
ಕುಡಿಯುವ ನೀರಿಗೆ ಹಾಹಾಕಾರ
Team Udayavani, Nov 26, 2022, 5:38 PM IST

ಆಲೂರು: ತಾಲೂಕಿನ ದೊಡ್ಡಕಣಗಾಲು ಗ್ರಾಪಂ ವ್ಯಾಪ್ತಿಯ ಉಮಾದೇವರಹಳ್ಳಿ ಗ್ರಾಮದಲ್ಲಿ ಕಳೆದ 6 ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಈ ಸಂಬಂಧ ಅಧಿಕಾರಿಗಳಿಗೆ ದೂರು ನೀಡಿದರೂ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮದ ಮಹಿಳೆಯರು ಗ್ರಾಮದಲ್ಲೇ ಪ್ರತಿಭಟನೆ ನಡೆಸಿ ಅಕ್ರೋಶ ವ್ಯಕ್ತಪಡಿಸಿದರು.
ನಿತ್ಯ ದೈನಂದಿನ ಚಟುವಟಿಕೆಗಳಿಗೆ ನೀರಿಲ್ಲದೆ ಗ್ರಾಮಸ್ಥರು ಸುಮಾರು 1 ಕಿ.ಮೀ ದೂರದ ಊರ ಹೊರ ಭಾಗದಲ್ಲಿ ರುವ ಖಾಸಗಿ ಬೋರ್ವೆಲ್ಹಾಗೂ ಕೊಳವೆ ಬಾವಿಗಳಿಂದ ಮಹಿಳೆಯರುಹಾಗೂ ವಯಸ್ಸಾದವರು ತಲೆ ಮೇಲೆ ಹೊತ್ತುತರಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಆದರೆ, ಆ ನೀರು ಕಲುಷಿತಗೊಂಡಿದ್ದು ಕುಡಿಯಲು ಯೋಗ್ಯವಾಗಿಲ್ಲ. ಕುಡಿದರೆ ಅನಾ ರೋಗ್ಯಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಆರೋಪಿಸಿದ್ದಾರೆ.
ಗ್ರಾಮದ ಮಹಿಳೆ ಪಾರ್ವತಮ್ಮ ಮಾತನಾಡಿ, ಕುಡಿಯುವ ನೀರಿಗೆ ಮೊದಲು ಆದ್ಯತೆ ನೀಡಿ ಎಂದು ಸರ್ಕಾರದ ಆದೇಶ ವಿದ್ದರೂ ಅಧಿಕಾರಿಗಳ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದಿಂದ ನಮ್ಮ ಗ್ರಾಮದಲ್ಲಿ ಕಳೆದ 6 ತಿಂಗಳಿನಿಂದ ಕುಡಿಯಲು ಮತ್ತು ಬಳಸಲು ನೀರಿಲ್ಲದೇ ಪರದಾಡುತ್ತಿದ್ದೇವೆ. ನಮಗೆ ವಯಸ್ಸಾಗಿದೆ. ಊರ ಹೊರಗಿರುವ
ಬೋರ್ವೆಲ್ನಿಂದ ನೀರನ್ನು ಕೊಡಗಳಲ್ಲಿ ಒತ್ತು ತರಲು ಕಷ್ಟವಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ನಮ್ಮ ಸಮಸ್ಯೆ ಬಗೆಹರಿಸಿಕೊಡಬೇಕು. ಇಲ್ಲದಿದ್ದರೆ ತಾಲೂಕು ಕಚೇರಿ ಮುಂದೆ ಖಾಲಿ ಕೊಡ ಹಿಡಿದು ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದರು.
ಮಹಿಳೆ ನೀಲಮ್ಮ ಮಾತನಾಡಿ, ಚುನಾಯಿತಜನಪ್ರತಿನಿಧಿಗಳು ಹಾಗೂ ಸಂಬಂಧ ಪಟ್ಟ ಹಿರಿಯ ಅಧಿಕಾರಿಗಳು ನಮ್ಮ ಗ್ರಾಮಕ್ಕೆ ಅಗತ್ಯಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ವಿಫಲರಾಗಿದ್ದಾರೆ. ಆರೇಳು ತಿಂಗಳಿಂದ ನಮಗೆ ಈ ಸಂಕಷ್ಟ ಎದುರಾಗಿದೆ. ಗ್ರಾಪಂ ಕಚೇರಿಗೆ ಬೀಗ ಹಾಕಿ ಪ್ರತಿಭಟಿಸುವು ದಾಗಿ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಗ್ರಾಮದ ಮಹಿಳೆಯರಾದ ನೀಲಮ್ಮ, ಅಕ್ಕಯ್ಯಮ್ಮ, ವೀಣಾ, ಪ್ರಮೀಳಾ ಸೇರಿದಂತೆ ಮುಂತಾದ ವರಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

38 ವರ್ಷಗಳ ನಂತರ,ನಾನು ಚಿತ್ರದ ಮುಖ್ಯ ಪೋಸ್ಟರ್ನಲ್ಲಿದ್ದೇನೆ: ಅನುಪಮ್ ಖೇರ್ ಸಂಭ್ರಮ

ಉಳ್ಳಾಲ: ನೇಣು ಬಿಗಿದ ಸ್ಥಿತಿಯಲ್ಲಿ ವಿಶೇಷಚೇತನ ಯುವತಿಯ ಶವ ಪತ್ತೆ

ಬಜೆಟ್ ನಲ್ಲಿ ಅಭಿವೃದ್ಧಿ ಹಾಗೂ ಕಲ್ಯಾಣ ಯೋಜನೆಗಳಿಗೆ ಸಮಾನ ಅವಕಾಶ: ಸುನಿಲ್ ಕುಮಾರ್

ಸಿ.ಡಿ ವಿಚಾರದಲ್ಲಿ ಡಿಕೆಶಿ ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸಿದ್ದಾರೆ: ಈಶ್ವರಪ್ಪ

ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ 5300 ಕೋಟಿ ಘೋಷಣೆ ಸ್ವಾಗತಾರ್ಹ: ಸಿಎಂ ಬೊಮ್ಮಾಯಿ