ಡೇರಿ ಚುನಾವಣೆ: ಚುನಾವಣಾಧಿಕಾರಿಯೇ ಗೈರು


Team Udayavani, May 23, 2022, 5:05 PM IST

ಡೇರಿ ಚುನಾವಣೆ: ಚುನಾವಣಾಧಿಕಾರಿಯೇ ಗೈರು

ಚನ್ನರಾಯಪಟ್ಟಣ: ಚುನಾವಣೆ ಘೋಷಣೆ ಮಾಡಿ ಹಾಗೂ ಚಿಹ್ನೆಯನ್ನು ಸಹ ಅಭ್ಯರ್ಥಿಗಳಿಗೆ ನೀಡಿ ಚುನಾವಣೆ ಮಾಡಲು ಚುನಾವಣಾಧಿಕಾರಿ ಸುನಿಲ್‌ ಸ್ಥಳಕ್ಕೆ ಆಗಮಿಸಿಲ್ಲ ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಜತ್ತೇನಹಳ್ಳಿ ರಾಮಚಂದ್ರ ಆರೋಪಿಸಿದ್ದಾರೆ.

ಅವರು ತಾಲೂಕಿನ ನುಗ್ಗೇಹಳ್ಳಿ ಹೋಬಳಿ ಹೆಬ್ಬಳಲು ಹಾಲು ಉತ್ಪಾದಕರ ಮಹಿಳಾ ಸಹ ಕಾರ ಸಂಘದ ಚುನಾವಣೆ ಮೇ 22ರಂದು 9 ಗಂಟೆಗೆ ಘೋಷಣೆ ಮಾಡಲಾಗಿದೆ. ಆದರೆ 11ಗಂಟೆಯಾ ದರೂ ಚುನಾವಣಾಧಿಕಾರಿ ಸ್ಥಳಕ್ಕೆ ಆಗಮಿಸಿಲ್ಲ. ಒಟ್ಟು 18 ಜನ ಅಭ್ಯರ್ಥಿ ಒಳಗೊಂಡಂತೆ ಚುನಾ ವಣೆ ನಡೆಸಲಾಗುತ್ತಿದ್ದು, ಇದರಲ್ಲಿ ಎಲ್ಲ ಅಭ್ಯರ್ಥಿ ಗಳು ತಮ್ಮ ತಮ್ಮ ಪರ ಮತದಾರರ ಬಳಿ ಮತಯಾ ಚನೆ ಮಾಡಿದ್ದಾರೆ. ಆದರೆ ಇದರ ಹಿಂದೆ ಸ್ಥಳೀಯ ಶಾಸಕರ ಕೈವಾಡವಿದೆ ಎಂದು ಆರೋಪಿಸಿದರು.

ರಾಜಕೀಯ ದುರುದ್ದೇಶವಿದೆ: ಈ ಗ್ರಾಮದಲ್ಲಿ ಈಗಾಗಲೇ ಡೇರಿ ಕಾರ್ಯದರ್ಶಿಯವರ ಪತಿ ಚುನಾವಣಾ ವಿಚಾರಕ್ಕಾಗಿಯೇ ತಲೆ ಕೆಡಿಸಿಕೊಂಡು ಸಾವನಪ್ಪಿದ್ದಾನೆ. ಆದರೂ ಸಹ ಚುನಾವಣಾಧಿಕಾರಿ ಗಳು ರಾಜಕೀಯದ ದುರುದ್ದೇಶವಿಟ್ಟುಕೊಂಡು ಚುನಾವಣಾ ಸ್ಥಳಕ್ಕೆ ಆಗಮಿಸಿಲ್ಲ. ಕೂಡಲೇ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು.

