ಶಾಂತಿವನ ಮಾದರಿಯಲ್ಲಿ ಗಂಗೆಮಡಿ ಅಭಿವೃದಿ

ಕುರುಬ ಸಮಾಜದ ಪೂರ್ವಭಾವಿ ಸಭೆಯಲ್ಲಿ ಕೆ.ಆರ್‌.ನಗರ ಕನಕ ಗುರುಪೀಠದ ಶಿವಾನಂದ ಪುರಿ ಸ್ವಾಮೀಜಿ

Team Udayavani, Jul 22, 2019, 4:09 PM IST

hasan-tdy-4

ಅರಸೀಕೆರೆ ಗಂಗೆ ಮಡಿಯಲ್ಲಿ ಭಾನುವಾರ ಜಿಲ್ಲಾ ಕುರುಬ ಸಮಾಜದಿಂದ ಏರ್ಪಡಿಸಿದ್ದ ಕುರುಬ ಸಮಾಜದ ಪೂರ್ವಭಾವಿ ಸಭೆಯಲ್ಲಿ ಕೆ.ಆರ್‌.ನಗರ ಕನಕ ಗುರುಪೀಠದ ಶಿವಾನಂದ ಪುರಿ ಸ್ವಾಮೀಜಿ ಮಾತನಾಡಿದರು.

ಅರಸೀಕೆರೆ: ತಾಲೂಕಿನ ಮುದುಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಗಂಗೆ ಮಡಿಯ ಅತ್ಯಂತ ಪವಿತ್ರ ಸ್ಥಳವಾಗಿದ್ದು, ಈ ಪ್ರದೇಶವನ್ನು ಧರ್ಮಸ್ಥಳದಲ್ಲಿನ ಶಾಂತಿ ವನದ ಮಾದರಿಯಲ್ಲಿ ಸರ್ವಜನಾಂಗದ ಸಹಕಾರದೊಂದಿಗೆ ಜಾತ್ಯತೀತವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಕೆ.ಆರ್‌.ನಗರ ಕನಕ ಗುರುಪೀಠದ ಶಿವಾನಂದ ಪುರಿ ಸ್ವಾಮೀಜಿ ತಿಳಿಸಿದರು.

ಜಿಲ್ಲಾ ಕುರುಬ ಸಮಾಜದವತಿಯಿಂದ ತಾಲೂಕಿನ ಮುದುಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಗಂಗೆ ಮಡಿಯಲ್ಲಿ ಭಾನುವಾರ ಬೆಳಗ್ಗೆ ಏರ್ಪಡಿಸಿದ್ದ ಸಮಾಜ ಬಂಧುಗಳ ಪೂರ್ವಭಾವಿ ಸಭೆಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿ, ಕಳೆದ 26 ವರ್ಷಗಳ ಹಿಂದೆ ಕಾಗಿನೆಲೆಯಲ್ಲಿ ಸ್ಥಾಪನೆಯಾದ ಕನಕ ಗುರುಪೀಠವು ಇಂದು ರಾಜ್ಯದ ನಾಲ್ಕು ದಿಕ್ಕಿಗಳಲ್ಲಿ ಶಾಖಾ ಮಠ ಗಳನ್ನು ಸ್ಥಾಪಿಸಿದೆ ಎಂದರು.

ವಿದ್ಯಾಸಂಸ್ಥೆಗಳ ಸ್ಥಾಪನೆ: ಮೈಸೂರು ವಿಭಾಗದ ನಮ್ಮ ಗುರು ಪೀಠವು ಮೈಸೂರಿನಲ್ಲಿ 25 ಎಕರೆ ಪ್ರದೇಶದಲ್ಲಿ ಎಂಜಿನಿಯರಿಂಗ್‌ ಕಾಲೇಜು ಸ್ಥಾಪನೆಗೆ ಕಾರ್ಯಪ್ರವೃತ್ತವಾಗಿದೆ. ಹೆಣ್ಣು ಮಕ್ಕಳ ವಿದ್ಯಾಬ್ಯಾಸಕ್ಕೆ ಉಚಿತ ವಿದ್ಯಾರ್ಥಿನಿಯರ ಹಾಸ್ಟೆಲ್ ಪ್ರಾರಂಭಿಸಿದ್ದು, ಗಂಡು ಮಕ್ಕಳಿಗಾಗಿ ವಿದ್ಯಾರ್ಥಿ ನಿಲಯ ಸ್ಥಾಪನೆಗೆ ಮುಂದಾಗಿದ್ದು, ಸಮಾಜದಲ್ಲಿ ಹತ್ತು ಹಲವು ಸತ್ಕಾರ್ಯಗಳನ್ನು ಸಮಾಜದ ಬಂಧುಗಳ ಸಹಕಾರದಲ್ಲಿ ಮಾಡುತ್ತಿದೆ ಎಂದರು.

