ಅಕ್ರಮವಾಗಿ ರಾತ್ರಿ ವೇಳೆ ವಲಸಿಗರ ಆಗಮನ: ಬಾಂಗ್ಲಾದಿಂದ ಬಂದವರೆಂಬ ಆರೋಪ

ಕೇರಳದಿಂದ ಮಧ್ಯವರ್ತಿಗಳ ಮೂಲಕ ತೋಟಗಳ ಮಾಲಿಕರಿಗೆ ಹಸ್ತಾಂತರ, ಸ್ಥಳೀಯರಿಗೆ ಉದ್ಯೋಗ ಕಡಿತ

Team Udayavani, Sep 30, 2021, 6:05 PM IST

akrama

 ಅರಕಲಗೂಡು: ಹಾಸನ ಜಿಲ್ಲೆಗೆ ಹೊರರಾಜ್ಯ ಮತ್ತು ಬಾಂಗ್ಲಾ ವಲಸಿಗರು ಎಗ್ಗಿಲ್ಲದೇ ಬರುತ್ತಿದ್ದು ಸ್ಥಳೀಯ ಕೂಲಿ ಕಾರ್ಮಿಕರಲ್ಲಿ ಆತಂಕ ಮನೆ ಮಾಡಿದೆ. ಹಲ ವಾರು ವರ್ಷಗಳಿಂದ 100-200 ಸಂಖ್ಯೆಯಲ್ಲಿ ಕೂಲಿ ಗಾಗಿ ಬರುತ್ತಿದ್ದ ಅಸ್ಸಾಂ, ಒಡಿಶಾ ಕೂಲಿಯಾಳು ಗಳು ಇತ್ತೀಚಿನ ದಿನಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ತಾಲೂಕು ಒಂದರಲ್ಲೇ ಸಿಗುವಷ್ಟರ ಮಟ್ಟಿಗೆ ಜಮಾಯಿಸಿ ದ್ದಾರೆ. ಇನ್ನು ಗುತ್ತಿಗೆದಾರರೂ ಸ್ಥಳೀ ಯರನ್ನು ದೂರ ವಿಟ್ಟು ವಲಸಿಗರಿಗೆ ಆಶ್ರಯ ನೀಡುತ್ತಿದ್ದಾರೆ. ಹೀಗಾಗಿ ಸ್ಥಳೀಯರಿಗೆ ಕೂಲಿ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನಲ್ಲಿ ಅಡಕೆ ತುಡಿಕೆಗಳು, ಗಾರೆ ಕೆಲಸ, ತೋಟದ ಕೆಲಸ, ಶುಂಠಿ ಹಾಗೂ ತಂಬಾಕು ಬೆಳೆಗಳ ಕೆಲಸಕ್ಕೂ ಮಾಲಿಕರು, ಗುತ್ತಿಗೆದಾರರು ವಲಸಿಗರನ್ನೇ ಬಳಸಿಕೊಳ್ಳುತ್ತಿದ್ದಾರೆ.

