ವರ್ಷದಿಂದ ಪುರಸಭೆ ಆಡಳಿತಕ್ಕೆ ಗ್ರಹಣ


Team Udayavani, Sep 4, 2019, 11:33 AM IST

hasan-tdy-1

ಚನ್ನರಾಯಪಟ್ಟಣ: ಸ್ಥಳೀಯ ಸಂಸ್ಥೆಗಳ ಚುನಾವಣೆ ಫ‌ಲಿತಾಂಶ ಹೊರಬಿದ್ದು ಸೆ.3ಕ್ಕೆ ಒಂದು ವರ್ಷ ಕಳೆದರೂ ಸಹ ಈವರೆವಿಗೂ ಚುನಾಯಿತ ಪ್ರತಿನಿಧಿ ಗಳಿಗೆ ಅಧಿಕಾರ ಭಾಗ್ಯ ದೊರೆಯದೇ ಆಡಳಿತಕ್ಕೆ ಗ್ರಹಣ ಹಿಡಿದಂತಾಗಿದ್ದು, ಪುರಸಭೆ ಅಧಿಕಾರಿಗಳ ದರ್ಬಾರ್‌ ತುಸು ಜೋರಾಗಿದೆ.

ಚನ್ನರಾಯಪಟ್ಟಣದಲ್ಲಿ 23ವಾರ್ಡ್‌ಗಳ ಚುನಾ ವಣೆ ನಡೆದು ಬರೋಬ್ಬರಿ ಹನ್ನೆರಡು ತಿಂಗಳು ಕಳೆದಿದೆ. ಆದರೆ ಪುರಸಭಾ ಸದಸ್ಯರಿಗೆ ಇನ್ನೂ ಪುರ ಸಭೆಯ ಬಾಗಿಲು ತೆರೆದಿಲ್ಲ. ಇದರಿಂದಾಗಿ ಪುರಸಭೆಗೆ ಆಯ್ಕೆಯಾದ ಸದಸ್ಯರು ತೀವ್ರ ನಿರಾಶರಾಗಿದ್ದಾರೆ.

ಚನ್ನರಾಯಪಟ್ಟಣ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿಯಲ್ಲಿ ಯಾವುದೇ ಗೊಂದಲವಿಲ್ಲ. ರಾಜ್ಯದ ಕೆಲ ಪುರಸಭೆಗಳು ಮೀಸಲಾತಿಯನ್ನು ಪ್ರಶ್ನಿಸಿ ಉಚ್ಚನ್ಯಾಯಾಲಯದ ಮೆಟ್ಟಿಲು ಏರಿದ್ದಾರೆ. ಇದನ್ನೇ ಕುಂಟು ನೆಪಮಾಡಿಕೊಂಡ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ಆಡಳಿತಕ್ಕೆ ಬ್ರೇಕ್‌ ಹಾಕಿದೆ.

ಮೀಸಲಾತಿ ಯಾವಾಗ? ಸೆ.3 2018ರಂದು ಸ್ಥಳೀಯ ಸಂಸ್ಥೆಗಳ ಚುನಾವಣೆ ಫ‌ಲಿತಾಂಶ ಪ್ರಕಟ ವಾದ ದಿವಸವೇ ಸರ್ಕಾರ ಮೀಸಲಾತಿ ಪ್ರಕಟಿಸಿತ್ತು, ಇದರಲ್ಲಿ ಗೊಂದಲ ಇದೆ ಎಂದು ಮತ್ತೆ ಮರು ಪರಿಶೀಲನೆ ಮಾಡಿ ಎರಡನೇ ಬಾರಿಗೆ ಮೀಸಲಾತಿ ಪ್ರಕಟಣೆ ಮಾಡಿತು. ಪುನಃ ಮೀಸಲಾತಿಯನ್ನು ಪ್ರಶ್ನಿಸಿ ಸಾರ್ವಜನಿಕರು ನ್ಯಾಯಾಲಯದ ಮೆಟ್ಟಿಲೇರಿದ್ದರಿಂದ 2018ರ ಅ.9 ರಂದು ನ್ಯಾಯಾಲಯ ತೀರ್ಪು ನೀಡುವ ಮುನ್ನವೇ ಸರ್ಕಾರ ತನ್ನ ಅರ್ಜಿ ಯನ್ನು ಹಿಂಪಡೆದು ಮೊದಲ ಮೀಸಲಾತಿ ಪಟ್ಟಿಯನ್ನು ಮುಂದುವರಿಸಲಾಗು ವುದು ಎಂದು ಹೇಳಿತ್ತು.

ಇದನ್ನು ಪ್ರಶ್ನಿಸಿ ಮತ್ತೆ ನ್ಯಾಯಾಲಯದ ಮಟ್ಟಿಲೇರಿದ ಪರಿಣಾಮ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಆಯ್ಕೆಗೆ ಬ್ರೇಕ್‌ ಬಿದ್ದಂತಾಗಿದೆ. ಪುರಸಭೆ ಚುನಾವಣೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮೀಸಲಾತಿ ಇಷ್ಟೊಂದು ವಿಳಂಬ ನೀತಿ ಅನುರಿಸುತ್ತಿರುವುದರಿಂದ ಪುರಸಭೆಗೆ ಪ್ರಥಮ ಬಾರಿಗೆ ಆಯ್ಕೆಯಾದ ಪ್ರತಿನಿಧಿಗಳು ಪುರಸಭೆ ಪ್ರವೇಶಿಸಲು ಹವಣಿಸುತ್ತಿದ್ದಾರೆ.

