ಕುಟುಂಬವೇ ದೇವೇಗೌಡರ ಸೋಲಿಗೆ ಕಾರಣ: ಪುಟ್ಟೇಗೌಡ


Team Udayavani, Sep 14, 2019, 3:00 AM IST

kutumbave

ಚನ್ನರಾಯಪಟ್ಟಣ: ಯಕಶ್ಚಿತ್‌ ಒಂದು ಎಂಪಿ ಸ್ಥಾನಕ್ಕಾಗಿ ದೇವೇಗೌಡರನ್ನು ಹಾಸನ ಜಿಲ್ಲೆಯಿಂದ ಹೊರಕ್ಕೆ ಕಳುಹಿಸಿದ ಅವರ ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳು ರಾಜಕಾರಣದ ಸಂಧ್ಯಾಕಾಲದಲ್ಲಿ ದೇವೇಗೌಡರು ಎಂಪಿ ಆಗುವುದನ್ನೂ ತಡೆದರು ಎಂದು ಕಾಂಗ್ರೆಸ್‌ ಮುಖಂಡ, ಮಾಜಿ ಶಾಸಕ ಸಿ.ಎಸ್‌.ಪುಟ್ಟೇಗೌಡ ಆರೋಪಿಸಿದರು. ಪಟ್ಟಣದಲ್ಲಿ ಕಾಂಗ್ರೆಸ್‌ ವತಿಯಿಂದ ತಾಲೂಕು ಆಡಳಿತದ ವಿರುದ್ಧ ನಡೆದ ಪ್ರತಿಭಟನಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು.

ದೇವೇಗೌಡರು 2000 ಇಸವಿವರೆಗೆ ಮಾಡಿದಂತಹ ರಾಜಕಾರಣ ಈಗಿಲ್ಲ. ಅವರ ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳೇ ದೇವೇಗೌಡರು ಹಾಸನ ಲೋಕಸಭಾ ಕ್ಷೇತ್ರ ಬಿಟ್ಟು ತುಮಕೂರು ಕ್ಷೇತ್ರಕ್ಕೆ ಹೋಗುವ ಪರಿಸ್ಥಿತಿ ನಿರ್ಮಾಣ ಮಾಡಿ ಸೋಲಿಗೆ ಕಾರಣವಾಗಿದ್ದು ಅವರ ಕುಟುಂಬದವರೇ ಎಂದು ದೂರಿದರು.

ತಾಲೂಕಿನಲ್ಲಿ 40 ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಐದು ಸಂಘಗಳನ್ನು ಹೊರತು ಪಡಿಸಿ ಉಳಿದ ಸಂಘಗಳಲ್ಲಿ ಕೋಟ್ಯಾಂತರ ರೂ. ಅವ್ಯವಹಾರ ನಡೆದಿದೆ. ಸರ್ಕಾರ ರೈತರ ಬೆಳೆ ಸಾಲಮನ್ನಾ ಮಾಡಿದರೆ ಸಹಕಾರ ಸಂಘದ ಅಧಿಕಾರಿಗಳು ನೂರಾರು ಕೋಟಿ ರೂ.ಭ್ರಷ್ಟಾಚಾರ ನಡೆಸಿದ್ದು ಸಮಗ್ರ ತನಿಖೆಯಾದರೆ ಜನಪ್ರತಿನಿಧಿಗಳು ಜೈಲುಪಾಲಾಗಲಿದ್ದಾರೆಂದರು.

ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ 800 ಕೋಟಿ ರೂ. ಆಸ್ತಿ ಹೊಂದಿದ್ದಾರೆ ಎಂಬ ಕೇಂದ್ರದ ಬಿಜೆಪಿ ಸರ್ಕಾರ ತಮ್ಮ ಇಲಾಖೆಗಳ ಮೂಲಕ ತನಿಖೆ ಮಾಡಿಸುತ್ತಿದ್ದು ಇದನ್ನು ಕೂಡಲೇ ಕೈ ಬಿಡಬೇಕು. ಬದಲಾಗಿ ರಾಜ್ಯದಲ್ಲಿ ರೈತರ ಸಾಲಮನ್ನಾ ಅವ್ಯವಹಾರ ಬಯಲಿಗೆ ಎಳೆಯಲು ಮುಂದಾಗಬೇಕು. ಇನ್ನು ಬಿಎಸ್‌ವೈ ರೈತಪರ ಮುಖ್ಯ ಮಂತ್ರಿ ಆಗಿದ್ದರೆ ಹಾಸನ ಜಿಲ್ಲಾ ಸಹಕಾರ ಬ್ಯಾಂಕ್‌ನಲ್ಲಿ ನಡೆದಿರುವ ಅವ್ಯವಹಾರಗಳನ್ನು ಬಯಲಿಗೆ ಎಳೆದು ರೈತರಿಗೆ ನ್ಯಾಯ ನೀಡಬೇಕೆಂದರು.

