ಪ್ರಸಿದ್ಧ ದ್ವಾರಸಮುದ್ರ ಕೆರೆ ಏರಿ ಮಧ್ಯದಲ್ಲೇ ಬಿರುಕು


Team Udayavani, Nov 23, 2020, 6:50 PM IST

hsn-tdy-1

ಹಳೇಬೀಡು: ಹೋಬಳಿ ಕೇಂದ್ರದಲ್ಲಿನ ಪ್ರಸಿದ್ಧ ದ್ವಾರಸಮುದ್ರ ಕೆರೆ ಏರಿ ದುರಸ್ತಿ ಕಾರ್ಯ ನಡೆಯುತ್ತಿರುವಾಗಲೇ ಹಲವು ಕಡೆ ಬಿರುಕು ಕಾಣಿಸಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ.

ಸಾವಿರಾರು ಹೆಕ್ಟೇರ್‌ ಪ್ರದೇಶದಲ್ಲಿರುವ ದ್ವಾರಸಮುದ್ರ ಕೆರೆ 12 ವರ್ಷಗಳ ನಂತರಭರ್ತಿಯಾಗಿದ್ದು, ಹಳೇಬೀಡು, ಮಾದಿಹಳ್ಳಿ, ಜಾವಗಲ್‌ ಹೋಬಳಿಗಳ ರೈತರ ಸಂತೋಷಕ್ಕೆ ಕಾರಣವಾಗಿತ್ತು. ಇದೇ ಸಮಯದಲ್ಲಿ ನೀರಿನ ಶೇಖರಣಾ ಸಾಮರ್ಥ್ಯಹೆಚ್ಚಾಗಿ ಕೆರೆಏರಿ ಕುಸಿದಿದ್ದು ಆತಂಕ ತರಿಸಿದೆ.

ಕೆರೆ ಏರಿ ಒಡೆಯುವ ಭೀತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ತಜ್ಞರ ಅಭಿಪ್ರಾಯದಂತೆ ಕೆರೆ ನೀರನ್ನು ಎರಡರಿಂದಮೂರು ಅಡಿ ಹೊರಬಿಡಲು ಸೂಚಿಸಿದ್ದರು. ಅದರಂತೆ, ಏರಿ ಮೇಲೆ ಹಾದು ಹೋಗಿರುವ ಹಾಸನ -ಹಳೇಬೀಡು ರಸ್ತೆ ಬಂದ್‌ ಮಾಡಿ, ಕೆರೆ ಕೋಡಿ ಸ್ವಲ್ಪ ಹೊಡೆದು, ಪಕ್ಕದ ಬೆಳವಾಡಿ ಕೆರೆಗೆ ನೀರು ಹರಿದು ಬಿಡಲಾಗಿತ್ತು. ಇದೀಗ ಏರಿ ತಾತ್ಕಾಲಿಕ ದುರಸ್ತಿ ಕಾರ್ಯ ಮುಗಿರುವ ಹಂತಕ್ಕೆ ಬಂದಿದ್ದು, ಇದೇ ಸಂದರ್ಭದಲ್ಲಿ ಏರಿ ಮಧ್ಯದಲ್ಲಿಯೇ ಬಿರುಕು ಕಾಣಿಸಿಕೊಂಡಿರುವುದು ಅಧಿಕಾರಗಳಿಗೆ ತಲೆನೋವು ತರಿಸಿದೆ.

5 ಮೀಟರ್‌ ಉದ್ದದ ಬಿರುಕು: ಒಂದು ಕಡೆ 20 ಮೀಟರ್‌ವರೆಗೆ ಏರಿ ಕುಸಿಯುತ್ತಿದ್ದರೆ ಮತ್ತೆ ಎರಡು ಕಡೆ ಏರಿ ಮಧ್ಯದಲ್ಲಿಯೇ ಬಿರುಕು ಕಾಣಿಸಿಕೊಂಡಿದೆ. ಇದುವರೆಗೂ ರಸ್ತೆ ಒಂದು ಮಗ್ಗುಲಿನಲ್ಲಿ ಮಾತ್ರ ಕೆರೆ ಏರಿ ಕುಸಿದಿತ್ತು. ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ದುರಸ್ತಿ ಕಾರ್ಯ ಮಾಡಿ ಕುಸಿಯುತ್ತಿರುವುದನ್ನು ತಡೆಯುವ ಕಾರ್ಯ ಮಾಡಿದ್ದರು. ಆದರೆ, ಈಗ ಕೆರೆ ಏರಿ ರಸ್ತೆ ಅಡ್ಡವಾಗಿ ಬಿರುಕು ಕಾಣಿಸಿಕೊಂಡಿರುವುದು ಹೋಬಳಿಯ ಜನರ ನಿದ್ದೆಗೆಡಿಸಿದೆ.