ಮಧ್ಯವರ್ತಿಗಳಿಂದ ವಲಸಿಗರ ವಿತರಣೆ

ವಲಸಿಗರನ್ನು ಕರೆತರುತ್ತಿರುವ ಮಧ್ಯವರ್ತಿಗಳು ಕೂಲಿಗೆ ಬೇಡಿಕೆ ಇಟ್ಟಿರುವ ಸ್ಥಳಗಳಿಗೆ ಕರೆದೊಯ್ದು, ಆ ವ್ಯಕ್ತಿಗಳಿಂದ ಇಂತಿಷ್ಟು ಹಣ ಪಡೆದು ಜನರನ್ನು ಬಿಟ್ಟು ಹೋಗುತ್ತಿದ್ದಾರೆ. ಕೂಲಿಗೆಂದು ಬಳಸಿಕೊಳ್ಳು ತ್ತಿರುವ ಮಾಲಿಕರೂ ಇವರ ಬಗ್ಗೆ ಯಾವುದೇ ಮಾಹಿತಿ ನೀಡದಿರುವುದು, ಇವರನ್ನು ಅಧಿಕಾರಿಗಳೂ ಪ್ರಶ್ನಿಸದೆ ಮೌನವಹಿಸಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ ಎಂದು ಸ್ಥಳೀಯರು ದೂರುತ್ತಿದ್ದಾರೆ. ಒಟ್ಟಾರೆ ಅನ್ಯ ರಾಜ್ಯಗಳ ಹೆಸರೇಳಿ ಸಾವಿರಾರು ಸಂಖ್ಯೆಯಲ್ಲಿ ಕೂಲಿ ಕಾರ್ಮಿಕರು ತಾಲೂಕಿಗೆ ಪ್ರವೇಶಿ ಸುತ್ತಿರುವುದು ಸ್ಥಳೀಯರಿಗೆ ಕೂಲಿ ಸಿಗದ ಪರಿಸ್ಥಿತಿ ಒಂದೆಡೆಯಾದರೆ, ಮುಂದಿನ ದಿನಗಳಲ್ಲಿ ಎಲ್ಲಿ ಅಶಾಂತಿಗೆ ಕಾರಣವಾಗುತ್ತದೆಯೋ ಎಂಬ ಆತಂಕವೂ ಮನೆ ಮಾಡುತ್ತಿದೆ. ಅಧಿಕಾರಿಗಳು ಈಗಲಾದರೂ ಎಚ್ಚೆತ್ತು ಪರಿಶೀಲಿಸದಿದ್ದರೆ, ಮುಂದಾಗುವ ಅನಾಹುತಕ್ಕೆ ಅಧಿಕಾರಿಗಳೇ ಕಾರಣರಾಗುತ್ತಾರೆಂದು ಎಂದು ನಾಗರಿಕರು ಆರೋಪಿಸುತ್ತಿದ್ದಾರೆ.

ತಾಲೂಕಿಗೆ ಹೊರ ರಾಜ್ಯಗಳಿಂದ ಕೂಲಿಗಾಗಿ ತಂಡೋಪತಂಡವಾಗಿ ಜನ ಬರುತ್ತಿದ್ದಾರೆ ಎಂಬ ಮಾಹಿತಿ ಸಾರ್ವಜನಿಕರಿಂದ ತಿಳಿದು ಬಂದಿದೆ. ಈ ಕೂಲಿ ಕಾರ್ಮಿಕರು ಹೊರ ರಾಜ್ಯದವರೋ ಅಥವಾ ಹೊರ ದೇಶದವರೋ ಎಂಬ ಅನುಮಾನ ಜನತೆಯಲ್ಲಿ ಮೂಡಿದೆ. ಈ ಬಗ್ಗೆ ಕೂಡಲೇ ಪೊಲೀಸ್‌, ಕಾರ್ಮಿಕ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇನೆ.
● ರೇಣುಕುಮಾರ, ತಹಶೀಲ್ದಾರ್‌

ವಾಸ ಸ್ಥಳಕ್ಕೆ ತೆರಳಿ ಪರಿಶೀಲನೆ
ಯಾವುದೇ ರಾಜ್ಯದಿಂದ ಕೂಲಿ ಕಾರ್ಮಿಕರು ಆಗಮಿಸಿದರೂ, ಚಿಕ್ಕಮಗಳೂರಿನಲ್ಲಿರುವ ನಮ್ಮ ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿಸಿಕೊಳ್ಳ ಬೇಕು. ಆದರೆ, ನಮಗೆ ಬಂದಿರುವ ಮಾಹಿತಿ ಪ್ರಕಾರ ಇಲ್ಲಿವರೆಗೂ ಯಾವುದೇ ನೋಂದಣಿ ಯಾಗಿಲ್ಲ. ಸಾರ್ವಜನಿಕವಾಗಿ ಬಂದಿರುವ ಈ ವಿಷಯವನ್ನು ಮೇಲಧಿಕಾರಿಗಳಿಗೆ ತಿಳಿಸಿ ಇವರು ವಾಸಿಸುತ್ತಿರುವ ಸ್ಥಳಕ್ಕೆ ತೆರಳಿ ಪರಿಶೀಲಿಸಿ ವರದಿ ಪಡೆಯುವುದಾಗಿ ತಾಲೂಕು ಕಾರ್ಮಿಕ ಇಲಾಖಾ ಅಧಿಕಾರಿ ವಿಜಯಕುಮಾರ ತಿಳಿಸಿದರು.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.