ಅಂತೆಯೇ ಇಲ್ಲಿನ ಗಂಗಾಧರೇಶ್ವರನ ಸಾನ್ನಿಧ್ಯದಲ್ಲಿರುವ ಗಂಗೆಮಡಿ ಪ್ರವಿತ್ರ ಪುಣ್ಯಭೂಮಿಯನ್ನು ಧರ್ಮಸ್ಥಳದಲ್ಲಿನ ಸರ್ವ ಜನಾಂಗದ ಶಾಂತಿ ವನದ ಮಾದರಿಯಲ್ಲಿ ಸಮೃದ್ಧ ಸಸ್ಯ ಸಂಪತ್ತಿನೊಂದಿಗೆ ಸಾಮಾಜಿಕವಾಗಿ ಧಾರ್ಮಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ಧಿ ಪಡಿಸುವ ಸಂಕಲ್ಪವನ್ನು ಮಾಡಿದ್ದೇವೆ ಇಂತಹ ಮಹತ್ಕಾರ್ಯಕ್ಕೆ ರಾಜ್ಯದ ಕುರುಬ ಸಮಾಜ ಮುಖಂಡರೊಂದಿಗೆ ಇನ್ನಿತರ ಹತ್ತು ಹಲವು ಸಮಾಜದ ಗಣ್ಯಮಾನ್ಯರು ತುಂಬು ಹೃದಯದಿಂದ ಹೆಚ್ಚಿನ ಸಹಕಾರ ನೀಡಲಿದ್ದಾರೆ ಎಂದು ಹೇಳಿದರು.

ಸಂಘಟನೆಯಿಂದ ಸಮುದಾಯದ ಅಭಿವೃದ್ಧಿ: ಜಿಪಂ ಸದಸ್ಯ ಹಾಗೂ ಜಿಲ್ಲಾ ಕುರುಬ ಸಮಾಜದ ಅಧ್ಯಕ್ಷ ಪಟೇಲ್ ಶಿವಪ್ಪ ಮಾತನಾಡಿ, ಸಂಘಟನೆ ಶಕ್ತಿಯಿಂದ ಮಾತ್ರ ಯಾವುದೇ ಸಮಾಜದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗುತ್ತದೆ ಎನ್ನುವ ಅಚಲ ವಿಶ್ವಾಸದಿಂದ ಶಕ್ತಿ ಮೀರಿ ಕೆಲಸ ಮಾಡುತ್ತಿದ್ದೇನೆ ಎಂದರು.