ಸಮಸ್ಯೆಗಳ ಸರಮಾಲೆ: ಕಳೆದ ಒಂದು ವರ್ಷದಿಂದ ಆಡಳಿತ ವ್ಯವಸ್ಥೆ ಅಸ್ತಿತ್ವಕ್ಕೆ ಬಾರದ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕೆಲಸಗಳನ್ನು ತೀವ್ರಗತಿಯಲ್ಲಿ ನಡೆಸುವಲ್ಲಿ ಅಧಿಕಾರಿ ಗಳು ವಿಫ‌ಲರಾಗಿದ್ದಾರೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ವಾರ್ಡ್‌ಗಳಲ್ಲಿ ಸಕಾಲಕ್ಕೆ ನೀರಿನ ವ್ಯವಸ್ಥೆ ನೀಡುತ್ತಿಲ್ಲ. ರಸ್ತೆ ಬದಿಯಲ್ಲಿ ಕಸ ಬಿದ್ದಿರುವುದು. ರಾತ್ರಿಯಾದರೂ ಬೀದಿ ದೀಪಗಳು ಉರಿಯುತ್ತಿಲ್ಲ ಹೀಗೆ ಸಮಸ್ಯೆಗಳನ್ನು ಸಾರ್ವಜನಿಕರು ಎದುರಿಸುವಂತಾಗಿದೆ.

ಅಧಿಕಾರಿಗಳ ದರ್ಬಾರ್‌: ರಾಜ್ಯದ ಕೆಲಸ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪಟ್ಟಿ ಹೈಕೋರ್ಟ್‌ನಲ್ಲಿ ಇತ್ಯರ್ಥ ಆಗಬೇಕಿರುವುದರಿಂದ ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಆಡಳಿತಾಧಿಕಾರಿಗಳನ್ನು ನೇಮಿಸಲಾಗಿದೆ. ಚುನಾಯಿತ ಜನ ಪ್ರತಿನಿಧಿಗಳ ಆಡಳಿತ ವ್ಯವಸ್ಥೆ ಇಲ್ಲದ ಕಾರಣ ಸದ್ಯ ಪುರಸಭೆಯಲ್ಲಿ ಅಧಿಕಾರಿಗಳದ್ದೇ ದರ್ಬಾರ್‌ ನಡೆಯುತ್ತಿದೆ. ಇದು ಆಡಳಿತ ವ್ಯವಸ್ಥೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಮೇಲೆ ಪರಿಣಾಮ ಬೀರುತ್ತಿದೆ.

ಬಜೆಟ್ ಮಂಡನೆ ಆಗಿಲ್ಲ: ಪುರಸಭೆಯಲ್ಲಿ ಸದಸ್ಯರು ಇಲ್ಲದೇ ಇರುವುದರಿಂದ ಪ್ರಸಕ್ತ ವರ್ಷದ ಬಜೆಟ್ ಮಂಡನೆಯಾಗಿಲ್ಲ. ಅಧಿಕಾರಿಗಳೇ ಪುರಸಭೆ ಆಯವ್ಯಯ ಮಂಡನೆ ಮಾಡಬೇಕಿತ್ತು. ಆದರೆ ಇವರನ್ನು ಪ್ರಶ್ನೆ ಮಾಡುವವರಿಲ್ಲದೇ ಇರುವುದರಿಂದ ಪುರಸಭೆಗೆ ತೆರಿಗೆ ರೂಪದಲ್ಲಿ ಹಾಗೂ ಸರ್ಕಾರದ ವಿವಿಧ ಯೋಜನೆಯಲ್ಲಿ ಹರಿದು ಬಂದಿರುವ ಅನುದಾನ ಹಾಗೂ ಆದಾಯವೆಷ್ಟು? ಇದನ್ನು ಸರಿಯಾಗಿ ವೆಚ್ಚ ಮಾಡಲಾಗಿದೆಯೇ ಎಂಬುದನ್ನು ಸಾರ್ವಜನಿಕವಾಗಿ ಮಂಡನೆ ಮಾಡುವಲ್ಲಿ ಅಧಿಕಾರಿಗಳು ವಿಫ‌ಲರಾಗಿದ್ದಾರೆ.

ಜೆಡಿಎಸ್‌ ಅಧಿಕಾರ: ಪುರಸಭೆ 23 ವಾರ್ಡ್‌ಗಳಲ್ಲಿ ಜೆಡಿಎಸ್‌ 15 ಸ್ಥಾನ, ಕಾಂಗ್ರೆಸ್‌ 8 ಸ್ಥಾನ ಪಡೆದಿದೆ. ಸರ್ಕಾರ ಯಾವುದೇ ಮೀಸಲಾತಿ ಘೋಷಣೆ ಮಾಡಿದರೂ ಜೆಡಿಎಸ್‌ ಪಕ್ಷ ಅಧಿಕಾರ ಹಿಡಿಯು ವುದು ಶತಸಿದ್ಧ. ಸಾಮಾನ್ಯ ಮಹಿಳೆ ಅಧ್ಯಕ್ಷ ಸ್ಥಾನಕ್ಕೆ ಮೀಸಲಾಗಿದೆ. ಉಪಾಧ್ಯಕ್ಷ ಸ್ಥಾನ ಬಿಸಿಎಂ(ಬಿ)ಗೆ ಮೀಸಲಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಮೂರು ಮಂದಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ 2 ಮಂದಿ ಪೈಪೋಟಿಯಲ್ಲಿದ್ದಾರೆ.

 

● ಶಾಮಸುಂದರ್‌ ಕೆ. ಅಣ್ಣೇನಹಳ್ಳಿ

ಟಾಪ್ ನ್ಯೂಸ್

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.