ಬರ: ಅರಸೀಕೆರೆ ತಾಲೂಕಿಗೆ ಹೆಚ್ಚುವರಿ ಅನುದಾನ ನೀಡಿ


Team Udayavani, Mar 4, 2017, 4:09 PM IST

4_42.jpg

ಹಾಸನ: ಅರಸೀಕೆರೆ ತಾಲೂಕಿನಲ್ಲಿ ಬರ ಪರಿಸ್ಥಿತಿ ತೀವ್ರವಾಗಿದೆ. ಜಾನುವಾರುಗಳ ಮೇವು ಪೂರೈಕೆಗೆ  ಮೇವು ಬ್ಯಾಂಕ್‌ ತೆರೆಯಬೇಕು ಹಾಗೂ ಅರಸೀಕೆರೆ ತಾಲೂಕಿನ ಬರಪರಿಹಾರ ಕಾರ್ಯಗಳಿಗೆ  ಹೆಚ್ಚು ಅನುದಾನ ನೀಡಬೇಕು ಎಂದು ಆರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರು ಆಗ್ರಹಪಡಿಸಿದರು.

ಜಿಲ್ಲಾ ಪಂಚಾಯ್ತಿ ಹೊಯ್ಸಳ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ತ್ತೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅರಸೀಕೆರೆ ತಾಲೂಕಿನ ಬರಪಸ್ಥಿತಿಯ ವಿವರ ನೀಡಿದ  ಶಿವಲಿಂಗೇಗೌಡ ಅವರು, ಗೋಶಾಲೆಗಳಲ್ಲಿ  ಜಾನುವಾರುಗಳಿಗೆ ಕಾಲು ಬಾಯಿ  ಜ್ವರ ಕಾಣಿಸಿಕೊಂಡಿದ್ದರಿಂದ  ತಾಲೂಕಿನಲ್ಲಿ ತೆರೆದಿದ್ದ ಗೋಶಾಲೆಗಳನ್ನು ಮುಚ್ಚಲಾಗಿದೆ.

ಮೇವು ಬ್ಯಾಂಕ್‌ಗಳನ್ನು ತೆರೆದು ಜಾನುವಾರುಗಳಿಗೆ  ಮೇವು ಪೂರೈಸುವ ಭರವಸೆ ನೀಡಲಾಗಿತ್ತು. ಆದರೆ ಈವರೆಗೆ ಮೇವು ಬ್ಯಾಂಕ್‌ ತೆರೆದಿಲ್ಲ. ಅರಸೀಕೆರೆ ತಾಲೂಕಿನಲ್ಲಿ ಬರ ಪರಿಸ್ಥಿತಿ ತೀವ್ರವಾಗಿರುವುದರಿಂದ  ಜಿಲ್ಲೆಯ  ಬರ ಪೀಡಿತ ತಾಲೂಕುಗಳಂತೆ ಅರಸೀಕೆರೆ ತಾಲೂಕಿಗೆ ಅನುದಾನ ನೀಡಿದರೆ ಬರ ನಿರ್ವಹಣೆ ಕಷ್ಟ ವಾಗುತ್ತದೆ. ಆದ್ದರಿಂದ ಅರಸೀಕೆರೆ ತಾಲೂಕಿಗೆ ಹೆಚ್ಚಿನ ಅನುದಾನ ನೀಡಬೇಕು.

ಕನಿಷ್ಟ 50 ಟನ್‌ ಮೇವನ್ನು ಶೀಘ್ರವಾಗಿ ಸಂಗ್ರಹಿಸಿ ಮೇವು  ಬ್ಯಾಂಕ್‌ ತೆರೆಯಬೇಕೆಂದು ಒತ್ತಾಯಿಸಿದರು. ಶಾಸಕರ ಆಗ್ರಹಕ್ಕೆ  ಸ್ಪಂದಿಸಿದ  ಸಚಿವ ಎ.ಮಂಜು ಅವರು,  ಈ ಬಗ್ಗೆ  ಮುಖ್ಯಮಂತ್ರಿಗಳ ಬಳಿ ಚರ್ಚಿಸಿ ಅರಸೀಕೆರೆ ತಾಲೂಕಿಗೆ ಮೇವಿಗಾಗಿ ಹೆಚ್ಚುವರಿ ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಶಾಸಕರುಗಳಾದ ಎಚ್‌.ಎಸ್‌.ಪ್ರಕಾಶ್‌, ಎಚ್‌.ಕೆ.ಕುಮಾರಸ್ವಾಮಿ ಮತ್ತು ಸಿ.ಎನ್‌.ಬಾಲಕೃಷ್ಣ ಅವರೂ  ತಮ್ಮ ಕ್ಷೇತ್ರಗಳಲ್ಲಿನ ಬರ ಪರಿಸ್ಥಿತಿ, ಕುಡಿವ ನೀರಿನ ಸಮಸ್ಯೆಗಳನ್ನು ಸಭೆಯ ಮುಂದಿಟ್ಟು ಹೆಚ್ಚಿನ ಅನುದಾನ ಒದಗಿಸಬೇಕು. ಇದೇ ವೇಳೆ ಈ ಹಿಂದೆ ರೈತರಿಗೆ ಬೆಳೆ ವಿಮೆ ಪರಿಹಾರ ಸರಿಯಾಗಿ ದೊರೆತಿಲ್ಲ.  ಜಿಲ್ಲೆಯಲ್ಲಿ  ಈ ವರ್ಷವೂ  ಹಿಂಗಾರು ಮತ್ತು ಮುಂಗಾರು ಮಳೆ ಸಂಪೂರ್ಣ ವಿಫ‌ಲವಾಗಿದೆ.

ಬೆಳೆ ಪರಿಹಾರವನ್ನು  ಸಕಾಲದಲ್ಲಿ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕರು  ಒಕ್ಕೊರಲು ಒತ್ತಾಯ ಮಂಡಿಸಿದರು. ಶಾಸಕರಾದ ಎಚ್‌.ಎಸ್‌.ಪ್ರಕಾಶ್‌ ಮಾತನಾಡಿ,  ಕೊಳವೆ ಬಾವಿಗಳನ್ನು ಕೊರೆಯಲು ಈ ಹಿಂದೆ  30 ರಿಂದ 40 ಸಾವಿರ ರೂ.ಅಂದಾಜಿಸಲಾಗಿತ್ತು. ಆದರೆ ಈಗ  300 ಅಡಿಗಳ ಬದಲು 800 ಅಡಿ ಕೊರೆದರೂ ನೀರು ಸಿಗದೆ ಬಿಲ್ಲಿನ ಮೊತ್ತ ಹೆಚ್ಚುತ್ತಿದೆ. ಕೊಳವೆ ಬಾವಿಗಳನ್ನು ಹೆಚ್ಚು ಆಳಕ್ಕೆ  ಕೊರೆದ  ವ್ಯತ್ಯಾಸದ ಮೊತ್ತವನ್ನು ಪಾವತಿ ಸಬೇಕು ಎಂದು  ಒತ್ತಾಯಿಸಿದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.