ಪ್ರವಾಸಿಗರನ್ನು ಸೆಳೆದ ದ್ವಾರಸಮುದ್ರ ಕೆರೆ


Team Udayavani, Aug 8, 2022, 5:21 PM IST

ಪ್ರವಾಸಿಗರನ್ನು ಸೆಳೆದ ದ್ವಾರಸಮುದ್ರ ಕೆರೆ

 ಹಳೇಬೀಡು: ಹೊಯ್ಸಳರ ಕಾಲದ ಇತಿಹಾಸ ಪ್ರಸಿದ್ಧ ದ್ವಾರಸಮುದ್ರ ಕರೆ “ಭರ್ತಿಯಾಗಿದ್ದು, ಈ ವರ್ಷದಲ್ಲಿ ಎರಡನೇ ಬಾರಿ ಧಾರಕಾರವಾಗಿ ಸುರಿದ ಮಳೆಯಿಂದ ಹಳ್ಳ- ಕೊಳ್ಳಗಳಿಂದ ಕೆರೆಗೆ ಹರಿದು ಬಂದು ಕೋಡಿ ಬಿದ್ದು ಹೋಬಳಿ ಜನತೆ ಮತ್ತು ರೈತರ ಮುಖದಲ್ಲಿ ಸಂತಸ ಮೂಡಿಸಿದೆ.

ಈ ಕೆರೆ ಸಮುದ್ರಾಕಾರ ರೀತಿಯಲ್ಲಿದ್ದು ಕೆರೆ ವಿಸ್ತಿರ್ಣ ಸುಮಾರು 850 ಹೆಕ್ಟೇರ್‌ ವ್ಯಾಪಿಸಿದೆ. 14 ವರ್ಷಗಳ ನಂತರ ಎರಡನೇ ಬಾರಿ ದ್ವಾರಸಮುದ್ರ ಕರೆ ಒಡಲು ತುಂಬಿದ್ದು ಭಾರೀ ಮಳೆ ನಡುವೆಯೂ ಪ್ರವಾಸಿಗರನ್ನು ಸೆಳೆದಿದೆ. ಇಲ್ಲಿ ಬೋಟಿಂಗ್‌ ವ್ಯವಸ್ಥೆ, ಕೆರೆ ಮಧ್ಯದಲ್ಲಿ ಒಂದು ಸುಂದರ ದ್ವೀಪ, ಅದರಲ್ಲಿ ಹಲವಾರು ದೇಶಗಳ ಪಕ್ಷಿ ಬಂದು ಮೊಟ್ಟೆಗಳನ್ನು ಇಟ್ಟು ಅದರ ರಕ್ಷಣೆ ಮಾಡುತ್ತದೆ. ಹಳೇಬೀಡು ಗ್ರಾಮದ ಮಳೆಯರು ಕೋಡಿ ಸ್ಥಳದಲ್ಲಿರುವ ಬಸವಣ್ಣನ ಮೂರ್ತಿಗೆ ಪೂಜೆ ಸಲ್ಲಿಸಿ ಗಂಗೆ ಪೂಜೆ ಮಾಡಿ ವರುಣ ದೇವನಿಗೆ ನಮಸ್ಕಾರ ಸಲ್ಲಿಸಿ, ಆನಂತರ ಕೆರೆ ಕೋಡಿ ನೀರಿನಲ್ಲಿ ಮಿಂದೆದ್ದು, ಕುಣಿದು ಕುಪ್ಪಳಿಸಿ ಸಂತೋಷ ಪಡುತ್ತಿರುವ ದೃಶ್ಯ ಮನಮೋಹಕವಾಗಿದೆ.

