ಜಿಲ್ಲೆಯಲ್ಲಿ ದಿವ್ಯಾಂಗರಿಂದ ಶೇ.95ರಷ್ಟು ಮತದಾನ

ಹಾಸನ ಲೋಕಸಭಾ ಕ್ಷೇತ್ರದಲ್ಲಿ ಸ್ವೀಪ್‌ ಚಟುವಟಿಕೆಗೆ ಉತ್ತಮ ಸ್ಪಂದನೆ: ಅಧಿಕಾರಿಗಳ ಹರ್ಷ

Team Udayavani, Apr 26, 2019, 5:17 PM IST

hasan-2-tdy..

● ಎನ್‌.ನಂಜುಂಡೇಗೌಡ

ಹಾಸನ: ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಹಾಸನ ಕ್ಷೇತ್ರದಲ್ಲಿ ದಾಖಲೆ ಮತದಾನವಾಗಿರು ವಂತೆಯೇ ದಿವ್ಯಾಂಗರಿಂದಲೂ ಶೇ.95ರಷ್ಟು ಮತದಾನವಾಗಿದೆ.

ಈ ಬಾರಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ ವಿವಿಧ ಬಗೆಯ ದೈಹಿಕ ನ್ಯೂನ್ಯತೆಗಳಿಂದ ಬಳಲುತ್ತಿರುವ ದಿವ್ಯಾಂಗರು ಶೇ. 95.37ರಷ್ಟು ಮತ ಚಲಾಯಿಸಿ ಮಾದರಿ ಎನಿಸಿದ್ದಾರೆ. ಜಿಲ್ಲೆಯಲ್ಲಿ 12,896 ದಿವ್ಯಾಂಗ ರಿದ್ದು, 7,874 ಪುರುಷ ಹಾಗೂ 5,022 ಮಹಿಳಾ ಮತದಾರರಿದ್ದಾರೆ, ಅದರಲ್ಲಿ 7,582 ಪುರುಷರು ಹಾಗೂ 4,718 ಮಹಿಳಾ ಮತದಾರರು ಸೇರಿದಂತೆ ಒಟ್ಟು 12,300 ಮಂದಿ ಮತ ಚಲಾಯಿಸಿದ್ದಾರೆ.

ವಾಹನ ವ್ಯವಸ್ಥೆ: ಈ ಬಾರಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ಪೀಪ್‌ ಸಮಿತಿ ವತಿಯಿಂದ ದಿವ್ಯಾಂಗರು ಹಾಗೂ ಆಶಕ್ತ ವಯೋವೃದ್ಧರಿಗೆ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಇದು ಹೆಚ್ಚಿನ ಸಂಖ್ಯೆ ಯಲ್ಲಿ ದಿವ್ಯಾಂಗರು ಹಾಗೂ ಆಶಕ್ತ ಹಿರಿಯ ನಾಗರೀಕರು ಮತಗಟ್ಟೆಗೆ ಬಂದು ತಮ್ಮ ಮತದಾನದ ಹಕ್ಕುಗಳನ್ನು ಚಲಾಯಿಸಲು ಸಹಕಾರಿಯಾಯಿತು.

