ತಾಲೂಕಿನ ಎಳನೀರಿಗೆ ಹೊರ ರಾಜ್ಯದಲ್ಲೂ ಬೇಡಿಕೆ


Team Udayavani, May 10, 2022, 5:55 PM IST

ತಾಲೂಕಿನ ಎಳನೀರಿಗೆ ಹೊರ ರಾಜ್ಯದಲ್ಲೂ ಬೇಡಿಕೆ

ಚನ್ನರಾಯಪಟ್ಟಣ: ಬಂಗಾಳಕೊಲ್ಲಿಯಲ್ಲಿ ವಾಯು ಭಾರ ಕುಸಿತ ಉಂಟಾಗಿ ನಿತ್ಯವೂ ಮಳೆ ಬೀಳುತ್ತಿದ್ದರೂ, ಬಿಸಿಲ ತಾಪ ಕಡಿಮೆಯಾಗಿಲ್ಲ. ದಿನೇ ದಿನೆ ಧಗೆ ಹೆಚ್ಚುತ್ತಿದ್ದು, ಜನಸಾಮಾನ್ಯರು ತಂಪು ಪಾನೀ ಯಕ್ಕೆ ಮೊರೆ ಹೋಗುವುದು ಸಹಜ. ಇದರಿಂದ ತಾಲೂಕಿನ ಎಳನೀರಿಗೆ ಎಲ್ಲಿಲ್ಲದ ಬೇಡಿಕೆ ಕಂಡು ಬಂದಿದ್ದು, ಹೊರ ಜಿಲ್ಲೆ ಹಾಗೂ ರಾಜ್ಯಕ್ಕೆ ರಫ್ತು ಮಾಡಲಾಗುತ್ತಿದೆ.

ರಾಜ್ಯದ ಮೈಸೂರು, ಹುಬ್ಬಳ್ಳಿ, ಬಳ್ಳಾರಿ, ಕಲಬುರಗಿ, ಬೆಂಗಳೂರು ಮಾತ್ರವಲ್ಲದೆ, ದೇಶದ ರಾಜ್ಯಧಾನಿ ನವದೆಹಲಿ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ, ಉತ್ತರ ಪ್ರದೇಶ, ಹರಿಯಾಣ ಹಾಗೂ ಗೋವಾ ರಾಜ್ಯಕ್ಕೆ ಚನ್ನರಾಯಪಟ್ಟಣದ ಎಳನೀರು ರಫ್ತಾಗುತ್ತಿದೆ.

ಮಳೆ ನಡುವೆಯೂ ಬಿಸಿಲ ಝಳ: ಬಡವರ ಊಟಿ ಎಂದೇ ಖ್ಯಾತಿ ಪಡೆದಿರುವ ಹಾಸನ ಜಿಲ್ಲೆಯಲ್ಲಿ ರಾತ್ರಿ ಮಳೆ ಬರುತ್ತಿದೆ, ತಂಪನೆ ವಾತಾವರಣ ಇರುತ್ತದೆ. ಆದರೆ, ಮಧ್ಯಾಹ್ನ 38 ಡಿಗ್ರಿಗೂ ಹೆಚ್ಚಿನ ತಾಪಮಾನ ಇರುವುದರಿಂದ ಜಿಲ್ಲೆಯಲ್ಲಿ ತಾಲೂಕಿನ ಎಳನೀರಿಗೆ ಬಹಳ ಬೇಡಿಕೆ ಇದೆ. ತಾಲೂಕು ಅರೆಮಲೆನಾಡು ಪ್ರದೇಶ ಆಗಿರುವುದರಿಂದ ಎಳನೀರು ಕುಡಿಯಲು ತುಂಬಾ ಸಹಿಯಾಗಿದ್ದು, ದಣಿವಾರುಸುವಲ್ಲಿ ನೈಸರ್ಗಿಕ ಪಾನೀಯದಲ್ಲಿ ಮೊದಲನೇ ಸ್ಥಾನದಲ್ಲಿದೆ.

