ಕೋವಿಡ್ 19 ವಾರಿಯರ್ಸ್ಗೆ ರಕ್ಷಣೆ ನೀಡಿ
Team Udayavani, May 15, 2020, 7:36 AM IST
ಅರಸೀಕೆರೆ: ಕೋವಿಡ್ 19 ಸೋಂಕು ನಿಯಂತ್ರಣ ಕ್ಕಾಗಿ ಶ್ರಮಿಸುತ್ತಿರುವ ವಿವಿಧ ಇಲಾಖೆಗಳ ಕಾಯಂ ಹಾಗೂ ದಿನಗೂಲಿ ನೌಕರರರಿಗೆ (ಕೋವಿಡ್ 19 ವಾರಿಯರ್ಸ್ ) ಸೂಕ್ತ ರಕ್ಷಣೆ ಹಾಗೂ ವಿವಿಧ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ಸಿಐಟಿಯು ಕಾರ್ಮಿಕ ಸಂಘಟನೆ ಅಧ್ಯಕ್ಷರು ತಹಶೀಲ್ದಾರ್ ಸಂತೋಷ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿಐಟಿಯು ಸಂಘಟನೆ ಅಧ್ಯಕ್ಷೆ ಜ್ಯೋತಿ, ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಕಾರ್ಮಿಕ ಸಂಘಟನೆ ಕೆರೆಯ ಮೇರೆಗೆ ಮೇ 14 ರಂದು ಬೇಡಿಕೆ ದಿನವನ್ನಾಗಿ ಆಚರಿಸುತ್ತಿದ್ದು, ಕೋವಿಡ್ 19 ನಿಯಂತ್ರಣಕ್ಕಾಗಿ ವಿವಿಧ ಇಲಾಖೆಗಳ ಕಾಯಂ ನೌಕರರು ಮತ್ತು ದಿನಗೂಲಿ ನೌಕರರು ಗುತ್ತಿಗೆ ಆಧಾರಿತ ನೌಕರರು ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ.
ಅವರಿಗೆ ಸೂಕ್ತ ಪಿಪಿಐ ಕಿಟ್ ರಕ್ಷಣೆಗಾಗಿ ನೀಡಬೇಕು. ಕುಟುಂಬದ ಸದಸ್ಯರನ್ನು ಒಳಗೊಂಡಂತೆ 50 ಲಕ್ಷದ ಮಿಮೆ ಸೌಲಭ್ಯ ಕಲ್ಪಿಸಬೇಕು. ಸೋಂಕಿತ ನೌಕರರಿಗೆ 5 ಲಕ್ಷ ರೂ. ಪರಿಹಾರ ನೀಡಬೇಕು ಅಲ್ಲದೇ ಪ್ರತಿ ತಿಂಗಳು ಹೆಚ್ಚುವರಿ ವೇತನವನ್ನು ಸರ್ಕಾರ ಪಾವತಿಸಬೇಕು. ಬಿಸಿಯೂಟದ ನೌಕರರಿಗೆ ನಿಲ್ಲಿಸಿರುವ 3 ತಿಂಗಳ ವೇತನವನ್ನು ಸರ್ಕಾರ ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ತಾವುಗಳು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುತ್ತಿದ್ದೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲೂಕು ಬಿಸಿಯೂಟ ನೌಕರರು ಸೇರಿದಂತೆ ಸಿಐಟಿಯು ಕಾರ್ಮಿಕ ಸಂಘಟನೆಯ ನೌಕರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್ಡಿಡಿ
Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ
Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್ಗೆ ಲಾಭ?
Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್ ರೇವಣ್ಣ ಪ್ರಚಾರಕ್ಕೆ ಚಾಲನೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