ಶಾಶ್ವತ ಕಾಮಗಾರಿ ಅಸಾಧ್ಯ: ಸಣ್ಣ ನೀರಾವರಿಇಲಾಖೆಯ ಅಧಿಕಾರಿಗಳ ಮಾಹಿತಿ ಪ್ರಕಾರ 1 ಟಿಎಂಸಿ ನೀರು ಶೇಖರಣೆ ಮಾಡುವ ಸಾಮರ್ಥ್ಯ ದ್ವಾರಸಮುದ್ರ ಕೆರೆ ಹೊಂದಿದೆ. ಕೆರೆ ಏರಿ ದುರಸ್ತಿ ಮಾಡುವ ಸಂಬಂಧ ಸ್ಥಳಕ್ಕೆ ನೀರಾವರಿ ಇಲಾಖೆಯ ಕಾರ್ಯಪಾಲಕ ಮುಖ್ಯ ಎಂಜಿನಿಯರ್‌ ಸತೀಶ್‌, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ರಾಮಕೃಷ್ಣ, ಬೆಂಗಳೂರು ಡಿಸೈನ್‌ ಎಂಜಿನಿಯರ್‌ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಕೆರೆಏರಿಯಲ್ಲಿ ಮತ್ತೆ ಎರಡು ಕಡೆ ಬಿರುಕು ಕಾಣಿಸಿಕೊಂಡಿರುವುದನ್ನು ಖುದ್ದು ವೀಕ್ಷಣೆ ಮಾಡಿ,ಮತ್ತೆ ಎರಡು ಅಡಿಗಳಷ್ಟು ನೀರು ಕಡಿಮೆಮಾಡಲು ಸೂಚನೆ ನೀಡಿದೆ. ಅದರಂತೆ ನೀರುಹೊರಬಿಟ್ಟಿದ್ದು, ಶಾಶ್ವತ ಕಾಮಗಾರಿ ಮಾಡಲು ಕೆರೆ ನೀರು ಖಾಲಿ ಮಾಡಬೇಕಿದೆ ಎಂದು ಅಭಿಪ್ರಾಯಪಟ್ಟಿದೆ.

ಕೆರೆ ಏರಿಯಲ್ಲಿ ಮತ್ತೆ ಬಿರುಕುಕಾಣಿಸಿಕೊಳ್ಳತ್ತಿರುವುದು ನೋವಿನ ಸಂಗತಿ.ಕೋಡಿ ಸ್ವಲ್ಪ ಹೊಡೆದಿರುವುದೇಸಹಿಸಲಾಗುತ್ತಿಲ್ಲ. ಹೀಗಿರುವಾಗ ಮತ್ತೆರಡುಕಡೆ ಬಿರುಕುಕಾಣಿಸಿ ಕೊಂಡಿದೆ. ಮುಖ್ಯ ಎಂಜಿನಿಯರ್‌ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆನಡೆಸಿದೆ. ಅವರಿಂದ ಮಾಹಿತಿ ಕೂಡಪಡೆದಿದ್ದೇನೆ.ಕೆರೆ ನೀರು ಉಳಿಸಿಕೊಂಡು ಸಾಧ್ಯವಾದಷ್ಟುಕಾಮಗಾರಿ ಮಾಡಲು ತಿಳಿಸಿದ್ದೇನೆ. ಕೆ.ಎಸ್‌.ಲಿಂಗೇಶ್‌, ಶಾಸಕ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.