ವೃದ್ಧಿಯಾಗಿದೆ ಅಂತರ್ಜಲ: ಕಳೆದ ವರ್ಷ ಉತ್ತಮ ಮಳೆಯಾಗಿದ್ದು, ಸಾಕಷ್ಟು ಕೆರೆಗಳು ಭರ್ತಿಯಾದವು. ಇನ್ನು ಏತನೀರಾವರಿ ಯೋಜನೆ ಮೂಲಕ ನೂರಾರು ಕೆರೆಗೆ ನೀರು ಹರಿಸಲಾಗಿದ್ದು, ಅಂತರ್ಜಲ ವೃದ್ಧಿಯಾಗಿದೆ. ಕೊಳವೆ ಬಾವಿಯಲ್ಲಿ ನೀರು ಸಾಕಷ್ಟು ಇರುವುದರಿಂದ ರೈತರು ತೆಂಗಿನ ತೋಟಕ್ಕೆ ನೀರು ಹರಿಸುತ್ತಿದ್ದಾರೆ. ಇದರಿಂದ ಉತ್ತಮ ಫ‌ಸಲು ಬರುತ್ತಿದೆ. ಸಾಕಷ್ಟು ರೈತರು ಎಳನೀರು ಮಾರಾಟ ಮಾಡಲು ಮುಂದಾಗಿದ್ದಾರೆ.

ಮಳೆ ಬರುತ್ತಿದ್ದರೂ ಬೇಸಿಗೆ ರೀತಿಯಲ್ಲಿ ಬಿಸಿಲ ಧಗೆ ಇರುವುದರಿಂದ ಮಹಾನಗರದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಎಳನೀರು ಮೊರೆ ಹೋಗುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಎಳನೀರಿಗೆ ಉತ್ತಮ ಬೆಲೆಯಿದೆ. ಚನ್ನರಾಯಪಟ್ಟಣ ಹಾಗೂ ಅರಸೀಕೆರೆ ತಾಲೂಕಿನ ಎಳನೀರು ವ್ಯಾಪಾರ ಮಾಡಿ ಹೊರ ಜಿಲ್ಲೆ, ರಾಜ್ಯಕ್ಕೆ ರಫ್ತು ಮಾಡಲಾಗುತ್ತಿದೆ. -ರಾಮಸ್ವಾಮಿ, ಎಳನೀರು ವರ್ತಕ

ತಾಲೂಕಿನ ದಂಡಿಗನಹಳ್ಳಿ, ಹಿರೀಸಾವೆ, ಬಾಗೂರು, ನುಗ್ಗೆಹಳ್ಳಿ ಹೋಬಳಿಯ ರೈತರು ಕೊಳವೆ ಬಾವಿ ಆಶ್ರಯದಿಂದ ತೆಂಗಿನ ತೋಟ ನಿರ್ವಹಣೆ ಮಾಡುತ್ತಿದ್ದಾರೆ. ಇಂತಹ ಭೂಮಿಯಲ್ಲಿನ ಎಳನೀರಿಗೆ ಬಹಳ ಬೇಡಿಕೆ, ಹೇಮಾವತಿ ನಾಲೆ ನೀರಿನಿಂದ ತೋಟ ನಿರ್ವಹಣೆ ಮಾಡುತ್ತಿರುವ ಕಸಬಾ, ಶ್ರವಣಬೆಳಗೊಳ ಹೋಬಳಿ ಎಳನೀರು ನೋಡಲು ದಪ್ಪದಾಗಿದ್ದು, ನೀರು ಹೆಚ್ಚಿರುತ್ತದೆ. ಆದರೆ, ನೀರು ಸಪ್ಪೆಯಾಗಿದ್ದು, ಕುಡಿಯಲು ಅಷ್ಟು ರುಚಿಸುವುದಿಲ್ಲ. – ಗಿಡ್ಡೇಗೌಡ, ಸ್ಥಳೀಯ ಎಳನೀರು ಮಾರಾಟಗಾರ

-ಶಾಮಸುಂದರ್‌ ಕೆ.ಅಣ್ಣೇನಹಳ್ಳಿ

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.