ಬರ ನಿರ್ವಹಣೆ: ತ್ವರಿತ ಕ್ರಮಕ್ಕೆ ಬಿಜೆಪಿ ಮನವಿ
Team Udayavani, May 17, 2019, 2:14 PM IST
ಅರಸೀಕೆರೆ: ತಾಲೂಕಿನಲ್ಲಿ ತೀವ್ರ ಬರಗಾಲವಿದ್ದು, ಜಾನುವಾರುಗಳಿಗೆ ನೀರು, ಮೇವಿನ ವ್ಯವಸ್ಥೆ ಕಲ್ಪಿಸುವಂತೆ ಮಾಜಿ ಶಾಸಕ ಎ.ಎಸ್.ಬಸವರಾಜ್ ಹಾಗೂ ಬಿಜೆಪಿ ಗ್ರಾಮೀಣ ಮಂಡಲದ ಅಧ್ಯಕ್ಷ ಜಿ.ವಿ.ಟಿ. ಬಸವರಾಜು ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ತಹಶೀಲ್ದಾರ್ ಸಂತೋಷ್ಕುಮಾರ್ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
ಬರಿದಾಗಿರುವ ಕೆರೆ, ಕಟ್ಟೆಗಳು: ಈ ಸಂದರ್ಭದಲ್ಲಿ ಜಿವಿಟಿ ಬಸವರಾಜ್ ಮಾತನಾಡಿ, ಸತತವಾಗಿ ಬರಗಾಲಕ್ಕೆ ತುತ್ತಾಗುತ್ತಾ ಬಂದಿರುವ ತಾಲೂಕಿನಲ್ಲಿ ಕೆರೆಕಟ್ಟೆಗಳು ಬರಿದಾಗಿ ದಶಕಗಳೇ ಕಳೆದಿವೆ. ಮತ್ತೂಂದೆಡೆ ಮಳೆಯ ಕೊರತೆಯಿಂದಾಗಿ ಜಾನುವಾರುಗಳಿಗೆ ನೀರು, ಮೇವು ಸಿಗದಂತಾಗಿದ್ದು ರೈತರು ತಾವು ಪ್ರೀತಿಯಿಂದ ಸಾಕಿ ಬೆಳೆಸಿದ ಹಸು ಕರುಗಳಿಗೆ ನೀರು ಮತ್ತು ಮೇವು ಪೂರೈಸಲು ಸಾಧ್ಯವಾಗದೇ ಪರಿತಪಿಸುತ್ತಿದ್ದರಿಂದ ಜಾನುವಾರುಗಳು ಕಸಾಯಿಖಾನೆ ಪಾಲಾಗುತ್ತಿವೆ. ಪರಿಸ್ಥಿತಿ ಹೀಗಿದ್ದರು ಜನಪ್ರತಿನಿಧಿಗಳು ಹಾಗೂ ತಾಲೂಕು ಆಡಳಿತ ಕೈಕಟ್ಟಿ ಕುಳಿತಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.
ನೀರಿಗೆ ಪರದಾಟ: ಮಾಜಿ ಶಾಸಕ ಎ.ಎಸ್.ಬಸವರಾಜ್ ಮಾತನಾಡಿ, ಗ್ರಾಮೀಣ ಭಾಗದ ಜನತೆಗೆ ನೀರು ಹಾಗೂ ಜಾನುವಾರುಗಳಿಗೆ ಗೋಶಾಲೆ ಹಾಗೂ ಮೇವು ಬ್ಯಾಂಕ್ ತೆರೆಯುವಂತೆ ಮನವಿ ಮಾಡಿದರು.
ತಾಲೂಕು ಆಡಳಿತ ಬರ ಪರಿಸ್ಥಿತಿ ನಿರ್ವಹಣೆಗೆ ಮೀನ ಮೇಷ ಎಣಿಸಿದರೆ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಎಪಿಎಂಸಿ ಮಾಜಿ ಉಪಾಧ್ಯಕ್ಷ ಶಶಿಕುಮಾರ್, ರೈತ ಮೋರ್ಚಾ ಅಧ್ಯಕ್ಷ ಸ್ವಾಮಿ, ಎಸ್ಸಿ ಮೋರ್ಚಾ ಅಧ್ಯಕ್ಷ ಉಮೇಶ್ ಬೋವಿ, ನಗರ ಬಿಜೆಪಿ ಉಪಾಧ್ಯಕ್ಷ ಚಂದ್ರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