ಷೇರುದಾರರಿಗೆ ಡಿವಿಡೆಂಡ್ ವಿತರಣೆ
Team Udayavani, Aug 14, 2020, 10:40 AM IST
ಹೊಳೆನರಸೀಪುರ: ಸಹಕಾರ ಚಳವಳಿಗಳು ಯಶಸ್ವಿ ಕಾಣದೆ ಹೋಗಿದ್ದರಿಂದ ಬೃಹತ್ ಕೈಗಾರಿಕೆಗಳು ಖಾಸಗಿ ಒಡೆತ ನಕ್ಕೆ ಹೋಗುತ್ತಿದೆ ಎಂದು ಅರಕಲಗೂಡು ಶಾಸಕ ಎ.ಟಿ.ರಾಮಸ್ವಾಮಿ ಹೇಳಿದರು.
ತಾಲೂಕಿನ ದೊಡ್ಡಕಾಡನೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆವರಣದಲ್ಲಿ ಹಳ್ಳಿ ಮೈಸೂರು ಹೋಬಳಿ ಹೇಮಾವತಿ ಸಹಕಾರಿ ಸಕ್ಕರೆ ಕಾರ್ಖಾನೆ ಷೇರುದಾರರಿಗೆ ಡಿವಿಡೆಂಡ್ ವಿತರಿಸಿ ಮಾತನಾಡಿದರು.
ಜಿಲ್ಲೆಯ ಹೇಮಾವತಿ ಸಹಕಾರಿ ಸಕ್ಕರೆ ಕಾರ್ಖಾನೆ 1973ರಲ್ಲಿ ಅಸ್ತಿಭಾರ ಹಾಕಲಾಯಿತಾದರೂ ಸಹ 1983 ರಲ್ಲಿ ಕಬ್ಬು ಅರೆಯುವ ಕೆಲಸ ಆರಂಭವಾಯಿತು. ಆದರೆ ನಂತರದ ದಿನಗಳಲ್ಲಿ ಚುನಾಯಿತ ಮಂಡಳಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸದ ಕಾರಣ ಲಾಭದಲ್ಲಿರ ಬೇಕಾದ ಕಾರ್ಖಾನೆ ಚಾಮುಂಡೇಶ್ವರಿ ಶುಗರ್ಗೆ 30 ವರ್ಷಗಳ ಗುತ್ತಿಗೆ ನೀಡ ಬೇಕಾಯಿತು ಎಂದರು.
ಕಾರ್ಖಾನೆ ಕಬ್ಬು ಅರೆಯುವುದನ್ನು ದುಪ್ಪಟು ಮಾಡುವ ಸಲುವಾಗಿ ಕಳೆದ ಐದು ವರ್ಷಗಳ ಹಿಂದೆ ಖಾಸಗಿ ಮಾಲೀಕರು ಕಾರ್ಖಾನೆಯನ್ನು ಅಭಿವೃದ್ಧಿಪಡಿಸುವ ನೆಪವೊಡ್ಡಿ ಕಬ್ಬು ಅರೆಯುವುದನ್ನು ನಿಲ್ಲಿಸಿ ಅಭಿವೃದ್ಧಿಯತ್ತಾ ಗಮನ ಹರಿಸಿದರು. ಆದರೆ ಅಭಿವೃದ್ಧಿ ಒಂದೆರಡು ವರ್ಷಗಳಲ್ಲಿ ಪೂರ್ಣಗೊಳ್ಳುವ ಭರವಸೆ ನೀಡಿದ್ದರಾದರೂ ಸಹ ಪೂರ್ಣಗೊಳ್ಳದೆ ರೈತರು ತಾವು ಬೆಳೆದ ಕಬ್ಬನ್ನು ಬೇರೆಡೆಗೆ ಸಾಗಿಸಬೇಕಾಯಿತು ಎಂದು ಬೇಸರ ವ್ಯಕ್ತಪಡಿಸಿದರು.
ಹೇಮಾವತಿ ಸಹಕಾರಿ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಮುತ್ತಿಗೆ ರಾಜೇಗೌಡ, ತಾಪಂ ಉಪಾಧ್ಯಕ್ಷ ಬಿ.ಎಸ್.ಶಿವಣ್ಣ, ಇಒ ಕೆ.ಯೋಗೇಶ್, ಜಿಲ್ಲಾ ಪಂಚಾಯಿತಿ ಎಂಜಿನಿಯರ್ ಸಿ.ಜೆ.ಪ್ರಭು, ತಾಲೂಕು ಜೆಡಿಎಸ್ ಅಧ್ಯಕ್ಷ ಎಚ್.ಎಸ್. ಪುಟ್ಟಸೋಮಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ
Lok Sabha Election: ಕಾಂಗ್ರೆಸ್ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ
Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ
Hasan: ಫೋನ್ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು
Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್ಡಿಕೆ ತಿರುಗೇಟು
MUST WATCH
ಹೊಸ ಸೇರ್ಪಡೆ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