ಸಕಲೇಶಪುರದಲ್ಲಿ ಕುಡಿವ ನೀರಿನ ಸಮಸ್ಯೆ ಹೆಚ್ಚಳ
ಟ್ಯಾಂಕರ್ ಮುಖಾಂತರ ನೀರು ಪೂರೈಕೆಗೆ ಪುರಸಭೆಗೆ ಸಾರ್ವಜನಿಕರ ಒತ್ತಾಯ
Team Udayavani, May 13, 2019, 12:20 PM IST
ಸಕಲೇಶಪುರದ ಆಜಾದ್ ರಸ್ತೆಯಲ್ಲಿ ಖಾಸಗಿ ಟ್ಯಾಂಕರ್ ಮುಖಾಂತರ ನೀರು ತರಿಸಿಕೊಳ್ಳುತ್ತಿರುವುದು.
ಸಕಲೇಶಪುರ: ಪದೇ ಪದೇ ಕೆಟ್ಟು ಹೋಗುವ ಮೋಟಾರ್ಗಳಿಂದ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಿಗಡಾಯಿಸಿದ್ದು ಇದರಿಂದ ನಾಗರಿಕರು ಖಾಸಗಿಯವರ ಟ್ಯಾಂಕರ್ಗಳ ಮುಖಾಂತರ ನೀರು ತರಿಸಿಕೊಳ್ಳಬೇಕಾದ ಪರಿಸ್ಥಿತಿಗೆ ಸಿಲುಕಿದ್ದಾರೆ.
ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಮೋಟಾರ್ಗಳು ಆಗಾಗ ಕೆಟ್ಟು ಹೋಗುವುದರಿಂದ ನೀರು ಪೂರೈಕೆಯಲ್ಲಿ ವ್ಯತ್ಯಯ ವಾಗುತ್ತಿದ್ದು ಇದರಿಂದ ಪಟ್ಟಣದ ನಾಗರಿಕರು ತೊಂದರೆ ಅನುಭವಿಸಬೇಕಾಗಿದೆ.
ಮೂರು ದಿನಕ್ಕೊಮ್ಮೆ ನೀರು: ಪಟ್ಟಣ ವ್ಯಾಪ್ತಿಯ ಹಲವು ಬಡಾವಣೆಗಳಿಗೆ ಎರಡು ಮೂರು ದಿನಕ್ಕೊಮ್ಮೆ ನೀರು ಬಿಡಲಾಗುತ್ತಿದೆ. ಹೇಮಾವತಿ ನದಿಗೆ ಅತಿ ಹತ್ತಿರದಲ್ಲಿರುವ ಆಜಾದ್ ರಸ್ತೆ, ಕುಶಾಲನಗರ, ಅಗ್ರಹಾರ, ಬಡಾವಣೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು ಈ ಹಿನ್ನೆಲೆಯಲ್ಲಿ ದುಬಾರಿ ದರ ತೆತ್ತು ಖಾಸಗಿಯವರ ಮುಖಾಂತರ ನೀರು ತರಿಸಿಕೊಳ್ಳಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತಿದೆ. ಕೆಲವು ಹಿಂದುಳಿದ ಬಡಾವಣೆಗಳ ನಾಗರಿಕರಿಗೆ ನೀರು ಶೇಖರಣೆ ಮಾಡಿಕೊಳ್ಳುವ ವ್ಯವಸ್ಥೆ ಇಲ್ಲದ ಕಾರಣ ನಿತ್ಯ ಬಿಡುವ ನೀರನ್ನೆ ತಮ್ಮ ಕೆಲಸ ಕಾರ್ಯಗಳಿಗೆ ಆಶ್ರಯಿಸುತ್ತಿದ್ದು ಇದೀಗ ದಿನನಿತ್ಯ ನೀರು ಸಿಗದ ಕಾರಣ ಇಂತಹವರು ಪರದಾಡಬೇಕಾಗಿದೆ.
ಹಳೇ ಮೋಟಾರ್ಗೆ ಖರ್ಚು: ಹಳೇ ಮೋಟಾರ್ ರಿಪೇರಿ ಹೆಸರಿನಲ್ಲಿ ಪುರಸಭೆಯ ವರು ಲಕ್ಷಾಂತರ ಹಣ ಖರ್ಚು ಮಾಡುತ್ತಿದ್ದು ಈ ರೀತಿ ದುರಸ್ತಿ ಮಾಡುವ ಬದಲು ಹೊಸ ಮೋಟಾರ್ಗಳನ್ನೇ ಹಾಕಬಹುದಾಗಿದೆ. ನೀರು ಪೂರೈಕೆ ಮಾಡುವ ಮೋಟಾರ್ಗಳು ಪದೇ ಪದೇ ಕೈಕೊಡುವುದರಿಂದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಪುರಸಭೆಯವರು ಕನಿಷ್ಠ ಟ್ಯಾಂಕರ್ ಮುಖಾಂತರ ನೀರು ಪೂರೈಕೆ ಮಾಡಬೇಕೆಂದು ಪಟ್ಟಣದ ನಾಗರಿಕರು ಒತ್ತಾಯಿಸಿದ್ದಾರೆ.
● ಸುಧೀರ್ ಎಸ್.ಎಲ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holiday: ಹಾಸನ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ
Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ
National Highway ಅವೈಜ್ಞಾನಿಕ ಕಾಮಗಾರಿ: ಕೇಂದ್ರ ಸಚಿವ ಗಡ್ಕರಿಗೆ ಮಾಹಿತಿ
MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್ಡಿಕೆ
Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್ ವಸೂಲಿಗೆ ಬಿಡುವುದಿಲ್ಲ
MUST WATCH
ಹೊಸ ಸೇರ್ಪಡೆ
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.