ಪೂರ್ವ ಮುಂಗಾರು ವಿಫ‌ಲ: ತಾಲೂಕಿಗೆ ಬರದ ಭೀತಿ

ಈ ವರ್ಷ ಶೇ.23ರಷ್ಟು ಮಳೆ ಕೊರತೆ, ಬಿತ್ತನೆ ಕಾರ್ಯದಲ್ಲಿ ತೀವ್ರ ಹಿನ್ನಡೆ

Team Udayavani, May 16, 2019, 10:42 AM IST

has-2

ಚನ್ನರಾಯಪಟ್ಟಣ: ಸತತ ಆರು ವರ್ಷದ ಬರಗಾಲದಿಂದ ತತ್ತರಿಸಿರುವ ತಾಲೂಕಿನಗೆ ಪ್ರಸಕ್ತ 2019ನೇ ಸಾಲಿನಲ್ಲಿಯೂ ಪೂರ್ವ ಮುಂಗಾರು ಕೈಕೊಟ್ಟ ಪರಿಣಾಮ ಮತ್ತೂಮ್ಮೆ ಬರದ ಭೀತಿ ಎದುರಾಗುವ ಲಕ್ಷಣಗಳು ಗೋಚರವಾಗುತ್ತಿದೆ.

ಮಳೆ ಕೊರತೆ: ತಾಲೂಕಿನಲ್ಲಿ ಪೂರ್ವ ಮುಂಗಾರು ವಾಡಿಕೆಯಂತೆ 86 ಮಿ.ಮೀ. ಮಳೆಯಾಗಬೇಕಿತ್ತು ಆದರೆ 66 ಮಿ.ಮೀ. ಮಾತ್ರ ಮಳೆಯಾಗಿದ್ದು ಶೇ.23 ರಷ್ಟು ಮಳೆ ಕೊರತೆ ಉಂಟಾಗಿದ್ದು ಪೂರ್ವ ಮುಂಗಾರು ಕೂಡಾ ವೈಫ‌ಲ್ಯ ಹೊಂದಿದೆ, ತಾಲೂಕಿನ 6 ಹೋಬಳಿಯಲ್ಲಿ ಶೇಕಡಾವಾರು ಮಳೆ ಕೊರತೆ ಅಂಕಿ ಅಂಶ ಈ ರೀತಿ ಇದೆ. ಕಸಬಾ ಹೋಬಳಿಯಲ್ಲಿ ಶೇ.10ರಷ್ಟು, ಬಾಗೂರು ಶೇ.30ರಷ್ಟು, ದಂಡಿಗನಹಳ್ಳಿ ಶೇ.34, ಹಿರೀಸಾವೆ ಶೇ.32, ನುಗ್ಗೇಹಳ್ಳಿ ಶೇ.21 ಹಾಗೂ ಶ್ರವಣಬೆಳಗೊಳ ಹೋಬಳಿ ಶೇ.10 ರಷ್ಟು ಮೈನಸ್‌ ಮಳೆಯಾಗಿದೆ.

ಬಿತ್ತನೆಯಲ್ಲಿ ಹಿನ್ನೆಡೆ: ಮಳೆ ಕೊರತೆಯಿಂದಾಗಿ ಪೂರ್ವ ಮುಂಗಾರು ಬೆಳೆಗಳ ಬಿತ್ತನೆಗೆ ಹಿನ್ನಡೆಯಾಗಿದೆ, ಈಗಾಗಲೇ ತಾಲೂಕಿ ನಲ್ಲಿ ಎರಡು ಬಾರಿ ವರಣನ ಆಗಮನದಿಂದ ರೈತರು ಸಂತಸ ಪಟ್ಟು ತಮ್ಮ ಕೃಷಿ ಭೂಮಿ ಅಣಿಮಾಡಿ ಬಿತ್ತನೆಗೆ ಸಕಲ ರೀತಿಯಲ್ಲಿ ಸಿದ್ಧರಾಗಿ ಮಳೆಯನ್ನು ಎದುರು ನೋಡುತ್ತಿದ್ದಾರೆ. ಒಂದು ವಾರದಲ್ಲಿ ಮಳೆ ಬಾರದಿದ್ದರೆ ತಾಲೂಕಿನಲ್ಲಿ ಧಾನ್ಯ ಬೆಳೆ ಮಾಡುವುದನ್ನು ರೈತ ಕೈ ಬಿಟ್ಟು ಬರದ ಭೀತಿಗೆ ಸಿಲುಕಲಿದ್ದಾನೆ.

