆಯ ಸಭೆಯನ್ನು ಪ್ರತಿ ವಾರ ತಪ್ಪದೇ ಮಾಡಿ ಸಾರ್ವಜನಿಕರಿಗೆ ಕೋವಿಡ್ ಬಗ್ಗೆಜಾಗೃತಿ ಮೂಡಿಸುವಂತೆ ಸೂಚಿಸಿದರು. ತಾಲೂಕು ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರೀಶ್ ಮಾತನಾಡಿ, ಗ್ರಾಪಂಗಳ ವ್ಯಾಪ್ತಿಯಲ್ಲಿ ಕೋವಿಡ್ ಹರಡದಂತೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ. ಪಟ್ಟಣಕ್ಕೆ ಸೀಮಿತಗೊಳ್ಳುತ್ತಿದ್ದ ಲಾಕ್ ಡೌನ್ ಈ ಬಾರಿ ಗ್ರಾಮಾಂತರ ಪ್ರದೇಶಗಳಲ್ಲೂ ಕಠಿಣವಾಗಿ ಜಾರಿಗೆ ತರಲಾಗಿದೆ. ಪಿಡಿಒ, ಗ್ರಾಪಂ ಸಿಬ್ಬಂದಿ ಈ ನಿಟ್ಟಿನಲ್ಲಿಬಹಳ ಶ್ರಮಿಸುತ್ತಿದ್ದಾರೆ. ಕುಡಿಯುವ ನೀರಿನ ಸಮಸ್ಯೆಕಂಡು ಬಂದಲ್ಲಿ ಅಂತಹ ಕಡೆ ತಾತ್ಕಾಲಿಕವಾಗಿ ಟ್ಯಾಂಕರ್ಮೂಲಕ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಜೈಕುಮಾರ್, ಡಿವೈಎಸ್ಪಿ ಗೋಪಿ ಮತ್ತಿತರ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಮೆಗತಿಯಲ್ಲಿ ಚತುಷ್ಪಥ ರಸ್ತೆ ಕಾಮಗಾರಿ
ಸಕಲೇಶಪುರ: ಮುಂದುವರೆದ ಕಾಡಾನೆ ಹಾಗೂ ಮಾನವ ಸಂಘರ್ಷ; ಕಾಡಾನೆ ದಾಳಿಗೆ ಅಮಾಯಕ ವೃದ್ದ ಬಲಿ
ಜನತೆಗೆ ರುಚಿಸದ ಇಂದಿರಾ ಕ್ಯಾಂಟೀನ್ ಆಹಾರ
ಸಕಲೇಶಪುರ : ಸುತ್ತಮುತ್ತ ಪ್ರದೇಶದಲ್ಲಿ ದಾಂಧಲೆ ನಡೆಸಿ ಭೀತಿ ಹುಟ್ಟಿಸಿದ್ದ ಪುಂಡಾನೆ ಸೆರೆ
ಆಲೂರು: ಪೊಲೀಸರ ದಾಳಿ; ಶೆಡ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 25 ಜಾನುವಾರುಗಳ ರಕ್ಷಣೆ
MUST WATCH
ಇಬ್ಬರು ಶಸ್ತ್ರ ಸಜ್ಜಿತ ಲಷ್ಕರ್ ಉಗ್ರರನ್ನು ಹಿಡಿದು ಕೊಟ್ಟ ಕಾಶ್ಮೀರದ ಗ್ರಾಮಸ್ಥರು
ಜಿಂಕೆಯನ್ನು ನುಂಗಿದ್ದ 80 ಕೆ.ಜಿ. ತೂಕದ 14 ಅಡಿ ಉದ್ದದ ಹೆಬ್ಬಾವು!
ವಿಟ್ಲದ ಈ ವಿದ್ಯಾರ್ಥಿನಿಯ ಕಾರ್ಯಕ್ಕೊಂದು ಮೆಚ್ಚುಗೆ ಇರಲಿ…
ಕೊಪ್ಪಳ : ರೌಡಿಶೀಟರ್ ಗಳಿಗೆ ಖಡಕ್ ವಾರ್ನಿಂಗ್ ನೀಡಿದ ಎಸ್ಪಿ
ಮದ್ರಸಾದಿಂದ ಮನೆಗೆ ಬರುತ್ತಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್…
ಹೊಸ ಸೇರ್ಪಡೆ
ಸಾರ್ಥಕ ಸೇವೆಯ ಫಲವೇ ಸಂಘದ ಮುನ್ನಡೆ: ನಿತ್ಯಾನಂದ ಕೋಟ್ಯಾನ್
ವೈದ್ಯರ ದಿನಾಚರಣೆ: ವಿಶಿಷ್ಟವಾಗಿ ಆಚರಿಸಿದ ಶಾಸ್ತ್ರೀ ಪಬ್ಲಿಕ್ ಶಾಲೆ
ಚಾರ್ಮಾಡಿ ಘಾಟ್ನಲ್ಲಿ ಮುಂದುವರೆದ ಪ್ರವಾಸಿಗರ ಪುಂಡಾಟ: ರಸ್ತೆ ಮಧ್ಯೆಯೇ ಮೋಜು ಮಸ್ತಿ
ಭಾರತದಲ್ಲಿ 24 ಗಂಟೆಯಲ್ಲಿ 16, 135 ಕೋವಿಡ್ ಸೋಂಕು ಪ್ರಕರಣ ದೃಢ; ಸಕ್ರಿಯ ಪ್ರಕರಣ ಏರಿಕೆ
ಉದಯಪುರದ ಕನ್ನಯ್ಯಲಾಲ್ ಕೊಲೆ ಖಂಡಿಸಿ ಬಳ್ಳಾರಿ ಬಂದ್