ಭೂ ಸಾಧೀನ ಪ್ರಕ್ರಿಯೆ ಚುರುಕಿಗೆ ಸಿ.ಎಸ್. ಸೂಚನೆ
Team Udayavani, Sep 27, 2019, 4:24 PM IST
ಹಾಸನ: ಜಿಲ್ಲೆಯಲ್ಲಿ ರೈಲ್ವೆ ಹಾಗೂ ರಸ್ತೆ ಕಾಮಗಾರಿಗೆ ಸಂಬಂಧಿಸಿದ ಭೂ ಸ್ವಾಧೀನ ಪ್ರಕ್ರಿಯೆಗಳನ್ನು ಶೀಘ್ರವಾಗಿಪೂರ್ಣಗೊಳಿಸ ಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಸೂಚನೆ ನೀಡಿದರು.
ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ರಸ್ತೆ ಮತ್ತು ರೈಲ್ವೆ ಯೋಜನೆಗಳ ಭೂ ಸ್ವಾಧೀನ ಪ್ರಕ್ರಿಯೆ ಪ್ರಗತಿ ಕುರಿತು ಗುರುವಾರ ವಿಡಿಯೋ ಸಂವಾದ ನಡೆಸಿದ ಅವರು, ಅಭಿವೃದ್ಧಿ ಕೆಲಸಗಳಿಗಾಗಿ ಸ್ವಾಧೀನಪಡಿಸಿಕೊಂಡಿರುವ ಜಮೀನಿಗೆ ಅ. 20 ರ ಒಳಗೆ ಹಣ ಬಿಡುಗಡೆ ಮಾಡಿ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ನಿರ್ದೇಶನ ನೀಡಿದರು. ಹಾಸನ ಜಿಲ್ಲೆಯ ರೈಲ್ವೆ ಮಾರ್ಗ ವಿಸ್ತರಣೆ ಯೋಜನೆಗಳ ಪ್ರಗತಿ ಚುರುಕಾಗಲಿ ಎಂದು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.
ಭೂಸ್ವಾಧೀನ ತ್ವರಿತವಾಗಲಿ: ವಿಡಿಯೋ ಸಂವಾದದ ನಂತರ ಜಿಲ್ಲೆಯ ಅಧಿಕಾರಿ ಗಳ ಸಭೆ ನಡೆಸಿದ ಡೀಸಿ ಗಿರೀಶ್ ಅವರು,ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ – 206 ರ ಚತುಷ್ಪಥ ರಸ್ತೆ ಕಾಮಗಾರಿಗೆ ಭೂ ಸ್ವಾಧೀನ ಪ್ರಕ್ರಿಯೆತ್ವರಿಗೊಳಗೊ ಳಿಸ ಬೇಕು ಎಂದು ನಿರ್ದೇಶನ ನೀಡಿದರು. ವಸತಿ ಯೋಜನೆಗಳಿಗೆ ಸೂಕ್ತ ಜಾಗ ಗುರ್ತಿಸುವಂತೆಯೂ ಸೂಚಿಸಿದರು.
ಎಡೀಸಿ ನಾಗರಾಜ್ ಮಾತನಾಡಿ, ಸಾಮಾಜಿಕ ಭದ್ರತಾ ಯೋಜನೆಗಳ ಫಲಾನುಭವಿಗಳು ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಿಸಬೇಕು ಎಂದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿವರಾಂ ಬಾಬು, ಉಪವಿಭಾಗಾಧಿಕಾರಿ ಕವಿತಾ ರಾಜಾರಾಂ, ಅರಕಲಗೂಡು ತಹಶೀಲ್ದಾರ್ ಶಿವರಾಜ್, ಭೂ ಸ್ವಾಧೀನಾಧಿಕಾರಿ ಶ್ರೀನಿವಾಸಗೌಡ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಗದೀಶ್, ಪೌರಾಯುಕ್ತ ಕೃಷ್ಣಮೂರ್ತಿ ಹಾಜರಿದ್ದರು.