ಬರ ನಿರ್ವಹಣೆ: ತ್ವರಿತ ಕ್ರಮಕ್ಕೆ ಬಿಜೆಪಿ ಮನವಿ


Team Udayavani, May 17, 2019, 2:14 PM IST

has-2

ಅರಸೀಕೆರೆ: ತಾಲೂಕಿನಲ್ಲಿ ತೀವ್ರ ಬರಗಾಲವಿದ್ದು, ಜಾನುವಾರುಗಳಿಗೆ ನೀರು, ಮೇವಿನ ವ್ಯವಸ್ಥೆ ಕಲ್ಪಿಸುವಂತೆ ಮಾಜಿ ಶಾಸಕ ಎ.ಎಸ್‌.ಬಸವರಾಜ್‌ ಹಾಗೂ ಬಿಜೆಪಿ ಗ್ರಾಮೀಣ ಮಂಡಲದ ಅಧ್ಯಕ್ಷ ಜಿ.ವಿ.ಟಿ. ಬಸವರಾಜು ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ತಹಶೀಲ್ದಾರ್‌ ಸಂತೋಷ್‌ಕುಮಾರ್‌ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

ಬರಿದಾಗಿರುವ ಕೆರೆ, ಕಟ್ಟೆಗಳು: ಈ ಸಂದರ್ಭದಲ್ಲಿ ಜಿವಿಟಿ ಬಸವರಾಜ್‌ ಮಾತನಾಡಿ, ಸತತವಾಗಿ ಬರಗಾಲಕ್ಕೆ ತುತ್ತಾಗುತ್ತಾ ಬಂದಿರುವ ತಾಲೂಕಿನಲ್ಲಿ ಕೆರೆಕಟ್ಟೆಗಳು ಬರಿದಾಗಿ ದಶಕಗಳೇ ಕಳೆದಿವೆ. ಮತ್ತೂಂದೆಡೆ ಮಳೆಯ ಕೊರತೆಯಿಂದಾಗಿ ಜಾನುವಾರುಗಳಿಗೆ ನೀರು, ಮೇವು ಸಿಗದಂತಾಗಿದ್ದು ರೈತರು ತಾವು ಪ್ರೀತಿಯಿಂದ ಸಾಕಿ ಬೆಳೆಸಿದ ಹಸು ಕರುಗಳಿಗೆ ನೀರು ಮತ್ತು ಮೇವು ಪೂರೈಸಲು ಸಾಧ್ಯವಾಗದೇ ಪರಿತಪಿಸುತ್ತಿದ್ದರಿಂದ ಜಾನುವಾರುಗಳು ಕಸಾಯಿಖಾನೆ ಪಾಲಾಗುತ್ತಿವೆ. ಪರಿಸ್ಥಿತಿ ಹೀಗಿದ್ದರು ಜನಪ್ರತಿನಿಧಿಗಳು ಹಾಗೂ ತಾಲೂಕು ಆಡಳಿತ ಕೈಕಟ್ಟಿ ಕುಳಿತಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.

ನೀರಿಗೆ ಪರದಾಟ: ಮಾಜಿ ಶಾಸಕ ಎ.ಎಸ್‌.ಬಸವರಾಜ್‌ ಮಾತನಾಡಿ, ಗ್ರಾಮೀಣ ಭಾಗದ ಜನತೆಗೆ ನೀರು ಹಾಗೂ ಜಾನುವಾರುಗಳಿಗೆ ಗೋಶಾಲೆ ಹಾಗೂ ಮೇವು ಬ್ಯಾಂಕ್‌ ತೆರೆಯುವಂತೆ ಮನವಿ ಮಾಡಿದರು.

ತಾಲೂಕು ಆಡಳಿತ ಬರ ಪರಿಸ್ಥಿತಿ ನಿರ್ವಹಣೆಗೆ ಮೀನ ಮೇಷ ಎಣಿಸಿದರೆ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಎಪಿಎಂಸಿ ಮಾಜಿ ಉಪಾಧ್ಯಕ್ಷ ಶಶಿಕುಮಾರ್‌, ರೈತ ಮೋರ್ಚಾ ಅಧ್ಯಕ್ಷ ಸ್ವಾಮಿ, ಎಸ್ಸಿ ಮೋರ್ಚಾ ಅಧ್ಯಕ್ಷ ಉಮೇಶ್‌ ಬೋವಿ, ನಗರ ಬಿಜೆಪಿ ಉಪಾಧ್ಯಕ್ಷ ಚಂದ್ರು ಉಪಸ್ಥಿತರಿದ್ದರು.

ಬರ ನಿರ್ವಹಣೆಗೆ ಸಿದ್ಧತೆ

ಈ ಕುರಿತು ಪ್ರತಿಕ್ರಿಯಿಸಿದ ತಹಶೀಲ್ದಾರ್‌ ಸಂತೋಷ್‌ ಕುಮಾರ್‌, ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ತಾಲೂಕಿನ ಬರ ಪರಿಸ್ಥಿತಿ ಯನ್ನು ನಿಬಾಯಿಸಲು ತಾಲೂಕು ಆಡಳಿತ ಈಗಾಗಲೇ ಕಾರ್ಯೋನ್ಮುಖವಾಗಿದೆ. ಈ ಸಂಬಂಧ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಕರೆದು ಮಾಹಿತಿ ಸಂಗ್ರಹಿಸಿದ್ದು, ಸಮ ರೋಪಾದಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗು ತ್ತಿದೆ. ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ಹಾಗೂ ಖಾಸಗಿಯವರ ಕೊಳವೆ ಬಾವಿಯಿಂದ ನೀರು ಖರೀದಿಸಿ ಪೂರೈಸಲಾಗುತ್ತಿದೆ. ಅದೇ ರೀತಿ ಜಾನುವಾರುಗಳಿಗೆ ಮೇವು ಒದಗಿಸಲು ಹೋಬಳಿವಾರು ಮೇವು ಬ್ಯಾಂಕ್‌ ತೆರೆಯಲು ಸ್ಥಳವನ್ನು ನಿಗದಿಗೊಳಿಸಲಾಗಿದೆ ಎಂದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.