ಗೊಂದಲ ಸೃಷ್ಟಿಯಾಗಿದೆ: ಇದೇ ವೇಳೆ ಡೇರಿ ಕಾರ್ಯದರ್ಶಿ ಮೇಘನಾ ಮಾತನಾಡಿ, ಚುನಾ ವಣೆ ಮಾಡಲು ಈಗಾಗಲೇ ಚುವಣಾಧಿಕಾರಿಗಳಿಗೆ ತಿಳಿಸಿದೆ ಆದರೆ, ಚುನಾವಣಾಧಿಕಾರಿಗಳು ದಿನಾಂಕ ನಿಗಧಿ ಮಾಡಿ ಭಾನುವಾರ ಚುನಾವಣೆ ನಡೆಸಲು ಸೂಚಿಸಿತ್ತು. ನಮ್ಮ ಮನೆಯಲ್ಲಿ ಸೂತಕದ ಛಾಯೆ ಇದ್ದರೂ ಸಹ ನಾನು ಚುನಾವಣೆ ಮಾಡಲು ಸಿದ್ಧನಿ ದ್ದೇನೆ. ನನ್ನ ಗಂಡ ಮರಣ ಹೊಂದಿದ ಹಿನ್ನೆಲೆ ನನ್ನ ಗಂಡನ ಆಸೆಯಂತೆ ಚುನಾವಣೆ ಮಾಡುವುದು ಸೂಕ್ತವಾಗಿದೆ. ಆದರೆ, ಚುನಾವಣಾಧಿಕಾರಿಯೂ ಸ್ಥಳಕ್ಕೆ ಆಗಮಿಸಿಲ್ಲ. ಹಾಗೂ ಡೇರಿ ಸದಸ್ಯರುಗಳು ಚುನಾವಣೆಯೂ ನಡೆಯದೇ ಗೊಂದಲ ಸೃಷ್ಟಿಯಾಗಿದೆ ಎಂದರು.

ಅಧಿಕಾರಿಯನ್ನು ವಜಾ ಮಾಡಿ: ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಅರಳಾಪುರ ಮಂಜೇಗೌಡ ಮಾತನಾಡಿ, ತಾಲೂಕಿನಲ್ಲಿ ಸಹಕಾರಿ ಸಂಘಗಳಲ್ಲಿ ಚುನಾವಣೆ ಪ್ರತಿಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ. ತಾಲೂಕು ಸಹಕಾರಿ ಅಭಿವೃದ್ಧಿ ಅಧಿಕಾರಿ ಇಂತಹ ಅನೇಕ ಸಂಘ ಸಂಸ್ಥೆಗಳ ಚುನಾವಣೆಯಲ್ಲಿ ಬಹ ಳಷ್ಟು ಲೋಪದೋಷಗಳನ್ನು ಮಾಡಿದ್ದಾರೆ. ಆದರೂ ಕೂಡ ಇಂತಹ ಅಧಿಕಾರಿಯನ್ನು ಇಟ್ಟು ಕೊಂಡಿರುವುದು ಅಪರಾಧ. ಇದಕ್ಕೆ ಸಂಬಂಧಪಟ್ಟ ಜಿಲ್ಲಾ ಸಂಘ ಸಂಸ್ಥೆಯ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳು ಇಂತಹ ಬೇಜವಾಬ್ದಾರಿ ಅಧಿ ಕಾರಿಯನ್ನು ಕೂಡಲೇ ಕೆಲಸದಿಂದ ವಜಾ ಮಾಡ ಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲಾಧಕಾರಿಗಳ ಕಚೇರಿ ಮುಂದೆ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಇದೇ ವೇಳೆ ರಾಜ್ಯ ರೈತ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ನಾಗರತ್ನಮ್ಮ, ತಾಲೂಕು ಅಧ್ಯಕ್ಷೆ ಕಾಂತಮ್ಮ, ಉಪಾಧ್ಯಕ್ಷ ಸ್ವಾಮೀಗೌಡ, ತಾಲೂಕು ಅಧ್ಯಕ್ಷ ಶಿವರಾಂ, ಜಿಲ್ಲಾ ಗೌರವಾಧ್ಯಕ್ಷ ಪ್ರಕಾಶ್‌, ಡೇರಿ ಚುನಾವಣಾ ಅಭ್ಯರ್ಥಿಗಳಾದ ಸೌಮ್ಯ, ರಾಧ, ಯಶೋದಮ್ಮ, ಶೋಭ, ರೇಣುಕಮ್ಮ, ಸಾವಿತ್ರಮ್ಮ, ತಿಮ್ಮಮ್ಮ, ಕಮಲಮ್ಮ, ಗಾಯಿತ್ರಿ ಇನ್ನು ಮುಂತಾದ ಅಭ್ಯರ್ಥಿಗಳು ಸ್ಥಳದಲ್ಲಿ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.