ಈ ಬಾರಿ ಧಾನ್ಯ ಬಿತ್ತನೆಯಾಗಿಲ್ಲ್ಲ: ತಾಲೂಕಿ ನಲ್ಲಿ 2,700 ಹೆಕ್ಟೇರ್‌ ಪ್ರದೇಶದಲ್ಲಿ 185 ಹೆಕ್ಟೇರ್‌ನಲ್ಲಿ ಮಾತ್ರ ಬಿತ್ತನೆಯಾಗಿದ್ದು ಶೇ.4.3 ರಷ್ಟು ಮಾತ್ರ ಧಾನ್ಯಗಳ ಬಿತ್ತನೆ ಯಾಗಿದೆ, ತಾಲೂಕಿನಲ್ಲಿ 1,100 ಹೆಕ್ಟೇರ್‌ ಪ್ರದೇಶದಲ್ಲಿ ಅಲಸಂದೆ ಕೃಷಿ ಮಾಡಬೇಕಿದ್ದ ರೈತ ಕೇವಲ 120 ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮಾಡಿದ್ದಾನೆ.

ತೊಗರಿ 400 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಮಾಡಬೇಕಿದ್ದು ಇದುವರೆಗೆ ಬಿತ್ತನೆಯಾಗಿಲ್ಲ. ಉದ್ದು 600 ಕ್ಕೆ 15 ಹೆಕ್ಟೇರ್‌ ಮಾತ್ರ, ಹೆಸರು 600ಕ್ಕೆ 50 ಮಾತ್ರ, ಎಳ್ಳು 900 ಹೆಕ್ಟೇರ್‌ನಲ್ಲಿ ಬೆಳೆಯಬೇಕಿದ್ದು ಈವರೆಗೆ ಬಿತ್ತನೆಯಾಗಿಲ್ಲ.

ಬಿತ್ತನೆ ಬೀಜದ ದಾಸ್ತಾನು: ಈಗಾಗಲೆ ಸರ್ಕಾರ ಬಿತ್ತನೆ ಬೀಜವನ್ನು ತಾಲೂಕು ಕೃಷಿ ಇಲಾಖೆಗೆ ಸರಬರಾಜು ಮಾಡಿದ್ದು, ತಾಲೂಕಿನ ಎಲ್ಲಾ ರೈತ ಸಂಪರ್ಕ ಕೇಂದ್ರಗಳಿಗೆ ಬಿತ್ತನೆ ಬೀಜವನ್ನು ರವಾನೆ ಮಾಡಲಾಗಿದೆ. ಕೊಳವೆ ಬಾವಿ ಹೊಂದಿರುವವರನ್ನು ಹೊರತುಪಡಿಸಿದರೆ ಮಳೆ ಕೈಕೊಟ್ಟಿರುವುದ ರಿಂದ ಬಿತ್ತನೆ ಬೀಜ ಪಡೆಯಲು ರೈತರು ಕೃಷಿ ಇಲಾಖೆಗೆ ಆಗಮಿಸದೆ ಇರುವುದಿಂದ ದಾಸ್ತಾನು ಇಲಾಖೆಯಲ್ಲಿ ಉಳಿದಿದೆ.

ಮುಂಗಾರು ಎದುರು ನೋಡುತ್ತಿದ್ದಾನೆ ರೈತ: ಪೂರ್ವ ಮುಂಗಾರು ಉತ್ತಮವಾಗಿ ಆಗಿದ್ದರೆ ತಾಲೂಕಿನ ರೈತರು ಧಾನ್ಯ ಬೆಳೆ ಗಳನ್ನು ಮಾಡಿ ಮನೆ ವೆಚ್ಚಕ್ಕೆ ಹಣ ನೋಡು ತ್ತಿದ್ದ ಹಾಗೂ ರಾಸುಗಳ ಮೇವಿಗಾಗಿ ಜೋಳ ಬೆಳೆಯಲು ಮುಂದಾಗುತ್ತಿದ್ದರು.

ಆದರೆ ಪೂರ್ವ ಮುಂಗಾರು ಸಂಪೂರ್ಣ ಕೈಕೊಟ್ಟಿದೆ ಹಾಗಾಗಿ ವಿಧಿ ಇಲ್ಲದೆ ಜೂನ್‌ ಮೊದಲ ವಾರ ಮುಂಗಾರನ್ನು ಎದುರು ನೋಡುವಂತಾಗಿದೆ. ಮುಂಗಾರು ಸಕಾಲಕ್ಕೆ ಆಗದೆ ವೈಫ‌ಲ್ಯವಾದರೆ ಮತ್ತೂಂದು ಬರವನ್ನು ಎದುರಿಸಲು ತಾಲೂಕು ಆಡಳಿತ ಸಕಲ ಸಿದ್ಧತೆ ನಡೆಸಬೇಕಿದೆ.