ಮತದಾನದ ತರಬೇತಿ: ಈ ಬಾರಿ ಸ್ಪೀಪ್‌ ಸಮಿತಿ ವತಿಯಿಂದ ದಿವ್ಯಾಂಗರಿಗೂ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಿ, ವಿದ್ಯುನ್ಮಾನ ಮತಯಂತ್ರಗಳ ಬಳಕೆ ಬಗ್ಗೆ ತರಬೇತಿ ನೀಡಲಾಯಿತು. ದಿವ್ಯಾಂಗರಿಗೆ ಟ್ರೈಸಿಕಲ್ ರ್ಯಾಲಿ ಏರ್ಪಡಿಸಿ ಮತದಾನದ ಬಗ್ಗೆ ಅರಿವು ಮೂಡಿಸಲಾಯಿತು. ಸಂಜ್ಞೆ ಭಾಷೆಯ ತರ್ಜುಮೆ ದಾರರನ್ನು ಹೋಬಳಿವಾರು ನೇಮಿಸಿ ಮತದಾನಕ್ಕೆ 3 ದಿನಗಳಿರುವಂತೆ ಜಿಲ್ಲೆಯ ಎಲ್ಲಾ ಶ್ರವಣದೊಷವುಳ್ಳ ದಿವ್ಯಾಂಗರಿಗೆ ಹೋಬಳಿವಾರು ಮತದಾನದ ಹಾಗೂ ಇವಿಎಂ, ವಿವಿ ಪ್ಯಾಟ್‌ಗಳ ಬಗ್ಗೆ ತರಬೇತಿ ನೀಡ ಲಾಯಿತು. ಅಲ್ಲದೆ ಪ್ರತಿ ಗ್ರಾಮ ಪಂಚಾಯತಿ ಹಂತ ದಲ್ಲಿ ದಿವ್ಯಾಂಗರನ್ನು ಕರೆತರಲು ವಾಹನ, ಸ್ವಯಂ ಸೇವಕರ ಸೇವೆ ಒದಗಿಸಲಾಗಿತ್ತು. ಗಾಲಿ ಕುರ್ಚಿ ವ್ಯವಸ್ಥೆ, ರ್‍ಯಾಂಪ್‌ ಬ್ರೈಲ್ಲಿಪಿ ಸೌಲಭ್ಯ, ಭೂತಗನ್ನಡಿ ವ್ಯವಸ್ಥೆ ಮಾಡಲಾಗಿತ್ತು.

ಸಂಜ್ಞಾ ಭಾಷೆ ತರ್ಜುಮೆದಾರರ ನೇಮಕ: ಜಿಲ್ಲೆ ಯಲ್ಲಿ 1,182 ಶ್ರವಣದೊಷವುಳ್ಳ ಮತದಾರರಿದ್ದು, ಮತದಾನದ ದಿನದಂದು ಹೋಬಳಿ ಕೇಂದ್ರಕ್ಕೆ ಒಬ್ಬರಂತೆ 38 ಕಡೆಗಳಲ್ಲಿ ಸಂಜ್ಞಾ ಭಾಷೆ ತರ್ಜುಮೆ ದಾರರನ್ನು ನೇಮಿಸಲಾಗಿತ್ತು. 662 ಮತಗಟ್ಟೆಗಳಲ್ಲಿ ಮತಗಟ್ಟೆ ಹೊರಭಾಗದಲ್ಲಿ ಟೀವಿ ಅಳವಡಿಸಿ ಸಂಜ್ಞೆ ಭಾಷೆಯ ವಿಡಿಯೋ ಪ್ರಸಾರ ಮಾಡುವ ಮೂಲಕ ಮತದಾದ ಬಗ್ಗೆ ಮಾಹಿತಿ ನೀಡಲಾಗಿತ್ತು.

