ಕುಸಿಯುತ್ತದೆ ದ್ವಾರಸಮುದ್ರ ಕೆರೆ ಏರಿ

12 ವರ್ಷ ನಂತರ ತುಂಬಿದ ಕೆರೆ ನೀರು ರಕ್ಷಿಸಲು ಶೀಘ್ರ ಏರಿ ದುರಸ್ತಿ ಮಾಡಿ

Team Udayavani, Oct 30, 2020, 4:48 PM IST

ಕುಸಿಯುತ್ತದೆ ದ್ವಾರಸಮುದ್ರ ಕೆರೆ ಏರಿ

ಹಳೇಬೀಡು: ರಾಷ್ಟ್ರಕೂಟರ ಕಾಲದಲ್ಲಿ ನಿರ್ಮಿಸಲಾದ ದ್ವಾರಸಮುದ್ರ ಕೆರೆ ಏರಿ ಹಲವು ಕಡೆ ಕುಸಿದಿದ್ದು, ಅಕ್ಕಪಕ್ಕದ ಗ್ರಾಮಗಳನಿವಾಸಿಗಳು, ರೈತರ ಆತಂಕಕ್ಕೆ ಕಾರಣವಾಗಿದೆ.

ದ್ವಾರಸಮುದ್ರ ಕೆರೆ 1000 ಹೆಕ್ಟೇರ್‌ ಪ್ರದೇಶದಲ್ಲಿದ್ದು, 12 ವರ್ಷ ನಂತರ ಭರ್ತಿ ಆಗಿದೆ. ಇದರಿಂದ ಹಳೇಬೀಡು, ಮಾದಿಹಳ್ಳಿ, ಜಾವಗಲ್‌ ಹೋಬಳಿ ಜನರ ಮೊಗದಲ್ಲಿ ಸಂತಸ ಮೂಡಿಸಿದೆ. ಇಂತಹ ಸಮಯದಲ್ಲಿ ಕೆರೆ ಏರಿ ಎರಡು ಮೂರು ಕಡೆ ಬಿರುಕು ಬಿಟ್ಟು, ಕುಸಿದಿದೆ. ಹೀಗಾಗಿ ಏರಿ ಮೇಲಿನ ರಸ್ತೆಯಲ್ಲಿ ವಾಹನ ಸವಾರರು ಪ್ರಾಣ ಭಯದಲ್ಲಿ ಸಂಚರಿಸಬೇಕಿದೆ.

ನೀರಿನ ಒತ್ತಡ ಹೆಚ್ಚಳ: ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ಮಾಹಿತಿ ಪ್ರಕಾರ ದ್ವಾರಸಮುದ್ರ ಕೆರೆ 1 ಟಿಎಂಸಿ ನೀರು ಶೇಖರಣೆ ಸಾಮರ್ಥ್ಯ ಹೊಂದಿದೆ. ಏತ ನೀರಾ ವರಿ ಯೋಜನೆ ನೀರು, ರಾಜಗೆರೆ, ಚೀಲ ನಾಯ್ಕನಹಳ್ಳಿ, ಮಲ್ಲಾಪುರ ಮೂರು ಕಡೆ ಯಿಂದ ಭಾರೀ ಪ್ರಮಾಣದಲ್ಲಿ ಕೆರೆಗೆ ನೀರು ಹರಿದು ಬರುತ್ತಿದೆ. ನೀರಿನ ಒತ್ತಡ ಹೆಚ್ಚಾಗಿ ಏರಿ ಕುಸಿಯುತ್ತಿದೆ ಎನ್ನಲಾಗಿದೆ.

ಜಿನುಗುತ್ತಿರುವ ಕೆರೆ ನೀರು: 12 ವರ್ಷ ನಂತರ ಕೆರೆ ಭರ್ತಿ ಆಗಿದೆ. ಏರಿ ಒಡೆದರೆ ನೂರಾರು ಎಕರೆಯಲ್ಲಿ ಬೆಳೆದಿರುವ ತೆಂಗು, ಅಡಕೆ, ಜೋಳದ ಬೆಳೆ ಹಾನಿಯಾಗುತ್ತದೆ. ಕೆರೆ ತಪ್ಪಲಿನ ಬೂದಿಗುಂಡಿಯಲ್ಲಿ ವಾಸಿಸುವ 200 ಕುಟುಂಬಗಳ ಬದುಕು ಕೊಚ್ಚಿ ಹೋಗುತ್ತದೆ. ಹಾಗೆಯೇ ಹಳೇಬೀಡಿನಿಂದ ಹಾಸನಕ್ಕೆ ಹೋಗುವ ಕೆರೆ ಏರಿ ರಸ್ತೆಯ ಎಡಭಾಗದ ಗದ್ದೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ನೀರು ಜಿನುಗುತ್ತಿದ್ದು, ಸಣ್ಣ ನೀರಾವರಿ ಇಲಾಖೆ ಈ ಬಗ್ಗೆ ಗಮನ ಹರಿಸಬೇಕು.

