K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ
Team Udayavani, Apr 15, 2024, 11:57 PM IST
ಹಾಸನ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಹೊಳೆನರಸೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಬಗ್ಗೆ ಈಶ್ವರಪ್ಪ ಲಘುವಾಗಿ ಮಾತನಾಡಿದ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ. ಕ್ಷೇತ್ರದ ಮತದಾರರು ಕೂಡ ತಕ್ಕ ಪಾಠ ಕಲಿಸುತ್ತಾರೆ. ಅವರು ಎಷ್ಟು ಮಾತನಾಡುತ್ತಾರೋ ಅದರ ದುಪ್ಪಟ್ಟು ಮತಗಳು ರಾಘವೇಂದ್ರರಿಗೆ ಬೀಳುತ್ತವೆ. ಈ ರೀತಿಯ ಪುಕ್ಸಟ್ಟೆ ಮಾತಗಳನ್ನು ಜನರು ಗಮನಿಸುತ್ತಾರೆ. ಈಶ್ವರಪ್ಪ ಮಂತ್ರಿಯಾಗಿ ಶಿವಮೊಗ್ಗಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ.
ಉಪಮುಖ್ಯಮಂತ್ರಿಯಾಗಿ ಶಿವಮೊಗ್ಗ ಜಿಲ್ಲೆಗೆ ಅವರ ಕೊಡುಗೆ ಏನು? ರಾಘವೇಂದ್ರ ಅವರು ಸಂಸದರಾಗಿ ಯಾವ ರೀತಿ ಅಭಿವೃದ್ಧಿ ಮಾಡಿದ್ದಾರೆ. ಯಡಿಯೂರಪ್ಪ ಜಿಲ್ಲೆಗೆ, ರಾಜ್ಯಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ ಎಂದು ಮನೆ ಮನೆಯಲ್ಲೂ ಮಾತನಾಡುತ್ತಾರೆ. ಅವರಿಂದ ಕಲಿಯಬೇಕಾದ ಅಗತ್ಯ ನಮಗಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