ನಿರಂತರವಾಗಿ ದಿವ್ಯಾಂಗರ ಮತದಾರರಿಗೆ ಮಾಹಿತಿ ನೀಡಿ, ಸಂಪರ್ಕ ಇರಿಸಿಕೊಂಡು ಮತಗಟ್ಟೆಗೆ ಕರೆತಂದು ಮತದಾನ ಮಾಡಿಸಲಾಯಿತು. ಎಲ್ಲಾ ಮತಗಟ್ಟೆಗಳಲ್ಲಿ ಛತ್ರಿಯ ನೆರಳಿನ ಸಹಾಯದಿಂದ ಬಿಸಿಲಿನ ತಾಪ ಉಂಟಾಗದಂತೆ ನೆರವು ನೀಡಲಾಗಿತ್ತು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಲಿಂಗ ಅಲ್ಪ ಸಂಖ್ಯಾತರೂ ಸಹ ಮತದಾರರ ಜಾಗೃತಿ ಚಟುವಟಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಲಿಂಗ ಅಲ್ಪ ಸಂಖ್ಯಾತರಾದ ವರ್ಷಾ ಮತ್ತು ಶ್ರಾವಣಿ ಅವರು ಮಾತನಾಡಿ, ಈ ಬಾರಿ ಜಿಲ್ಲಾ ಪಂಚಾಯಿತಿ ಸಭಾಂಗಣದಕ್ಕೆ ಆಹ್ವಾನಿಸಿ ವಿಶೇಷವಾಗಿ ಲಿಂಗ ಅಲ್ಪ ಸಂಖ್ಯಾತರಿಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡು ವಿದ್ಯುನ್ಮಾನ ಮತಯಂತ್ರಗಳ ಬಳಕೆ, ವಿ.ವಿ.ಪ್ಯಾಟ್ ಬಳಕೆ ಮಾಹಿತಿ ನೀಡಿ ಕಡ್ಡಾಯ ಮತ ದಾನದಮಹತ್ವದ ಬಗ್ಗೆ ಪ್ರೇರಣೆ ನೀಡಿದ್ದು ಲಿಂಗ ಅಲ್ಪ ಸಂಖ್ಯಾತರು ಮತಹಾಕಲು ಕಾರಣವಾಗಿದೆ ಎಂದರು.

ಸ್ಪೀಪ್‌ ಅಧ್ಯಕ್ಷರ ಕೃತಜ್ಞತೆ: ಜಿಲ್ಲಾ ಸ್ಪೀಪ್‌ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎನ್‌. ವಿಜಯ ಪ್ರಕಾಶ್‌ ಅವರು ಈ ಬಗ್ಗೆ ಪ್ರತಿಕಿಯಿಸಿ ಜಿಲ್ಲಾ ಸ್ಪೀಪ್‌ ಸಮಿತಿ ಹಾಗೂ ಜಿಲ್ಲಾಡಳಿತದ ಪ್ರಯತ್ನ ವಿಫ‌ಲ ನೀಡಿದೆ ಎಂದಿದ್ದಾರೆ. ಜಿಲ್ಲೆಯಲ್ಲಿ ಶೇ 95.37ರಷ್ಟು ದಿವ್ಯಾಂಗರು ಮತಚಲಾಯಿಸಿ ಇತರರಿಗೆ ಮಾದರಿ ಎನಿಸಿದ್ದಾರೆ. ಎಂತಹ ದೈಹಿಕ ಕಷ್ಟವಿದ್ದರೂ ಛಲದಿಂದ ಬಂದು ಮತಹಾಕಿದ ದಿವ್ಯಾಂಗ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

 

ಜಿಲ್ಲಾಧಿಕಾರಿ ಅಭಿನಂದನೆ

ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಅವರೂ ಪ್ರತಿಕ್ರಿಯಿಸಿ, ದಿವ್ಯಾಂಗರಿಗೆ ಮತದಾನದ ಬಗ್ಗೆ ಇರುವ ಕಾಳಜಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಜಿಲ್ಲಾಡಳಿತ ಹಾಗೂ ಸ್ಪೀಪ್‌ ಸಮಿತಿಯಿಂದಾದ ಜಾಗೃತಿ ಮತ್ತು ಜಿಲ್ಲೆಯಾದ್ಯಂತ ಮಾಡಿದ್ದ ಸೌಲಭ್ಯಗಳು ಸಮರ್ಪಕವಾಗಿ ಅನುಷ್ಠಾನ ಗೊಳಿಸಿದ್ದಕ್ಕಾಗಿ ಎಲ್ಲಾ ಅಧಿಕಾರಿ ಸಿಬ್ಬಂದಿಗೆ, ಸ್ವಯಂ ಸೇವಕರಿಗೆ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.