ಕೇವಲ ಒಂದು ತಿಂಗಳ ಅವಧಿಯಲ್ಲಿ ಗುಡ್ಡಗಾಡು ಈ ಪ್ರದೇಶವನ್ನು ಉತ್ತಮವಾದ ಮೂಲಭೂತ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸಲು ತಮ್ಮೊಂದಿಗೆ ಸಮಾಜದ ಅನೇಕ ಬಂಧುಗಳು ಸಹಕಾರ ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಪ್ರವಿತ್ರ ಪುಣ್ಯಭೂಮಿಯನ್ನು ಸಾಮಾಜಿಕ ಧಾರ್ಮಿಕ ಹಾಗೂ ಶೈಕ್ಷಣಿಕ ಪ್ರವಾಸೋದ್ಯಮ ಕೇಂದ್ರವನ್ನಾಗಿ ರೂಪಿಸಲು ಸಮಾಜದ ಬಂಧುಗಳ ಸಲಹೆ ಸಹಕಾರ ಕೇಳಲು ಹಾಲುಮತದ ಬೃಹತ್‌ ಸಮಾವೇಶವನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಬಿಜೆಪಿ ಪ್ರಭಾರ ಜಿಲ್ಲಾಧ್ಯಕ್ಷ ನವಿಲೆ ಅಣ್ಣಪ್ಪ, ತಾಲೂಕು ಜೆಡಿಎಸ್‌ಅಧ್ಯಕ್ಷ ಬಿಳಿಚೌಡಯ್ಯ, ಜಿಪಂ ಮಾಜಿ ಅಧ್ಯಕ್ಷರಾದ ಹುಚ್ಚೇಗೌಡ, ಪ್ರೇಮಾ, ತಾಪಂ ಮಾಜಿ ಅಧ್ಯಕ್ಷ ಹನುಮೇಗೌಡ, ಜಿ ಪಂ ಮಾಜಿ ಸದಸ್ಯ ಬಾಣಾವರ ಅಶೋಕ್‌, ತಾಲೂಕು ಕುರುಬ ಸಂಘದ ಅಧ್ಯಕ್ಷ ಟಿ.ಆರ್‌.ಕೃಷ್ಣಮೂರ್ತಿ, ಬ್ಲಾಕ್‌ಕಾಂಗ್ರೆಸ್‌ ಅಧ್ಯಕ್ಷ ಶ್ರೀನಿವಾಸ್‌, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜು, ರೈತಸಂಘದ ಸಂಚಾಲಕ ಕನಕೆಂಚೇನಹಳ್ಳಿ ಪ್ರಸನ್ನಕುಮಾರ್‌, ಹಾಸನ ತಾಲೂಕು ಕುರುಬ ಸಂಘದ ಅಧ್ಯಕ್ಷ ಸಿದ್ದೇಗೌಡ, ಬೇಲೂರು ರಂಗ ನಾಥ್‌, ಕವಲೀರಪ್ಪ, ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಗಿರಿಗೌಡ, ಹೊಳೇನರಸೀಪುರದ ಮಂಜೇಗೌಡ, ಬೀರಪ್ಪ, ಜಗದೀಶ್‌,ಪಾಪಣ್ಣ, ವೆಂಕಟೇಶ್‌, ಈಶ್ವರಪ್ಪ ಇದ್ದರು.

•ಕನಕ ಗುರುಪೀಠದಿಂದ ಮೈಸೂರಿನಲ್ಲಿ ಎಂಜಿನಿಯರಿಂಗ್‌ ಕಾಲೇಜು ಸ್ಥಾಪನೆ
•ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ಉಚಿತ ವಿದ್ಯಾರ್ಥಿನಿಯರ ಹಾಸ್ಟೆಲ್ ಪ್ರಾರಂಭ
•ಸಂಘಟನಾ ಶಕ್ತಿಯಿಂದ ಯಾವುದೇ ಸಮಾಜದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ
•ಕುರುಬ ಸಮುದಾಯದ ವಿದ್ಯಾರ್ಥಿಗಳಿಗೆ ಶ್ರೀಮಠದಿಂದ ಅಗತ್ಯ ಸೌಲಭ್ಯ
•ಮುಂದಿನ ದಿನಗಳಲ್ಲಿ ಈ ಪ್ರವಿತ್ರ ಪುಣ್ಯಭೂಮಿ ಅಭಿವೃದ್ಧಿಗಾಗಿ ಹಾಲುಮತದ ಬೃಹತ್‌ ಸಮಾವೇಶ
•ಸರ್ವ ಸಮುದಾಯದ ಸಹಕಾರದೊಂದಿಗೆ ಪ್ರವಾಸಿ ಕೇಂದ್ರವಾಗಿ ಗಂಗೆ ಮಡಿ ಪುಣ್ಯ ಭೂಮಿ ಅಭಿವೃದ್ಧಿಗೆ ಕ್ರಮ
•ಒಂದು ತಿಂಗಳ ಅವಧಿಯಲ್ಲಿ ಗುಡ್ಡಗಾಡು ಪ್ರದೇಶವನ್ನು ಉತ್ತಮವಾದ ಮೂಲಭೂತ ಸೌಲಭ್ಯಗಳೊಂದಿಗೆ ಅಭಿವೃದ್ಧಿ ಪಡಿಸಲು ಸಮುದಾಯದವರ ಸಹಕಾರ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.