ಜಿಲ್ಲೆಯಲ್ಲಿ ಒಂದು ಕುಟುಂಬಕ್ಕೆ ಅಧಿಕಾರ ಸೀಮಿತವಾಗಿದೆ. ತಮ್ಮ ಮನೆ ಅಡಿಯಾಳುಗಳಿಗೆ ವಿಧಾನಸಭಾ ಅಭ್ಯರ್ಥಿ ಮಾಡುತ್ತಾರೆ. ಜೆಡಿಎಸ್‌ ಒಂದು ಕುಟುಂಬದ ಆಸ್ತಿಯಾಗಿದ್ದು ಅಲ್ಲಿನ ಶಾಸಕರು ಉಸಿರುಕಟ್ಟುವ ಸ್ಥಿತಿಯಲ್ಲಿದ್ದಾರೆಂದರು. ಕೆಆರ್‌ಪೇಟೆ ಶಾಸಕ ನಾರಾಯಣಗೌಡ, ದೇವೇಗೌಡರು ಹಲವು ಮುಖಂಡರನ್ನು ಮುಗಿಸಲು ಮುಂದಾದರು. ಆದರೆ ಇಂದು ಅವರ ಮೊಮ್ಮಕ್ಕಳೇ ಅವರನ್ನು ರಾಜಕೀಯವಾಗಿ ಮುಗಿಸಿದ್ದಾರೆ ಎಂದರು.

ಹೇಮಾವತಿ ಎಡದಂಡೆ ನಾಲೆ ಆಧುನೀಕರಣದಲ್ಲಿ ಪ್ಯಾಕೇಜ್‌ ಮಾಡಿ ಸಾವಿರಾರು ಕೋಟಿ ರೂ. ದೇವೇಗೌಡರ ಮನೆ ಸೇರಿದೆ. ನಮ್ಮ ತಾಲೂಕಿನ ಜನರ ಬಗ್ಗೆ ಕಾಳಜಿ ಇಲ್ಲದೆ ಮಂಡ್ಯ, ತುಮಕೂರು ಜನರಿಗಾಗಿ ನಾಲೆ ಆಧುನೀಕರಣ ಮಾಡಿಸಿ ನೀರು ಹರಿಸುತ್ತಿದ್ದಾರೆ. ಇನ್ನು ವಿವಿಧ ಏತ ನೀರಾವರಿ ಯೋಜನೆಗೆ ಪ್ರತಿ ವರ್ಷ ನೂರಾರು ಕೋಟಿ ರೂ.ಬಿಡುಗಡೆಯಾಗುತ್ತಿದೆ. ಈ ಹಣ ಎಲ್ಲಿ ಹೋಗುತ್ತಿದೆ ಎನ್ನುವುದು ತಿಳಿಯುತ್ತಿಲ್ಲ. ಆದರೂ, ಎರಡು ದಶಕದಿಂದ ಏತ ನೀರಾವರಿ ಕಾಮಗಾರಿಗಳು ಮುಕ್ತಾಯವಾಗುತ್ತಿಲ್ಲ ಎಂದು ಟೀಕಿಡಿದರು.

ಸಕ್ಕರೆ ಕಾರ್ಖಾನೆ 6 ತಿಂಗಳಲ್ಲಿ ಪ್ರಾರಂಭಿಸಿದರೆ ಸನ್ಮಾನ: ವಿಧಾನ ಪರಿಷತ್‌ ಸದಸ್ಯ ಎಂ.ಎ.ಗೋಪಾಲಸ್ವಾಮಿ ಮಾತನಾಡಿ, ಕಳೆದ 3-4 ವರ್ಷದಿಂದ ಆರು ತಿಂಗಳಲ್ಲಿ ಸಕ್ಕರೆ ಕಾರ್ಖಾನೆ ಪ್ರಾರಂಭ ಆಗಲಿದೆ ಎಂದು ಪೊಳ್ಳು ಭರವಸೆ ನೀಡುವ ಶಾಸಕ ಸಿ.ಎನ್‌.ಬಾಲಕೃಷ್ಣ ಆರು ತಿಂಗಳಲ್ಲಿ ಕಾರ್ಖಾನೆ ಪ್ರಾರಂಭಿಸಿದರೆ ಕಾಂಗ್ರೆಸ್‌ ವತಿಯಿಂದ ಸನ್ಮಾನ ಮಾಡಲಾಗುವುದು. ಜಿಲ್ಲಾ ಸಹಕಾರ ಬ್ಯಾಂಕ್‌ ನಿರ್ದೇಶಕರಾಗಿರುವ ತಮ್ಮ ಕ್ಷೇತ್ರದಲ್ಲಿ ಹೆಚ್ಚು ಅವ್ಯವಹಾರ ನಡೆದಿದೆ ಎಂದು ಆರೋಪಿಸಿದರು.

ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರನ್ನು ವಿರೋಧಿಸುವ ವ್ಯಕ್ತಿಗಳಿಲ್ಲ ಎಂದು ತಾಲೂಕಿನ ಪ್ರತಿ ಇಲಾಖೆಯಲ್ಲಿ ಭ್ರಷ್ಟ ಅಧಿಕಾರಿಗಳನ್ನು ನೇಮಕ ಮಾಡಿ ಜನರಿಗೆ ತೊಂದರೆ ನೀಡಲಾಗುತ್ತಿದೆ. ಆದರೆ ಕಾಂಗ್ರೆಸ್‌ ಇನ್ನು ಮುಂದೆ ಸುಮ್ಮನೆ ಕೂರುವುದಿಲ್ಲ. ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ನಡೆಯುವ ಅವ್ಯವಹಾರ ಬಯಲಿಗೆ ಎಳೆಯಲಾಗುವುದು ಎಂದರು.

ಹೇಮಾವತಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ 5 ಸಾವಿರ ಷೇರುದಾರರನ್ನು ಅಕ್ರಮವಾಗಿ ಮಾಡಿಕೊಂಡಿದ್ದಾರೆ. ರಾಜ್ಯ ಸರ್ಕಾರ ಆಡಳಿತ ಮಂಡಳಿಯನ್ನು ಸೂಪರ್‌ಸೀಡ್‌ ಮಾಡಿ ಆಡಳಿತಾಧಿಕಾರಿ ನೇಮಕ ಮಾಡಬೇಕೆಂದರು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಜೆ.ಎಂ.ರಾಮಚಂದ್ರ, ಎಂ.ಕೆ.ಮಂಜೇಗೌಡ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನಿರ್ದೇಶಕ ಎಂ.ಶಂಕರ್‌, ಜಿಪಂ ಸದಸ್ಯ ಶ್ರೇಯಸ್‌ ಎಂ.ಪಟೇಲ್‌ ಮಾತನಾಡಿದರು, ತಾಪಂ ಅಧ್ಯಕ್ಷೆ ಇಂದಿರಾ, ಸದಸ್ಯೆ ರಂಜಿತಾ, ರಾಮಕೃಷ್ಣ ಮತ್ತಿತರರಿದ್ದರು, ಧರಣಿ ನಿರತರು ತಹಶೀಲ್ದಾರ್‌ ಜೆ.ಬಿ.ಮಾರುತಿ ಅವರಿಗೆ ಮನವಿ ಸಲ್ಲಿಸಿದರು.

ಡಿಕೆಶಿ ವಿಚಾರದಲ್ಲೂ ರಾಜಕೀಯ ಮಾಡಿದರು…: ಕಾಂಗ್ರೆಸ್‌ ಸಹಕಾರದಿಂದ 14 ತಿಂಗಳು ಅಧಿಕಾರ ಅನುಭವಿಸಿದ ಕುಮಾರಸ್ವಾಮಿ ಅವರು, ಸಿದ್ದರಾಮಯ್ಯ ಅವರ ವಿರುದ್ಧ ಡಿ.ಕೆ.ಶಿವಕುಮಾರ್‌ ಅವರನ್ನು ಎತ್ತಿಕಟ್ಟಿದರು. ಇಂದು ಅವರಿಗೆ ಕಷ್ಟ ಬಂದಿದ್ದು ಅವರ ಪರ ಪ್ರತಿಭಟನೆ ನಡೆದರೂ ದೇವೇಗೌಡರ ಕುಟುಂಬ ಭಾಗವಹಿಸಿಲ್ಲ. ಧ್ವನಿ ಎತ್ತುತ್ತಿಲ್ಲ. ಈಗ, ಜೆಡಿಎಸ್‌ ಜಾತಕವನ್ನು ಆ ಪಕ್ಷದ ಶಾಸಕರಾದ ಜಿ.ಟಿ.ದೇವೇಗೌಡ, ಗುಬ್ಬಿ ಶ್ರೀನಿವಾಸ್‌ ಅವರೇ ಬಿಚ್ಚಿಡುತ್ತಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಜೆಡಿಎಸ್‌ ಶಾಸಕರು ಹಾಗೂ ಮಂತ್ರಿಗಳು ಕೋಟ್ಯಂತರ ರೂ. ಹಣ ಲೂಟಿ ಹೊಡೆದಿದ್ದಾರೆ. ಈ ಬಗ್ಗೆ ಧ್ವನಿ ಎತ್ತದಂತೆ ಆದೇಶವಿತ್ತು. ಈಗ ನಾವು ಸ್ವತಂತ್ರವಾಗಿದ್ದೇವೆ. ಜೆಡಿಎಸ್‌ ಮಂತ್ರಿಗಳು ಮಾಡಿರುವ ಅವ್ಯವಹಾರ ಬಯಲಿಗೆ ತರುತ್ತೇವೆಂದು ಮಾಜಿ ಶಾಸಕ ಸಿ.ಎಸ್‌.ಪುಟ್ಟೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.