ತೋಟಗಾರಿಗೆ ಬಿತ್ತನೆ ಪ್ರಮಾಣ ಕುಂಠಿತ

ಪೂರ್ವ ಮುಗಾರು ಕೈ ಕೊಟ್ಟಿರುವು ದರಿಂದ ಬಿತ್ತನೆ ಕಾರ್ಯ ಕುಂಠಿತ ವಾಗಿದೆ. ತೋಟಗಾರಿಕೆ ಬೆಳೆಯಾದ ಆಲೂಗಡ್ಡೆ ಯನ್ನು ದಂಡಿಗನಹಳ್ಳಿ, ಬಾಗೂರು ಹೋಬಳಿಯಲ್ಲಿ ಹೆಚ್ಚು ಬೆಳೆಯುತ್ತಿದ್ದು ಕಸಬಾ-ನುಗ್ಗೇಹಳ್ಳಿ ಹೋಬಳಿಯ ಕೆಲ ಗ್ರಾಮ ಸೇರಿದಂತೆ 900 ಹೆಕ್ಟೇರ್‌ ಕೃಷಿ ಭೂಮಿಯಲ್ಲಿ ಬಿತ್ತನೆ ಆಗಬೇಕಿತ್ತು. ಇದುವರೆಗೆ ಯಾವುದೇ ಪ್ರದೇಶದಲ್ಲಿ ಬಿತ್ತನೆಯಾಗಿಲ್ಲ. ಟೊಮೆಟೋ 220 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗ ಬೇಕಿದ್ದು, ಕೊಳವೆ ಬಾವಿ ಹೊಂದಿರುವ 125 ಹೆಕ್ಟೇರ್‌ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ. ಮೆಣಸಿನಕಾಯಿ 200 ಹೆಕ್ಟೇರ್‌ಗೆ ಕೇವಲ 60 ಹೆಕ್ಟೇರ್‌ನಲ್ಲಿ ಮಾತ್ರ ರೈತ ಬೆಳೆದಿದ್ದಾನೆ.
ಮೇ 15ರ ಒಳಗೆ ತಾಲೂಕಿನಲ್ಲಿ ಎರಡೂಮೂರು ಹದ ಮಳೆಯಾಗ ಬೇಕಿತ್ತು. ಆದರೆ ಕೇವಲ ಒಂದು ಹದ ಮಳೆಯಾಗಿರುವುದರಿಂದ ಬಿತ್ತನೆಯಲ್ಲಿ ಕುಂಠಿತವಾಗಿದೆ. ಮುಂದಿನ 15 ದಿವಸ ದಲ್ಲಿ ಮಳೆಯಾಗದೆ ಹೋದರೆ ತೆಂಗಿನ
ಮರಗಳಿಗೆ ನೀರಿನ ಕೊರತೆ ಉಂಟಾಗು ವುದಲ್ಲದೆ ಇತರ ತೋಟಗಾರಿಕೆ ಬೆಳೆ ಗಳನ್ನು ಮಾಡಲು ಸಾಧ್ಯವಾಗುವುದಿಲ್ಲ.
● ಕೆ.ಬಿ.ಸತೀಶ್‌, ಹಿರಿಯ, ಸಹಾಯಕ ನಿರ್ದೇಶಕರು ತೋಟಗಾರಿಕೆ ಇಲಾಖೆ
ಈಗಾಗಲೆ ಜಿಲ್ಲಾಡಳಿತ ಪೂರ್ವ ಮುಂಗಾರು ಬಳೆಯ ಬಿತ್ತನೆ ಬೀಜ, ಕೃಷಿಗೆ ಅಗತ್ಯ ಔಷಧಿ, ಗೊಬ್ಬರ ವನ್ನು ಸರಬರಾಜು ಮಾಡಿದೆ. ಆದರೆ ಮಳೆ ಕೊರತೆಯಿಂದ ರೈತರು ಪಡೆ ಯಲು ಮುಂದೆ ಬಂದಿಲ್ಲ. ಈ ವಾರದಲ್ಲಿ ಮಳೆಯಾಗದಿದ್ದರೆ ಅಲಸಂದೆ ಮೊದಲಾದ ಬೆಳೆ ಕೃಷಿ ಮಾಡುವುದನ್ನು ಮರೆಯಬೇಕಾಗುತ್ತದೆ.
● ಎಫ್.ಕೆ.ಗುರುಸಿದ್ದಪ್ಪ, ಸಹಾಯಕ ನಿರ್ದೇಶಕರು ಕೃಷಿ ಇಲಾಖೆ
ಶಾಮಸುಂದರ್‌ ಕೆ. ಅಣ್ಣೇನಹಳ್ಳಿ

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.