ರೈತರಲ್ಲಿ ಮಂದಹಾಸ: ಹೋಬಳಿಗಳ ಜೀವನಾಡಿ ದ್ವಾರಸಮುದ್ರ: ಸಾವಿರಾರು ಮಂದಿ ಅನ್ನದಾತ ರೈತರ ಜೀವನದಿ ದ್ವಾರಸಮುದ್ರಕೆರೆ ದ್ವಾರಸಮುದ್ರ ಕೆರೆ ತುಂಬಿ ರುವುದರಿಂದ ಸುಮಾರು 35 ರಿಂದ 45 ಕಿ. ಮೀ.ವ್ಯಾಪ್ತಿಯ ನೂರಾರು ಗ್ರಾಮಗಳ ಬೋರ್‌ವೆಲ್‌ ಬಾಗಳ ಅಂತರ್ಜಲ ಹೆಚ್ಚುತ್ತದೆ. ಇದರಿಂದ ರೈತರು ವರ್ಷಕ್ಕೆ ಎರಡರಿಂದ ಮೂರು ಬೆಳೆಗಳನ್ನು ತೆಗೆದು ಸಮೃದ್ಧ ಜೀವನ ಸಾಗಿಸುತ್ತಾರೆ. ಆದರೆ ಕಳೆದ 14 ವರ್ಷಗಳಿಂದ ಈ ಜಾಗದಲ್ಲಿ ಸರಿಯಾಗಿ ಮುಂಗಾರು ಮತ್ತು ಹಿಂಗಾರು ಮಳೆಯಾಗದೇ ರೈತರ ಜೀವನ ಸಂಕಷ್ಟಕ್ಕೆ ಸಿಲುಕಿತ್ತು. ಬೆಳೆ ಕೂಡ ಬೆಳೆಯಲಾಗದೇ ರೈತರ ಬದುಕು ಅಂತ್ರವಾಗಿತ್ತು. ಇಂತಹ ಸಂಕಷ್ಟದ ಸ್ಥಿತಿಯಲ್ಲಿ ಈ ಬಾರಿ ಉತ್ತಮ ಮಳೆಯಿಂದಾಗಿ ದ್ವಾರಸಮುದ್ರ ಕೆರೆಗೆ ನೀರು ಹರಿದು ಬಂದುಕೆರೆ ತುಂಬಿರು ವುದು ರೈತರ ಮೊಗದಲ್ಲಿ ಖುಷಿ ಮೂಡಿದೆ.

ಪ್ರವಾಸಿಗರ ಆಕರ್ಷಣೀಯ ಕೇಂದ್ರ: ದಿನಂಪ್ರತಿ ಹಳೇಬೀಡಿನ ವಿಶ್ವ ಪ್ರಸಿದ್ಧ ಹೊಯ್ಸಳೇಶ್ವರ ದೇವಾ ಲಯಕ್ಕೆ ಸಾರಾರು ಪ್ರವಾಸಿಗರು ಆಗಮಿಸುತ್ತಾರೆ. ದೇವಾಲಯಕ್ಕೆ ಹೊಂದಿ ಕೊಂಡತ್ತಿರುವ ದ್ವಾರ ಸಮುದ್ರ ಕೆರೆ ಭರ್ತಿಯಾಗಿ ಕೋಡಿ ಹರಿಯುತ್ತಿದೆ. ಪ್ರವಾಸಿಗರಿಗೆ ಅದರಲ್ಲೂ ಮಕ್ಕಳಿಗೆ ಮನೋರಂಜನಾ ತಾಣವಾಗಿದೆ. ನೂರಾರು ಮಕ್ಕಳು, ಪ್ರವಾಸಿಗರು ನೀರಿನಲ್ಲಿ ಆಟವಾಡಿ ಮನರಂಜನೆ ಪಡೆಯುತ್ತಿರು ವುದು ಮತ್ತಷ್ಟು ಪ್ರವಾಸಿಗರನ್ನು ಆರ್ಕಸುತ್ತಿದೆ.

ರಣಘಟ್ಟ ಯೋಜನೆ ಜಾರಿ: ಹೊಯ್ಸಳರ ಕಾಲದ ರಾಜ ವಿಷ್ಣುವರ್ದನನ ಸಮಯದಲ್ಲಿ ರಣಘಟ್ಟ ಒಡ್ಡಿನ ಮುಖಾಂತರ ಹಳೇಬೀಡು ದ್ವಾರಸಮುದ್ರ ಕೆರೆಗೆ ನೀರು ಹರಿಸುತ್ತಿರುವುದ್ದಕ್ಕೆ ಪುರಾವೆಗಳು ಇದೆ. ಇದೇ ರಣಘಟ್ಟ ಒಡ್ಡಿನ ಮುಖಾಂತರ ಶಾಶ್ವತ ನೀರಾವರಿ ಯೋಜನೆ ಮೂಲಕ ದ್ವಾರಸಮುದ್ರ ಕೆರೆಗೆ ನೀರು ಹರಿಸಲು ಹಲವು ಸ್ವಾಮೀಜಿಗಳ ಒಳಗೊಂಡಂತೆ ರೈತಸಂಘಗಗಳು ನೀರಿಗಾಗಿ ಹೋರಾಟ ಮಾಡಿಕೊಂಡು ಬಂದಿದ್ದವು.