ಅಪಘಾತಕ್ಕೂ ದಾರಿ: ಹಳೇಬೀಡು ವಿಶ್ವ ಪ್ರಸಿದ್ಧ ಪ್ರೇಕ್ಷಣೀಯ ಸ್ಥಳ. ಇಲ್ಲಿನ ಹೊಯ್ಸಳೇಶ್ವರ ದೇಗುಲ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ, ಹಾಗೆಯೇ ಗೋಣಿಸೋಮನ ಹಳ್ಳಿ, ಸೊಪ್ಪಿನಹಳ್ಳಿ ಘಟ್ಟದಹಳ್ಳಿ, ಸಾಣೇನಹಳ್ಳಿ, ಗಂಗೂರು, ರಾಜಗೆರೆ ತಟ್ಟೆಹಳ್ಳಿ, ರಾಜಗೆರೆ, ಕ್ಯಾತನಕೆರೆ ಸೇರಿ ಹತ್ತಾರು ಹಳ್ಳಿಯ ಜನರು ಹಳೇಬೀಡಿಗೆ ಬರಲು ಈ ಏರಿ ಮೇಲಿನ ರಸ್ತೆ ಅವಲಂಬಿಸಿದ್ದಾರೆ. ಇಂತಹ ಕೆರೆ ಏರಿ ಮೇಲಿನರಸ್ತೆ ಕೆಲವು ಕಡೆ ಅರ್ಧಭಾಗ ಕುಸಿದಿರುವು ದರಿಂದ ವಾಹನ ಚಾಲಕರ ಆತಂಕವನ್ನು ಹೆಚ್ಚಿಸಿದೆ. ಕುಸಿದಿರುವ ಜಾಗದಲ್ಲಿ ಓವರ್‌ ಟೇಕ್‌ ಮಾಡಲು ಮುಂದಾದರೆ ಅಪಘಾತಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಿದೆ.

ಕೆರೆ ಭರ್ತಿ ಆಗಿ ಕೋಡಿ ಹರಿಯುತ್ತಿದೆ. ಇಂತಹ ಸಮಯದಲ್ಲಿ ಏರಿ ಕುಸಿಯುತ್ತಿರುವುದು ಆತಂಕಕಾರಿ ವಿಷಯ. ಒಂದು ವೇಳೆ ಏರಿ ಒಡೆದರೆ ಮೊದಲು ಸಮಸ್ಯೆ ಎದುರಾಗುವುದು ಬೂದಿಗುಂಡಿ ನಿವಾಸಿಗಳಿಗೆ. ಕೂಡಲೇ ಕುಸಿಯುತ್ತಿರುವ ಕೆರೆ ಏರಿ ದುರಸ್ತಿ ಮಾಡಬೇಕಿದೆ. ದೇವರಾಜು, ಬೂದಿಗುಂಡಿ ನಿವಾಸಿ.

ಕೆರೆ ಏರಿ ಕುಸಿಯುತ್ತಿರುವುದು ಆಘಾತಕಾರಿ ವಿಷಯ. ಇದನ್ನು ಜಿಲ್ಲಾ ಉಸ್ತುವಾರಿ ಸಚಿವಗೋಪಾಲಯ್ಯ ಗಮನಕ್ಕೂ ತಂದು, ಶೀಘ್ರ ಕೆರೆ ಏರಿ ದುರಸ್ತಿಗೆ ಒತ್ತಡ ಹಾಕುತ್ತೇವೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು. ಇಲ್ಲವಾದ್ರೆ ಮುಂದೆ ಆಗುವ ಅನಾಹುತಕ್ಕೆ ಅವರೇ ಹೊಣೆ ಹೊರಬೇಕು. ಹುಲ್ಲಳ್ಳಿ ಸುರೇಶ್‌, ಬಿಜೆಪಿ ಜಿಲ್ಲಾಧ್ಯಕ್ಷ

ಕೆರೆ ಏರಿ ಕುಸಿದಿರುವುದನ್ನು ಖುದ್ದು ಪರಿಶೀಲನೆ ನಡೆಸಿದ್ದೇನೆ. ಸಣ್ಣ ನೀರಾವರಿಇಲಾಖೆಯಿಂದ ಬಿಡುಗಡೆ ಆಗಿದ್ದ 2 ಕೋಟಿ ರೂ. ಕೋವಿಡ್ ಹಾಗೂ ತಾಂತ್ರಿಕ ಕಾರಣದಿಂದ ವಾಪಸ್‌ ಹೋಗಿದೆ. ಪ್ರಸಕ್ತ ಸಾಲಿನಲ್ಲಿ ಬಿಡುಗಡೆ ಮಾಡಿಸಿ, ದುರಸ್ತಿ ಕಾರ್ಯ ಮಾಡುತ್ತೇನೆ. ಕೆ.ಎಸ್‌.ಲಿಂಗೇಶ್‌, ಶಾಸಕ.

 

ಡಾ.ಎಂ.ಸಿ.ಕುಮಾರ್‌

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.