ಸಕಾಲದಲ್ಲಿ ಕಚೇರಿಗೆ ಬಾರದಿದ್ದರೆ ಶಿಸ್ತು ಕ್ರಮ


Team Udayavani, Jul 13, 2019, 12:11 PM IST

hasan-tdy-1..

ಹಾಸನ ಜಿಲ್ಲಾಧಿಕಾರಿ ಅಕ್ರಂಪಾಷಾ ತಮ್ಮ ಕಚೇರಿಯ ವಿವಿಧ ವಿಭಾಗಗಳಿಗೆ ಶುಕ್ರವಾರ ಬೆಳಗ್ಗೆ ದಿಢೀರ್‌ ಭೇಟಿ ನೀಡಿ ಅಧಿಕಾರಿಗಳು-ನೌಕರರ ಹಾಜರಾತಿ ಪರಿವೀಕ್ಷಣೆ ನಡೆಸಿದಾಗ ಖಾಲಿ ಕುರ್ಚಿಗಳು ಕಂಡು ಬಂದವು.

ಹಾಸನ: ಜಿಲ್ಲಾಧಿಕಾರಿ ಅಕ್ರಂಪಾಷಾ ತಮ್ಮ ಕಚೇರಿಯ ವಿವಿಧ ವಿಭಾಗಗಳಿಗೆ ಶುಕ್ರವಾರ ದಿಢೀರ್‌ ಭೇಟಿ ನೀಡಿ ಸಕಾಲಕ್ಕೆ ಕಚೇರಿಗೆ ಆಗಮಿಸದ ಅಧಿಕಾರಿಗಳು ಮತ್ತು ನೌಕರರನ್ನು ತರಾಟೆಗೆ ತೆಗೆದುಕೊಂಡರು.

ಓಡೋಡಿ ಬಂದರು: ಬೆಳಗ್ಗೆ 10 ಗಂಟೆಗೆ ಕಚೇರಿಗೆ ಹಾಜರಾದ ಅಕ್ರಂಪಾಷಾ, ತಮ್ಮ ಕಚೇರಿ ಸಂಕೀರ್ಣದ ವಿವಿಧ ಕೊಠಡಿಗಳಿಗೆ ಭೇಟಿ ನೀಡಿದಾಗ ಬಹುಪಾಲು ಅಧಿಕಾರಿ ಗಳು ಮತ್ತು ನೌಕರರು ಕಚೇರಿಗೆ ಬಾರದಿ ದ್ದರಿಂದ ಕುರ್ಚಿಗಳು ಖಾಲಿ ಇದ್ದವು. ಕೆಲವು ಕೊಠಡಿಗಳಲ್ಲಿ ಒಬ್ಬ ನೌಕರನೂ ಇಲ್ಲದಿದ್ದನ್ನು ಕಂಡು ಆಕ್ರೋಶಗೊಂಡ ಜಿಲ್ಲಾಧಿಕಾರಿ, ಕಚೇರಿಗೆ ನಿಗದಿತ ಸಮಯಕ್ಕೆ ಬಾರದ ಅಧಿ ಕಾರಿಗಳು ಮತ್ತು ನೌಕರರ ಮಾಹಿತಿ ಸಂಗ್ರಹಿಸಿದರು. ಜಿಲ್ಲಾಧಿಕಾರಿ ಅವರು ಪರಿವೀಕ್ಷಣೆ ಮಾಡುತ್ತಿರುವ ವಿಷಯ ತಿಳಿದು ಓಡೋಡಿ ಬಂದ ಕೆಲವು ಅಧಿಕಾರಿ ಗಳು ಹಾಗೂ ನೌಕ ರರ ಮಾಹಿತಿ ಪಡೆದ ಜಿಲ್ಲಾಧಿಕಾರಿಯವರು ಶನಿವಾರದಿಂದ ನಿಗದಿತ ಸಮಯ ದೊಳಗೆ ಕಚೇರಿಯಲ್ಲಿ ಹಾಜರಿರದಿದ್ದರೆ ಶಿಸ್ತುಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.

ನಿಗಾವಹಿಸಿ: ನೌಕರರು ಸಕಾಲದಲ್ಲಿ ಕಚೇರಿಗೆ ಆಗಮಿಸದಿದ್ದರಿಂದ ಸಾರ್ವಜನಿ ಕರು ಸ್ಪಂದನ ಕೇಂದ್ರ, ಆಧಾರ್‌ ಕೇಂದ್ರದಲ್ಲಿ ಕಾಯುತ್ತಿದ್ದಾರೆ ಎಂದು ಹೇಳಿದ ಜಿಲ್ಲಾಧಿ ಕಾರಿ ಅಕ್ರಂಪಾಷಾ, ಸಾರ್ವಜನಿಕರಿಗೆ ತೊಂದರೆ ಆಗದಂತೆ ನೌಕರರು ನಿಗಾವಹಿಸ ಬೇಕು ಎಂದು ತಾಕೀತು ಮಾಡಿದರು.