ಇದರ ಪರಿಣಾಮ ಎಂಬಂತೆ ಕಳೆದ ವರ್ಷ ಕೈ-ದಳ ಸಮಿಶ್ರ ಸರ್ಕಾರದಲ್ಲಿ ಮಾನ್ಯ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಸ್ಥಳೀಯ ಶಾಸಕ ಕೆ.ಎಸ್‌.ಲಿಂಗೇಶ್‌ ಒತ್ತಡ, ಹಲವು ಸ್ವಾಮೀಜಿಗಳ ಹೋರಾಟಕ್ಕೆ ಮಣಿದು ತಮ್ಮ ಸರ್ಕಾ ರದ ಅವಧಿಯ ಬಜೆಟ್‌ನಲ್ಲಿ ಸುಮಾರು 100 ಕೋಟಿ ಹಣವನ್ನು ರಣಘಟ್ಟ ಯೋಜನೆ ಮೀಸಲಿಟ್ಟರು. ಆದರೆ ಬದಲಾದ ರಾಜಕೀಯ ಸನ್ನಿವೇಶಗಳಿಂದ ಸಮಿಶ್ರ ಸರ್ಕಾರ ಬಿದ್ದು ಹೋದ ಮೇಲೆ ಹಣ ಬಿಡು ಗಡೆಯ ಭಾಗ್ಯ ದೊರೆಯಲಿಲ್ಲ. ಆದರೆ ಬಿಜೆಪಿ ಸರ್ಕಾರ ಬಂದ ಮೇಲೆ ಮಾಜಿ ಸಿಎಂ ಬಿಎಸ್‌ವೈ, ಕುಮಾರಸ್ವಾಮಿ ಬಜೆಟ್‌ನಲ್ಲಿ ಮೀಸಲಿಟ್ಟ ಹಣಕ್ಕೆ ಅನುಮೋದನೆ ನೀಡಿದರು.

ಇದರಿಂದ ರಣಘಟ್ಟ ಶಾಶ್ವತ ನೀರಾವರಿ ಯೋಜನೆ ಜೀವ ಪಡೆಯಿತು. ಈಗಾಗಲೇ ಕಾಮಗಾರಿ ಪ್ರಾರಂಭವಾಗಿದ್ದು, ಸುಮಾರು 200 ಮೀಟರ್‌ ಸುರಂಗ ಮಾರ್ಗ ನಿರ್ಮಾಣ ಕಾಮ ಗಾರಿ ಮುಗಿದಿದೆ. 3 ಕಿ.ಮೀ. ಸುರಂಗ ಮಾರ್ಗದ ಕಾಮಗಾರಿ ಆಗಬೇಕಿದ್ದು, 2 ವರ್ಷಗಳಲ್ಲಿ ಕಾಮಗಾರಿ ಮುಗಿಸುವುದಾಗಿ ಕಾಮ ಗಾರಿ ಟೆಂಡರ್‌ ಪಡೆದಿರುವ ಬಿಎಸ್‌ಆರ್‌ ಕಂಪನಿ ತಿಳಿಸಿದೆ.

ಮಳೆ ಉತ್ತಮವಾಗಿ ಸುರಿಯುತ್ತಿರುವುದರಿಂದ ಶ್ವ ಪ್ರಸಿದ್ಧ ದ್ವಾರಸಮುದ್ರ ಕೆರೆಗೆ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಹೂವಿನ ಜತೆ ನಾರು ಸ್ವರ್ಗ ಸೇರಿತ್ತು ಎಂಬಂತೆ ಕೆರೆ ತುಂಬಲು ಏತನೀರಾವರಿ ಯೋಜನೆ ಕೂಡ ಸಹಕಾರಿಯಾಗಿದೆ. ಮಳೆ ಮತ್ತು ಏತನೀರಾವರಿ ಯೋಜನೆ ಸೇರಿ ದ್ವಾರಸಮುದ್ರ ಕೆರೆವರ್ಷದಲ್ಲಿ ಎರಡನೇ ಬಾರಿ ತುಂಬಿದೆ. ಈ ಭಾಗದ ರೈತರು ದಶಕಗಳಿಂದ ಕಾಯುತ್ತಿರುವ ರಣಘಟ್ಟ ಯೋಜನೆ ನನಸು ಮಾಡುವದೇ ನನ್ನ ಗುರಿ – ಕೆ.ಎಸ್‌.ಲಿಂಗೇಶ್‌, ಬೇಲೂರು ಕ್ಷೇತ್ರ ಶಾಸಕ

 

– ಡಾ. ಎಂ.ಸಿ ಕುಮಾರ್‌

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Revanna 2

BJP ಸ್ಥಳೀಯ ಮುಖಂಡರ ಅಸಹಕಾರ: ಬಿಎಸ್‌ವೈ ಬಳಿ ರಕ್ಷಣೆಗೆ ಮೊರೆಯಿಟ್ಟ ಎಚ್‌.ಡಿ.ರೇವಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.