ಸ್ವಚ್ಛತೆ ಬಗ್ಗೆ ನಿಗಾ ಇರಲಿ: ಕಚೇರಿ ಸಂಕೀರ್ಣದ ಸ್ವಚ್ಛತೆ ಬಗ್ಗೆಯೂ ಪರಿಶೀಲನೆ ನಡೆಸಿ ಕಚೇರಿಯ ಆವರಣವನ್ನು ಸ್ವಚ್ಛವಾಗಿ ಸಿಕೊಳ್ಳಬೇಕು ಎಂದು ನೌಕರರಿಗೆ ಸೂಚನೆ ನೀಡಿದರು. ತಾವು ಕಾರ್ಯಭಾರ ವಹಿಸಿ ಕೊಂಡಾಗಿನಿಂದಲೂ ಆಡಳಿತದಲ್ಲಿ ಸುಧಾ ರಣೆ ತರುವ ನಿಟ್ಟಿನಲ್ಲಿ ಸಾಕಷ್ಟು ಕ್ರಮ ಕೈಗೊಳ್ಳುತ್ತಿದ್ದೇನೆ. ಗ್ರಾಮ ವಾಸ್ತವ್ಯ, ರೈತರ ಪೌತಿ ಖಾತೆ, ನಿರಾಶ್ರಿತ ಕೇಂದ್ರಕ್ಕೆ ಭೇಟಿ, ನಗರ ಸಂಚಾರ ಸೇರಿದಂತೆ ಹಲವು ಕ್ರಮ ಗಳನ್ನು ಕೈಗೊಳ್ಳಲಾಗಿದೆ. ಇನ್ನು ಮುಂದೆ ಕಚೇರಿಗಳಿಗೆ ದಿಢೀರ್‌ ಭೇಟಿ ನೀಡಿ ಪರಿವೀಕ್ಷಣೆ ಮಾಡುವುದನ್ನು ಮುಂದುವರಿಸಲಾಗುವುದು ಎಂದರು.

ಕೆಲಸ ಮುಗಿದ ಬಳಿಕ ವಾಹನ ಕೊಂಡೊಯ್ಯಿರಿ: ಜಿಲ್ಲಾಧಿಕಾರಿ ಕಚೇರಿ ಯಲ್ಲಿ ಕೆಲಸಕ್ಕೆ ಬರುವ ಸಾರ್ವಜನಿಕರು ಕಚೇರಿ ಆವರಣದಲ್ಲಿ ಕೆಲಕಾಲ ತಮ್ಮ ವಾಹನಗಳನ್ನು ನಿಲ್ಲಿಸಿ, ಕೆಲಸ ಮುಗಿದ ತಕ್ಷಣ ತೆಗೆದುಕೊಂಡು ಹೋಗಬೇಕು. ಕೆಲವು ಸಾರ್ವಜನಿಕರು, ವಿವಿಧ ಇಲಾಖೆ ನೌಕರರು ತಮ್ಮ ವಾಹನಗಳನ್ನು ಜಿಲ್ಲಾಧಿ ಕಾರಿ ಕಚೇರಿ ಆವರಣದಲ್ಲಿ ಬೆಳಗ್ಗೆ ನಿಲ್ಲಿಸಿ ಸಂಜೆ ತೆಗೆದುಕೊಂಡು ಹೋಗುವ ಪರಿಪಾಠ ಬೆಳೆಸಿಕೊಂಡಿದ್ದಾರೆ.

ಇನ್ನು ಮುಂದೆ ವಾಹನ ನಿಲುಗಡೆ ಉಸ್ತುವಾರಿಗೆ ಡಿ.ಗ್ರೂಪ್‌ ನೌಕರನನ್ನು ನೇಮಿಸಲಾಗುವುದು. ಯಾರು ಎಷ್ಟು ಸಮಯ ವಾಹನ ನಿಲುಗಡೆ ಮಾಡುತ್ತಾರೆ ಎಂಬುದನ್ನು ಆ ನೌಕರ ಮಾಹಿತಿ ಸಂಗ್ರಹಿಸುವ ವ್ಯವಸ್ಥೆ ಮಾಡಲಾಗುವುದು ಎಂದೂ ಹೇಳಿದರು.

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.